ಕನ್ನಡಪ್ರಭ ವಾರ್ತೆ ಉಪ್ಪಿನಂಗಡಿ
ಆ್ಯಸಿಡ್ ಎರಚಿದ ಆರೋಪಿ, ಕೇರಳದ ಮಲಪುರಂ ಜಿಲ್ಲೆಯ ನೆಳಂಬೂರು ನಿವಾಸಿ ಎಂಬಿಎ ವಿದ್ಯಾರ್ಥಿ ಅಬೀನ್ (೨೩) ನನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿರುವ ಮೂವರು ಸಹಪಾಠಿ ವಿದ್ಯಾರ್ಥಿನಿಯರಿಗೆ ಗಾಯವಾಗಿದೆ. ಓರ್ವ ವಿದ್ಯಾರ್ಥಿನಿಗೆ ಹೆಚ್ಚಿನ ಗಾಯವಾಗಿದೆ ಇನ್ನುಳಿದ ಇಬ್ಬರಿಗೆ ಸುಟ್ಟ ಗಾಯವಾಗಿದೆ ಎಂದು ತಿಳಿದುಬಂದಿದೆ. ಮೂವರು ಗಾಯಳುಗೂ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಕರಣ ವಿವರ:ಆರೋಪಿ ಅಬೀನ್ ಸೋಮವಾರ ಬೆಳಗ್ಗೆ ಕಡಬ ಕಾಲೇಜಿನ ಸಮವಸ್ತ್ರ ಹೋಲುವ ಬಿಳಿ ಅಂಗಿ, ನೀಲಿ ಪ್ಯಾಂಟ್ ಧರಿಸಿ, ಟೋಪಿ, ಮಾಸ್ಕ್ ಧರಿಸಿಕೊಡು ಕಾಲೇಜು ಆವರಣದೊಳಗಡೆ ಆಗಮಿಸಿದ್ದ. ಪರೀಕ್ಷೆಗೆ ಸಿದ್ದರಾಗುತ್ತಿದ್ದ ಇತರ ವಿದ್ಯಾರ್ಥಿಗಳ ಜೊತೆ ಜಗುಲಿಯಲ್ಲಿ ಕುಳಿತುಕೊಂಡಿದ್ದ. ಈ ಪರೀಕ್ಷಾ ಕೇಂದ್ರಕ್ಕೆ ಇತರ ಕಾಲೇಜಿನಿಂದ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಬಂದಿರುವುದರಿಂದ ಯಾರು ಕೂಡ ಈತನ ಬಗ್ಗೆ ಅನುಮಾನಗೊಂಡಿರಲಿಲ್ಲ.
ಒಂದೇ ಊರಿನವರು:
ಸ್ಥಳಕ್ಕೆ ಪುತ್ತೂರು ಉಪವಿಭಾಗಾಧಿಕಾರಿ ಜೊಬಿನ್ ಮಹಾಪಾತ್ರ, ಪುತ್ತೂರು ಡಿವೈಎಸ್ಪಿ ಅರುಣ್ ನಾಗೇ ಗೌಡ, ಉಪ್ಪಿನಂಗಡಿ ವೃತ್ತ ನಿರೀಕ್ಷಕ ರವಿ ಬಿ ಎಸ್, ಕಡಬ ತಹಸೀಲ್ದಾರ್ ಪ್ರಭಾಕರ ಖಜೂರೆ, ಕಡಬ ಎಸ್ ಐ ಅಭಿನಂದನ್ ಎಂ.ಎಸ್. ಮೊದಲಾದವರು ಇದ್ದರು.
ಬೆಳಗ್ಗೆ ಗಂಟೆ ೯.೪೫ ಆಸುಪಾಸಿನಲ್ಲಿ ಘಟನೆ ನಡೆದಿದ್ದು, ಈ ಸುದ್ದಿ ತಿಳಿಯುತ್ತಿದ್ದಂತೆ ಕಾಲೇಜಿನತ್ತ ಸಾರ್ವಜನಿಕರು ತಂಡೋಪ ತಂಡವಾಗಿ ಆಗಮಿಸಿದ್ದಾರೆ. ವಿವಿಧ ಪಕ್ಷಗಳ ಜನಪ್ರತಿನಿಧಿಗಳು ಘಟನೆಯನ್ನು ಖಂಡಿಸಿದರು. ---ಸಾಂಗವಾಗಿ ನಡೆದ ಪರೀಕ್ಷೆಸೋಮವಾರ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಗಣಿತಶಾಸ್ತ್ರ ಪರೀಕ್ಷೆ ನಡೆಯುತ್ತಿತು. ಘಟನೆ ನಡೆದರೂ ಇನ್ನುಳಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಸರಾಗವಾಗಿ ನಡೆಯಿತು. ಶಾಲಾ ಆವರಣದಲ್ಲಿ ಘಟನೆ ನಡೆದ ಕಾರಣ ಕೊಠಡಿಯೊಳಗೆ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಪೊಲೀಸರು ಎಚ್ಚರಿಕೆ ವಹಿಸಿದ್ದರು.ಘಟನೆಯಿಂದ ಯಾರು ವಿಚಲಿತರಾಗಬೇಡಿ. ವಿದ್ಯಾರ್ಥಿಗಳು ಭವಿಷ್ಯದ ದೃಷ್ಟಿಯಿಂದ ನಿರ್ಭಿತಿಯಿಂದ ಪರೀಕ್ಷೆಯನ್ನು ಎದುರಿಸಿ, ಜೊತೆಗೆ ಪಾಲಕರು ಯಾವೂದೆ ಆತಂಕ ಪಡುವ ಅಗತ್ಯವಿಲ್ಲ. ಮುಂದಿನ ಪರೀಕ್ಷೆಗೆಳು ಎಂದಿನಂತೆ ನಡೆಯುತ್ತವೆ ಎಂದು ಸ್ಥಳಕ್ಕೆ ಆಗಮಿಸಿದ ಪದವಿ ಪೂರ್ವ ಶಿಕ್ಷಣ ಇಲಾಖಾ ಉಪನಿರ್ದೇಶಕ ಸಿ.ಡಿ. ಜಯಣ್ಣ ಮಾಧ್ಯಮದ ಮೂಲಕ ವಿನಂತಿಸಿದ್ದಾರೆ.---
ವಿದ್ಯಾರ್ಥಿಗಳಿಗೆ ಪರೀಕ್ಷೆ ಮುಗಿದ ಬಳಿಕ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳೊಂದಿಗೆ ಡಿವೈಎಸ್ಪಿ ಅರುಣ್ ನಾಗೇ ಗೌಡ ಸಂವಾದ ನಡೆಸಿದರು. ಘಟನೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ವಶಕ್ಕೆ ಪಡೆದ ಆರೋಪಿತನನ್ನು ತೀವ್ರ ವಿಚಾರಣೆ ನಡೆಸಿ ಸೂಕ್ತ ಕ್ರಮಕೈಗೊಳ್ಳಾಗುವುದು ಎಂದರು. ಪ್ರತ್ಯಕ್ಷದರ್ಶಿ ವಿದ್ಯಾರ್ಥಿಗಳಿಂದ ಘಟನೆಯ ಬಗ್ಗೆ ಪೊಲೀಸರು ಹೇಳಿಕೆ ಪಡೆದುಕೊಂಡರು. ಪ್ರಾಂಶುಪಾಲ ವಾಸುದೇವ ಕೋಲ್ಪೆ ಮತ್ತಿತರರಿದ್ದರು.
-----ಬಾಟಲ್ ವಶಕ್ಕೆ
----ಸುಳ್ಯ ಶಾಸಕಿ ಭೇಟಿ
ಸಂತ್ರಸ್ತೆಯರು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಗೆ ಭೇಟಿ ನೀಡಿದ ನೀಡಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದರು.