ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕುಡಿಯುವ ನೀರು ಪೂರೈಕೆ ಹಾಗೂ ಬರ ನಿರ್ವಹಣೆ ಕುರಿತ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಕುಡಿಯುವ ನೀರು ಒಂದು ದಿನವೂ ವ್ಯತ್ಯಯವಾಗದಂತೆ ತಾಲೂಕುಗಳ ಇಒಗಳು, ತಹಸೀಲ್ದಾರರು ಮತ್ತು ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಕ್ರಮ ವಹಿಸಬೇಕು ಎಂದು ತಿಳಿಸಿದರು.
ಸಮಸ್ಯಾತ್ಮಕ ಗ್ರಾಮಗಳು ಮತ್ತು ವಾರ್ಡುಗಳ ಪಟ್ಟಿ ಈಗಾಗಲೇ ತಯಾರಿಸಿದ್ದೀರಿ. ಮತ್ತೆ ಇನ್ನೆಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದೆಂದು ಮತ್ತೊಮ್ಮೆ ಪರಿಶೀಲಿಸಬೇಕು. ಗ್ರಾಮೀಣ ಕುಡಿಯುವ ನೀರು ಇಲಾಖೆಯವರು ಇಒ, ತಹಸೀಲ್ದಾರರು ಇತರೆ ಅಧಿಕಾರಿಗಳ ಸಮನ್ವಯದೊಂದಿಗೆ ಪರಿಣಾಮಕಾರಿಯಾಗಿ ಬರ ನಿರ್ವಹಣೆಯಲ್ಲಿ ತೊಡಗಿಕೊಳ್ಳಬೇಕು ಎಂದರು. ನೀರಿನ ಸಂಗ್ರಹಣೆಗಳು, ಜಲಾಶಯಗಳು, ಬಹುಗ್ರಾಮ ನೀರಿನ ಯೋಜನೆಗಳಡಿ ನೀರು ಪೋಲು ಮಾಡಬಾರದು. ನೀರಿನ ಬಳಕೆ ಕುರಿತು ಸಮರ್ಪಕವಾಗಿ ಯೋಜಿಸಿ ಅಧಿಕಾರಿಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸಿ ಎಂದು ತಿಳಿಸಿದರು.ಜಾನುವಾರುಗಳಿಗೆ ಕುಡಿಯುವ ನೀರಿನ ಹೊಂಡ ನಿರ್ಮಿಸಿ:
ನರೇಗಾದಡಿ ಕೆಲಸ ನೀಡಿ:
ಜಿಪಂ ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ ಮಾತನಾಡಿ, ತಾಲೂಕು ಇಒಗಳು, ತಹಸೀಲ್ದಾರ್ಗಳು ಕುಡಿಯುವ ನೀರಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಬಾರದಂತೆ ಕ್ರಮ ವಹಿಸಬೇಕು. ಅಧಿಕಾರಿಗಳು ಸ್ವತಃ ಸಮಸ್ಯಾತ್ಮಕ ಗ್ರಾಮಗಳಿಗೆ ಭೇಟಿ ನೀಡಿ ಬಗೆಹರಿಸಬೇಕು. ಎನ್ಡಿಆರ್ಎಫ್ ಅನುದಾನ ಲಭ್ಯತೆ ಇದ್ದು , ಕುಡಿಯುವ ನೀರಿನ ಸಮಸ್ಯೆ ಇರುವೆಡೆ 24 ಗಂಟೆಯೊಳಗೆ ಪರಿಹಾರ ನೀಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಉಪವಿಭಾಗಾಧಿಕಾರಿ ಯತೀಶ್ ಮತ್ತಿತರರಿ ದ್ದರು.
ಚುನಾವಣಾ ನೀತಿ ಸಂಹಿತೆ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಕಾಮಗಾರಿಗೆ ಅಡ್ಡಿಪಡಿಸಲ್ಲ. ಚುನಾವಣಾ ಕರ್ತವ್ಯದೊಂದಿಗೆ ಕುಡಿಯುವ ನೀರಿನ ನಿರ್ವಹಣೆಗೆ ಹೆಚ್ಚಿನ ಗಮನವನ್ನು ಅಧಿಕಾರಿಗಳು ನೀಡಬೇಕು. ಜೂನ್ವರೆಗೆ ಕುಡಿಯುವ ನೀರಿಗೆ ತೊಂದರೆ ಆಗದಂತೆ ಎಚ್ಚರಿಕೆ ವಹಿಸಬೇಕು. ಗ್ರಾಮ ಪಂಚಾಯ್ತಿ ಮಟ್ಟದಲ್ಲೇ ಟೆಂಡರ್ ಕರೆದು ಟ್ಯಾಂಕರ್ಗಳ ಮೂಲಕ ನೀರು ಸರಬರಾಜು ಮಾಡುಬಹುದಾಗಿದ್ದು ಪಿಡಿಒಗಳು ಕ್ರಮ ವಹಿಸಬೇಕು