.ಬೀಜ, ರಸಗೊಬ್ಬರ ಸಮರ್ಪಕ ವಿತರಣೆಗೆ ಕ್ರಮ

KannadaprabhaNewsNetwork |  
Published : May 27, 2024, 01:04 AM IST
ಸಿಕೆಬಿ-3 ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ | Kannada Prabha

ಸಾರಾಂಶ

ರಸಗೊಬ್ಬರ, ಬಿತ್ತನೆ ಬೀಜಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡು ಬಂದಲ್ಲಿ ಕಟ್ಟುನಿಟ್ಟಾದ ಕಾನೂನು ಕ್ರಮ ಜರುಗಿಸಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆಗೆ ಅಗತ್ಯವಿರುವ ರಾಗಿ, ತೊಗರಿ, ನೆಲಗಡಲೆ, ಮತ್ತು ಮುಸಕಿನಜೋಳ, ಬಿತ್ತನೆ ಬೀಜ ದಾಸ್ತಾನು ಮಾಡಲಾಗಿದ್ದು, ರೈತರಿಗೆ ಸಮರ್ಪಕವಾಗಿ ವಿತರಿಸಲು ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದರು. ರೈತ ಸಂಪರ್ಕ ಕೇಂದ್ರಗಳಲ್ಲಿ 410 ಕ್ವಿಂಟಾಲ್ ರಾಗಿ, 625 ಕ್ವಿಂಟಾಲ್ ಮುಸುಕಿನ ಜೋಳ, 111 ಕ್ವಿಂಟಾಲ್ ತೂಗರಿ, 925 ಕ್ವಿಂಟಾಲ್ ನೆಲಗಡಲೆ, 10 ಕ್ವಿಂಟಾಲ್ ಅಲಸಂದಿ ಬಿತ್ತನೆ ಬೀಜಗಳನ್ನು ದಾಸ್ತಾನು ಮಾಡಲಾಗಿದೆ. ಪ್ರತಿ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜಗಳ ದಾಸ್ತಾನು ವಿವರ ಮತ್ತು ದರ ಪಟ್ಟಿಯನ್ನು ಪ್ರಕಟಿಸಲಾಗಿದೆ. ರೈತರು ರಿಯಾಯಿತಿ ದರದಲ್ಲಿ ಖರೀದಿಸಬಹುದು ಎಂದರು. ರಸಗೊಬ್ಬರ ದಾಸ್ತಾನು

ಏಪ್ರಿಲ್ ಮತ್ತು ಮೇ ಮಾಹೆಗೆ ಜಿಲ್ಲೆಗೆ 13,500 ಮೆಟ್ರಿಕ್ ಟನ್ ರಸಗೊಬ್ಬರ ಅವಶ್ಯಕತೆ ಇದ್ದು ಜಿಲ್ಲೆಯಲ್ಲಿ 17,831 ಮೆಟ್ರಿಕ್ ಟನ್ ರಸಗೊಬ್ಬರವನ್ನು ಜಿಲ್ಲೆಯ ವಿವಿಧ ರಸಗೊಬ್ಬರ ಮಾರಾಟ ಮಳಿಗೆಗಳಲ್ಲಿ ದಾಸ್ತಾನು ಮಾಡಲಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ 6212 ಮೆಟ್ರಿಕ್ ಟನ್ ಯೂರಿಯಾ, 1414 ಮೆಟ್ರಿಕ್ ಟನ್ ಡಿ.ಎ.ಪಿ, 357 ಮೆಟ್ರಿಕ್ ಟನ್ ಪೋಟಾಷ್, 9538 ಮೆಟ್ರಿಕ್ ಟನ್ ಕಾಂಪ್ಲೆಕ್ಸ್ ರಸಗೊಬ್ಬರ ದಾಸ್ತಾನು ಮಾಡಲಾಗಿದೆ. ರಸಗೊಬ್ಬರ ಮಾರಾಟಗಾರರು ಕಡ್ಡಾಯವಾಗಿ ಪಿ.ಓ.ಎಸ್. ಮಶೀನ್ ಮುಖಾಂತರವೇ ರೈತರ ಆಧಾರ್ ಕಾರ್ಡ್ ಪಡೆದು ಮಾರಾಟ ಮಾಡಲು ತಿಳಿಸಿದೆ. ರಸಗೊಬ್ಬರ (ನಿಯಂತ್ರಣ) ಆದೇಶ-1985 ರಲ್ಲಿನ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಹಾಗೂ ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡು ಬಂದಲ್ಲಿ ಕಟ್ಟುನಿಟ್ಟಾದ ಕಾನೂನು ಕ್ರಮ ಜರುಗಿಸಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ರೈತರು ರಸಗೊಬ್ಬರಗಳ ಲಭ್ಯತೆ ಬಗ್ಗೆ ತಾಲ್ಲೂಕುಗಳ ಸಹಾಯಕ ಕೃಷಿ ನಿರ್ದೇಶಕರ ಮೊಬೈಲ್ ಸಂಖ್ಯೆ ಚಿಕ್ಕಬಳ್ಳಾಪುರ-9731207959, ಗೌರಿಬಿದನೂರು-8277930811, ಗುಡಿಬಂಡೆ-8277930810, ಬಾಗೇಪಲ್ಲಿ-8277930828, ಚಿಂತಾಮಣಿ-8277930832, ಶಿಡ್ಲಘಟ್ಟ-8277930857 ಗೆ ಸಂಪರ್ಕಿಸುವಂತೆ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ