ಕನ್ನಡಪ್ರಭ ವಾರ್ತೆ ಬಂಟ್ವಾಳ
ಈ ಸಂದರ್ಭ ಮಾತನಾಡಿದ ಅವರು, ಲೋಕಾಯುಕ್ತ ಇನ್ಸ್ಪೆಕ್ಟರ್ ಎಂದು ಹೇಳಿ ಅಧಿಕಾರಿಗಳಿಗೆ ಪೋನ್ ಮಾಡಿ ಹಣ ನೀಡುವಂತೆ ಒತ್ತಾಯ ಮಾಡುವ ಜಾಲವೊಂದು ಕಾರ್ಯಾಚರಿಸುವ ಬಗ್ಗೆ ಇಲಾಖೆಯ ಗಮನಕ್ಕೆ ಬಂದಿದೆ. ಉಳ್ಳಾಲದಲ್ಲಿ ಇಂತಹ ಪ್ರಕರಣ ನಡೆದು ಅವರ ಮೇಲೆ ಪ್ರಕರಣ ದಾಖಲಿಸುವ ಮೂಲಕ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದರು.
ಬೇರೆ ತಾಲೂಕಿನಲ್ಲಿ ಲೋಕಾಯುಕ್ತರ ಹೆಸರಿನಲ್ಲಿ ನಕಲಿ ಪೋನ್ ಕರೆಗಳು ಬಂದು ಲಂಚಕ್ಕೆ ಬೇಡಿಕೆಯಿಟ್ಟರೆ ತಕ್ಷಣ ಇಲಾಖೆಯ ಗಮನಕ್ಕೆ ತರಬೇಕು. ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಅವರು ತಿಳಿಸಿದರು.ಮಂಗಳೂರು ಮಹಾನಗರ ಪಾಲಿಕೆಗೆ ನೀರು ಸರಬರಾಜು ಮಾಡುವ ತುಂಬೆ ವೆಂಟೆಡ್ ಡ್ಯಾಂ ಮುಂಭಾಗದಲ್ಲಿ ಅಂದರೆ ನೇತ್ರಾವತಿ ನದಿಯಲ್ಲಿ ಮರಳು ತುಂಬಿದ್ದು, ಮಳೆಗಾಲದಲ್ಲಿ ಇದರ ಪರಿಣಾಮವಾಗಿ ಡ್ಯಾಂ ಅಕ್ಕಪಕ್ಕದ ಕೃಷಿ ಭೂಮಿಗೆ ನೀರು ನುಗ್ಗಿ ಅಪಾರವಾಗಿ ಕೃಷಿ ನಷ್ಟವಾಗುತ್ತದೆ ಎಂಬ ದೂರು ಕೇಳಿಬಂತು.
ತಹಸೀಲ್ದಾರ್ ಅರ್ಚನಾ ಭಟ್, ಇದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವತಿಯಿಂದ ಆಗಬೇಕಾದ ಕಾರ್ಯವಾಗಿದ್ದು, ಡ್ಯಾಂ ನ ನಿರ್ವಹಣೆ ಮಾಡುವ ಮಂಗಳೂರು ಮಹಾನಗರ ಪಾಲಿಕೆ ಇದರ ಜವಬ್ದಾರಿಯಾಗಿದೆ. ಹಾಗಾಗಿ ಮಂಗಳೂರು ಮಹಾನಗರ ಪಾಲಿಕೆಗೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಗಮನಕ್ಕೆ ತಂದು ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಪುರಸಭಾ ಇಲಾಖೆಯ ವ್ಯಾಪ್ತಿಗೆ ಒಳಪಟ್ಟು ಕಾರ್ಯಚರಿಸುತ್ತಿರುವ ಬಿ.ಸಿ.ರೋಡಿನ ಖಾಸಗಿಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣದಲ್ಲಿ ಕೋಣೆಯೊಂದನ್ನು ಆರ್ಥಿಕವಾಗಿ ಹಿಂದುಳಿದ ಮತ್ತು ಪರಿಶಿಷ್ಟ ಜಾತಿಗೆ ಸೇರಿದ ಗಂಗಾಧರ್ ಅವರಿಗೆ ನೀಡುವಂತೆ ನೀಡಿದ ಅರ್ಜಿಗೆ ಸ್ಪಂದನೆ ನೀಡಿಲ್ಲ. ಮತ್ತು ಅರ್ಜಿ ದಾರರ ಗಮನಕ್ಕೆ ತರದೆ ಟೆಂಡರ್ ಮಾಡಲಾಗಿದೆ ಎಂಬ ದೂರನ್ನು ಲೋಕಾಯುಕ್ತಕ್ಕೆ ನೀಡಿದ್ದಾರೆ.
ಒಟ್ಟು 8 ದೂರು ಅರ್ಜಿಗಳು ಜನಸಂಪರ್ಕ ಸಭೆಗೆ ಬಂದಿದ್ದು, ಎಲ್ಲಾ ಅರ್ಜಿದಾರರಿಗೆ ಅಧಿಕಾರಿಗಳು ಸ್ಪಂದಿಸಿದ್ದಾರೆ.