ಕರ್ತವ್ಯ ನಿರ್ಲಕ್ಷ್ಯ ಮಾಡುವ ವೈದ್ಯರ ಮೇಲೆ ಕ್ರಮ

KannadaprabhaNewsNetwork |  
Published : Oct 30, 2024, 12:38 AM IST
ಆರೋಗ್ಯರಕ್ಷಾ ಸಮಿತಿ ಸಭೆ ನಡೆಯಿತು | Kannada Prabha

ಸಾರಾಂಶ

ವೈದ್ಯರು ಕಡ್ಡಾಯವಾಗಿ ಸಮಯಪಾಲನೆ ಮಾಡಬೇಕು. ಎಷ್ಟೋ ಹೊತ್ತಿಗೆ ಕರ್ತವ್ಯಕ್ಕೆ ಬರುವುದು, ಹೋಗುವುದು ಮಾಡಲು ಸರ್ಕಾರಿ ಆಸ್ಪತ್ರೆ ಛತ್ರವಲ್ಲ. ಸಮಯಪಾಲನೆ, ಕರ್ತವ್ಯ ನಿರ್ಲಕ್ಷ್ಯ ಮಾಡುವ ವೈದ್ಯರ ವರ್ತನೆ ಸಹಿಸುವುದಿಲ್ಲ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ಕನ್ನಡಪ್ರಭ ವಾರ್ತೆ ಸಾಗರ

ವೈದ್ಯರು ಕಡ್ಡಾಯವಾಗಿ ಸಮಯಪಾಲನೆ ಮಾಡಬೇಕು. ಎಷ್ಟೋ ಹೊತ್ತಿಗೆ ಕರ್ತವ್ಯಕ್ಕೆ ಬರುವುದು, ಹೋಗುವುದು ಮಾಡಲು ಸರ್ಕಾರಿ ಆಸ್ಪತ್ರೆ ಛತ್ರವಲ್ಲ. ಸಮಯಪಾಲನೆ, ಕರ್ತವ್ಯ ನಿರ್ಲಕ್ಷ್ಯ ಮಾಡುವ ವೈದ್ಯರ ವರ್ತನೆ ಸಹಿಸುವುದಿಲ್ಲ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಮಂಗಳವಾರ ಆರೋಗ್ಯ ರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಉತ್ತಮ ಹೆಸರು ಇದೆ. ಅದನ್ನು ಹಾಳು ಮಾಡಬೇಡಿ. ಎಲ್ಲ ವೈದ್ಯ ಸಿಬ್ಬಂದಿಗಳು ಉತ್ತಮ ಕೆಲಸ ಮಾಡುತ್ತಿದ್ದಾರೆ. ಒಂದಿಬ್ಬರು ಮಾಡುವ ತಪ್ಪಿನಿಂದ ಇಡೀ ವ್ಯವಸ್ಥೆ ಮೇಲೆ ಕೆಟ್ಟಹೆಸರು ಬರುವಂತೆ ಮಾಡಬೇಡಿ ಎಂದು ತಿಳಿ ಹೇಳಿದರು. ವೈದ್ಯ ಡಾ. ನಾಗೇಂದ್ರಪ್ಪ, ಡಾ. ಸುರೇಶ್ ಅವರನ್ನು ತರಾಟೆಗೆ ತೆಗೆದುಕೊಂಡ ಶಾಸಕರು, ನಿಮ್ಮಿಬ್ಬರ ಬಗ್ಗೆ ಸಾಕಷ್ಟು ದೂರುಗಳಿವೆ. ನಿಮಗೆ ಕರ್ತವ್ಯ ಮಾಡಲು ಇಷ್ಟವಿಲ್ಲದಿದ್ದರೆ ಬೇರೆ ಕಡೆ ವರ್ಗಾವಣೆ ಮಾಡಿಸಿಕೊಂಡು ಹೋಗಿ. ವೈದ್ಯರನ್ನು ಆನಂದಪುರಂಗೆ ವರ್ಗಾವಣೆ ಮಾಡಿ, ಅಲ್ಲಿನ ಮಹಿಳಾ ವೈದ್ಯೆಯನ್ನು ಇಲ್ಲಿಗೆ ವರ್ಗಾಯಿಸುವಂತೆ ಸೂಚನೆ ನೀಡಿದರು. ಆಸ್ಪತ್ರೆಯ ಮೂವರು ನರ್ಸ್ ಮತ್ತು ಮರ್ನಾಲ್ಕು ಗ್ರೂಪ್ ಡಿ ನೌಕರರ ಬಗ್ಗೆ ದೂರುಗಳಿವೆ. ಅವರು ತಮ್ಮ ವರ್ತನೆ ಸರಿಪಡಿಸಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಜರುಗಿಸಲಾಗುತ್ತದೆ. ಆಸ್ಪತ್ರೆಯಲ್ಲಿ ಕಣ್ಣಿನ ವೈದ್ಯರು, ಫಿಜಿಶಿಯನ್ ಕೊರತೆ ಇದ್ದು, ತಕ್ಷಣ ಭರ್ತಿ ಮಾಡುವುದು, ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಬಗ್ಗೆ ಆರೋಗ್ಯ ಸಚಿವರಲ್ಲಿ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಸರ್ಕಾರದಿಂದ ನೇಮಕವಾಗಿರುವ ಆರೋಗ್ಯ ರಕ್ಷಾ ಸಮಿತಿಯನ್ನು ವೈದ್ಯಸಿಬ್ಬಂದಿಗಳು ಗೌರವದಿಂದ ನೋಡಬೇಕು. ಆಸ್ಪತ್ರೆ ಅಭಿವೃದ್ಧಿಗೆ ಅವರ ಸಲಹೆಯನ್ನು ಪಡೆಯಬೇಕು. ನಮ್ಮ ತಾಲೂಕು ಅಲ್ಲದೆ ಹೊರ ಜಿಲ್ಲೆ, ತಾಲೂಕಿನಿಂದ ಬರುವ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಟರಾಜ್, ಸಿವಿಲ್ ಸರ್ಜನ್ ಡಾ.ಕೆ. ಪರಪ್ಪ, ತಹಶೀಲ್ದಾರ್ ಚಂದ್ರಶೇಖರ ನಾಯ್ಕ್, ಡಿವೈಎಸ್ಪಿ ಗೋಪಾಲಕೃಷ್ಣ ನಾಯ್ಕ್, ಪೌರಾಯುಕ್ತ ಎಚ್.ಕೆ. ನಾಗಪ್ಪ, ಮಂಜುಳಾ ಭಜಂತ್ರಿ, ನಗರಸಭೆ ಸದಸ್ಯರಾದ ಮಧುಮಾಲತಿ, ಗಣಪತಿ ಮಂಡಗಳಲೆ, ಆರೋಗ್ಯ ರಕ್ಷಾ ಸಮಿತಿ ಸದಸ್ಯರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟ್ರಂಪ್‌ಗೆ ಸಿದ್ದು ಆರ್ಥಿಕ ಸಚಿವರಾಗಲಿ: ಎಚ್ಡಿಕೆ!
‘ನರೇಗಾ’ ಬದಲಾವಣೆ ವಿರುದ್ಧ ಹೋರಾಟ : ಪೈಲಟ್‌