ಕನ್ನಡಪ್ರಭ ವಾರ್ತೆ ಬೆಂಗಳೂರು
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಶನಿವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ರಸ್ತೆ ಗುಂಡಿಗೆ ಸಂಬಂಧಿಸಿದ ದೂರುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಎಂಟು ವಲಯದ ಮುಖ್ಯ ಎಂಜಿನಿಯರ್ ಗುಂಡಿಗೆ ಸಂಬಂಧಿಸಿದ ದೂರುಗಳು ದಾಖಲಾಗುತ್ತಿದ್ದಂತೆ ತ್ವರಿತವಾಗಿ ಗುಂಡಿ ಮುಚ್ಚಿಸಲು ಕ್ರಮ ವಹಿಸಬೇಕು. ರಸ್ತೆ ಗುಂಡಿ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮುಂದಿನ ದಿನಗಳಲ್ಲಿ ನಗರದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆ ಬಂದಾಗ ನಗರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ. ರಾಜಕಾಲುವೆ, ನೀರುಗಾಲುವೆಗಳಲ್ಲಿ ತುಂಬಿಕೊಂಡಿರುವ ಹೂಳು ತೆಗೆಯಬೇಕೆಂದು ಸೂಚಿಸಿದರು.ವಿಶೇಷ ಆಯುಕ್ತರಾದ ಡಾ। ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ವಲಯ ಆಯುಕ್ತರಾದ ರಮೇಶ್, ರಮ್ಯಾ, ವಿನೋತ್ ಪ್ರಿಯಾ, ಕರೀಗೌಡ, ಸ್ನೇಹಲ್, ಗಿರೀಶ್, ಪ್ರಧಾನ ಅಭಿಯಂತರ ಪ್ರಹ್ಲಾದ್, ವಲಯ ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು ಇದ್ದರು.