ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ: ಪಿಆರ್ಒ ಮತ್ತು ಎಪಿಆರ್ಒಗಳಿಗೆ 2ನೇ ಹಂತದ ತರಬೇತಿ..ಕನ್ನಡಪ್ರಭ ವಾರ್ತೆ ಕೊಪ್ಪಳ
ಸೋಮವಾರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ-2024ರ ಸಂಬಂಧ ಜಿಲ್ಲೆಯ ಎಲ್ಲ ಪಿಆರ್ಒ ಹಾಗೂ ಎಪಿಆರ್ಒಗಳಿಗೆ ಆಯೋಜಿಸಿದ್ದ 2ನೇ ಹಂತದ ತರಬೇತಿ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಪಿಆರ್ಒ ಮತ್ತು ಎಪಿಆರ್ಒಗಳು ಮತದಾನದ ದಿನದಂದು ನಿಗದಿತ ಸಮಯಕ್ಕೆ ನಿಯೋಜಿತ ಮತಗಟ್ಟೆಗೆ ಹಾಜರಾಗಬೇಕು. ಯಾವುದೇ ರೀತಿಯ ನಿರ್ಲಕ್ಷ್ಯತನ ತೋರದೆ ಚುನಾವಣಾ ಆಯೋಗ ನೀಡಿದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಒತ್ತಡಮುಕ್ತವಾಗಿ ಹಾಗೂ ಶಾಂತಿಯುತವಾಗಿ ಮತದಾನ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸಿಬ್ಬಂದಿಗೆ ತಿಳಿಸಿದರು.ಜಿಲ್ಲಾ ಮಟ್ಟದ ಮಾಸ್ಟರ್ ಟ್ರೈನರ್ ವಿದ್ಯಾಧರ ಮೇಘರಾಜ ಮಾತನಾಡಿ, ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯು ಜೂ. 3ರಂದು ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು 24 ಮತಗಟ್ಟೆ ಸ್ಥಾಪಿಸಲಾಗಿದ್ದು, ಎಲ್ಲ ಮತಗಟ್ಟೆಗಳ ಪಿಆರ್ಒ ಮತ್ತು ಎಪಿಆರ್ಒಗಳು ಹೇಗೆ ಕಾರ್ಯ ನಿರ್ವಹಿಸಬೇಕು ಎಂದು ತರಬೇತಿ ನೀಡಿದರು. ಮತಗಟ್ಟೆ ಅಧಿಕಾರಿಗಳು ಮುಕ್ತ, ನ್ಯಾಯಸಮ್ಮತ, ಶಾಂತಿಯುತ ಮತದಾನ ನಡೆಸಲು ಯಾವ ರೀತಿ ಕರ್ತವ್ಯ ನಿರ್ವಹಿಸಬೇಕು ಎಂಬುವುದರ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕೊಪ್ಪಳ ತಹಸೀಲ್ದಾರ ವಿಠ್ಠಲ್ ಚೌಗಲಾ, ಜಿಲ್ಲಾ ತರಬೇತಿ ಸಂಸ್ಥೆ ಪ್ರಾಂಶುಪಾಲ ಕೃಷ್ಣಮೂರ್ತಿ ದೇಸಾಯಿ, ಚುನಾವಣಾ ತಹಸೀಲ್ದಾರ ರವಿಕುಮಾರ್ ವಸ್ತ್ರದ್ ಸೇರಿದಂತೆ ಜಿಲ್ಲೆಯ ಎಲ್ಲ ಪಿಆರ್ಒ ಮತ್ತು ಎಪಿಆರ್ಒಗಳು ಉಪಸ್ಥಿತರಿದ್ದರು.