ನಕಲಿ ದಾಖಲೆ ಸೃಷ್ಟಿಸುವ ಮೂಲಕ ಸರ್ಕಾರಿ ಜಮೀನು ಸ್ವಾಧೀನ: ಆರೋಪ

KannadaprabhaNewsNetwork |  
Published : Oct 23, 2024, 12:46 AM IST
22ಕೆಎಂಎನ್ ಡಿ14 | Kannada Prabha

ಸಾರಾಂಶ

ಕಸಬಾ ಹೋಬಳಿ ಬೆಳವಾಡಿ ಗ್ರಾಮದ ಸರ್ವೇ ನಂ.64 ರಲ್ಲಿ ಸರ್ಕಾರಿ ಹಾಗೂ ಅರಣ್ಯ ಇಲಾಖೆಗೆ ಸೇರಿದ ಭೂಮಿ ಕಬಳಿಕೆಯಾಗಿದೆ. ತಾಲೂಕಿನ ಬೆಳಗೊಳ ಹಾಗೂ ಕಸಬಾ ಹೋಬಳಿಗಳ ಗ್ರಾಮಗಳು ಮೈಸೂರು ನಗರಕ್ಕೆ ಸಮೀಪದಲ್ಲಿರುವ ಕಾರಣ ಭೂ ಕಬಳಿಕೆಯ ಮಾಫಿಯಾ ತನ್ನ ಚಟುವಟಿಕೆ ತೀವ್ರಗೊಳಿಸಿದೆ.

ಕನ್ನಡಪ್ರಭವಾರ್ತೆ ಶ್ರೀರಂಗಪಟ್ಟಣ

ಸರ್ಕಾರಿ ಜಮೀನುಗಳನ್ನು ನಕಲಿ ದಾಖಲೆ ಮೂಲಕ ಸ್ವಾಧೀನ ಪಡಿಸಿಕೊಂಡು ಬಡಾವಣೆ ನಿರ್ಮಿಸುತ್ತಿದ್ದಾರೆ ಎಂದು ಆರೋಪಿಸಿ ಭೂಮಿ ತಾಯಿ ಹೋರಾಟ ಸಮಿತಿ ಸದಸ್ಯರು ಕ್ರಮಕ್ಕೆ ಆಗ್ರಹಿಸಿ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು.

ಪಟ್ಟಣದ ತಾಲೂಕು ಕಚೇರಿಗೆ ಸಮಿತಿ ಅಧ್ಯಕ್ಷ ಕೃಷ್ಣೇಗೌಡ, ರೈತ ಹೋರಾಟಗಾರ ಕೆ.ಎಸ್ ನಂಜುಂಡೇಗೌಡ ನೇತೃತ್ವದಲ್ಲಿ ಸದಸ್ಯರು ಹಾಗೂ ರೈತರು ತೆರಳಿ ಸರ್ಕಾರಿ ಭೂಮಿ ಉಳಿಸಿಕೊಳ್ಳುವಂತೆ ಮನವಿ ಸಲ್ಲಿಸಿ ಆಗ್ರಹಿಸಿದರು.

ನಂತರ ಕೆ.ಎಸ್. ನಂಜುಂಡೇಗೌಡ ಮಾತನಾಡಿ, ಕಸಬಾ ಹೋಬಳಿ ಬೆಳವಾಡಿ ಗ್ರಾಮದ ಸರ್ವೇ ನಂ.64 ರಲ್ಲಿ ಸರ್ಕಾರಿ ಹಾಗೂ ಅರಣ್ಯ ಇಲಾಖೆಗೆ ಸೇರಿದ ಭೂಮಿ ಕಬಳಿಕೆಯಾಗಿದೆ. ತಾಲೂಕಿನ ಬೆಳಗೊಳ ಹಾಗೂ ಕಸಬಾ ಹೋಬಳಿಗಳ ಗ್ರಾಮಗಳು ಮೈಸೂರು ನಗರಕ್ಕೆ ಸಮೀಪದಲ್ಲಿರುವ ಕಾರಣ ಭೂ ಕಬಳಿಕೆಯ ಮಾಫಿಯಾ ತನ್ನ ಚಟುವಟಿಕೆ ತೀವ್ರಗೊಳಿಸಿದೆ ಎಂದು ದೂರಿದರು.

ಹಿಡುವಳಿದಾರ ರೈತರಿಗೆ ತೊಂದರೆ ನೀಡುವುದು, ಸರ್ಕಾರಿ ಜಮೀನುಗಳನ್ನು ನಕಲಿ ದಾಖಲೆ ಸೃಷ್ಟಿಸಿ, ಸ್ವಾಧೀನ ಪಡೆಸಿಕೊಂಡು ಬಡಾವಣೆಗಳನ್ನು ನಿರ್ಮಿಸುತ್ತಿದ್ದಾರೆ. ಕಂದಾಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮತ್ತು ಆಯಾ ಕಾಲದ ಜನಪ್ರತಿನಿಧಿಗಳು ಹಾಗೂ ಅವರ ಹಿಂಬಾಲಕರು ಇಂತಹ ಅಕ್ರಮ ವ್ಯವಹಾರಗಳಿಗೆ ಸಹಕಾರ ನೀಡುತ್ತಾ ಬಂದಿರುವುದು ಅವರ ಮೌನವೇ ಸಾಕ್ಷಿಕರಿಸಿದೆ ಎಂದು ಕಿಡಿಕಾರಿದರು.

ಜೊತೆಗೆ ಸರ್ಕಾರಕ್ಕೆ ಸೇರಿದ ಎಲ್ಲಾ ವಿದಧ ಭೂಮಿಗಳ ವಿವರ ನಮ್ಮ ಬಳಿ ಇವೆ. ಸರ್ಕಾರದ ಆದೇಶದ ಪ್ರಕಾರ ಅರ್ಹ ರೈತರಿಗೆ ಮಂಜೂರಾದ ಜಮೀನನ್ನು ಬಿಟ್ಟು, ಉಳಿಕೆ ಇರಬೇಕಾದ ಸರ್ಕಾರಿ ಭೂಮಿ ವಿವರ ತಮ್ಮ ಕಂದಾಯ ಇಲಾಖೆಯಲ್ಲಿರುತ್ತದೆ. ಹಾಗಾಗಿ ತಾವು ವಿಶೇಷ ಆಸಕ್ತಿವಹಿಸಿ, ಭೂಮಿ ಕಬಳಿಕೆಯಾಗದಂತೆ ತಡೆಯಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ಕಬಳಿಕೆ ಯಾಗಿರುವ ಭೂಮಿಯನ್ನು ತೆರವುಗೊಳಿಸಿ ಸಾರ್ವಜನಿಕ ಆಸ್ತಿಯನ್ನು ಸಂರಕ್ಷಣೆ ಮಾಡುವಂತೆ ಒತ್ತಾಯಿಸಿ ಶಿರಸ್ತೇದಾರ್ ಪ್ರಸನ್ನ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ವೇಳೆ ಸಮಿತಿಯ ಎಂ.ವಿ. ಕೃಷ್ಣ, ಎಚ್.ಶಿವಣ್ಣ, ವಿ.ರವೀಂದ್ರ, ಕೆ.ದೇವರಾಜು, ಪಿ.ಸುರೇಶ್, ರಾಮಚಂದ್ರ, ಎಂ.ನಾಗರಾಜು, ಸಿದ್ದೇಗೌಡ, ಮಹದೇವು, ರಾಮಕೃಷ್ಣ, ಕೆಂಪೇಗೌಡ, ಪುಟ್ಟಮಾದು, ಹನುಮಂತ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ