ಹುಬ್ಬಳ್ಳಿ:
ನವನಗರದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಬುಧವಾರ ವಿವಿಧ ಕಟ್ಟಡಗಳ ಕಾಮಗಾರಿಗಳ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಕಾನೂನು ವಿವಿಯಲ್ಲಿ ₹10 ಕೋಟಿ ವೆಚ್ಚದಲ್ಲಿ ಗ್ರಂಥಾಲಯ, ₹10 ಕೋಟಿ ವೆಚ್ಚದಲ್ಲಿ ಅನೆಕ್ಸ್ ಕಟ್ಟಡ, ₹10 ಕೋಟಿ ವೆಚ್ಚದಲ್ಲಿ ಅತಿಥಿ ಗೃಹ ಕಟ್ಟಡ, ₹5 ಕೋಟಿ ವೆಚ್ಚದಲ್ಲಿ ಉಪಹಾರ ಗೃಹ ಕಟ್ಟಡ, ₹2 ಕೋಟಿ ವೆಚ್ಚದಲ್ಲಿ ಬಾಲಕಿಯರ ವಸತಿ ನಿಲಯ ಕಟ್ಟಡ ಸೇರಿದಂತೆ ಒಟ್ಟು ₹37 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಎಲ್ಲ ಕಾಮಗಾರಿಗಳನ್ನು 11 ತಿಂಗಳ ಕಾಲಾವಧಿಯಲ್ಲಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ನೀಡಿದ ಕಾಲಮಿತಿಯಲ್ಲಿ ಮುಕ್ತಾಯಗೊಳಿಸುವ ಸಾಮರ್ಥ್ಯ ಏಜೆನ್ಸಿಗಳಿಗಿದೆ. ಕಾಮಗಾರಿಗಳನ್ನು ಕೈಗೊಂಡ ಅಧಿಕಾರಿಗಳಿಗೆ ಯಾವುದೇ ರೀತಿಯ ತೊಂದರೆ, ಸಮಸ್ಯೆ ಉಂಟಾದರೆ ಕೂಡಲೇ ನನಗೆ ಅಥವಾ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಗಮನಕ್ಕೆ ತರಬೇಕು. ಕಾಮಗಾರಿಯಲ್ಲಿ ವಿನಾಕಾರಣ ವಿಳಂಬವಾಗಬಾರದು ಎಂದರು.ವಿವಿಗೆ ಯಾವುದೇ ಹಣಕಾಸಿನ ತೊಂದರೆಯಿಲ್ಲ. ಸ್ವಂತ ಸಂಪನ್ಮೂಲಗಳ ಸ್ವಾವಲಂಬನೆ ನಿಧಿಯಿಂದ ₹ 80 ಕೋಟಿ ವೆಚ್ಚದ ಕಾಮಗಾರಿಗಳನ್ನು ಕೈಗೊಂಡರೂ ಸಹ ₹50 ರಿಂದ ₹60 ಕೋಟಿ ಉಳಿಯಲಿದೆ. ಜಾಗದ ಬಗ್ಗೆ ಹಲವಾರು ರೀತಿಯ ಗೊಂದಲಗಳು ಉಂಟಾಗಿದ್ದು, ಮಹಾನಗರ ಪಾಲಿಕೆಯ ನಿಯೋಗ ಮುಖ್ಯಮಂತ್ರಿ, ಸಭಾಪತಿಗಳನ್ನು ಭೇಟಿ ಮಾಡಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು/
ಈಗಾಗಲೇ ವಿವಿಯ ಆಡಳಿತ ಭವನ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಎರಡು ಸ್ಲಾಬ್ ಕಾಮಗಾರಿಗಳು ಪೂರ್ಣಗೊಂಡಿವೆ. ಮಾಹಿತಿ ಕೊರತೆಯಿಂದ 20 ದಿನ ಕಾಮಗಾರಿ ವಿಳಂಬವಾಗಿದೆ. ವಿಳಂಬವಾದ ಅವಧಿ ಸರಿಪಡಿಸಿಕೊಂಡು ಮೇ ತಿಂಗಳಲ್ಲಿ ಕಟ್ಟಡ ಮುಕ್ತಾಯಗೊಳಿಸಬೇಕು. ಜೂನ್ ತಿಂಗಳಲ್ಲಿ ಶೈಕ್ಷಣಿಕ ವರ್ಷವನ್ನು ಆಡಳಿತ ಭವನದಿಂದ ಆರಂಭಿಸಲು ಯೋಜಿಸಲಾಗಿದೆ ಎಂದು ಸಚಿವರು ಹೇಳಿದರು.