ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ಬೆಳ್ಳೂರು ಪಟ್ಟಣದ ನಾಗಲಾಪುರ ರಸ್ತೆಯಲ್ಲಿ ಆರೋಗ್ಯ ಇಲಾಖೆಯಿಂದ ನೂತನವಾಗಿ ಸ್ಥಾಪಿಸಿರುವ ನಮ್ಮ ಕ್ಲಿನಿಕ್ ಉದ್ಘಾಟಿಸಿ ಮಾತನಾಡಿ, ಜನರಿಗೆ ಆರೋಗ್ಯ ಸುರಕ್ಷತೆ ಬಹುಮುಖ್ಯಗಿರುವ ಹಿನ್ನೆಲೆಯಲ್ಲಿ ಈ ಭಾಗದ ಜನರ ಅನುಕೂಲಕ್ಕಾಗಿ ನಮ್ಮ ಕ್ಲಿನಿಕ್ ತೆರೆಯಲಾಗಿದೆ ಎಂದರು.
ಕಾಂಗ್ರೆಸ್ ಸರ್ಕಾರ ಬಂದ ನಂತರ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯಿಂದ 13 ನಮ್ಮ ಕ್ಲಿನಿಕ್ಗಳನ್ನು ತೆರೆಯಲಾಗಿದೆ. ಈ ಕ್ಲಿನಿಕ್ನಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ವೈದ್ಯರು, ಪ್ರಯೋಗಾಲಯದ ತಜ್ಞರು ಮತ್ತು ಸಿಬ್ಬಂದಿ ಕರ್ತವ್ಯ ನಿರ್ವಹಿಸಿ ಜನರಿಗೆ ಉತ್ತಮ ಚಿಕಿತ್ಸೆ ನೀಡಲಿದ್ದಾರೆ ಎಂದರು.ಈ ಹಿಂದೆ ನಾನು ಆರೋಗ್ಯ ಸಚಿವನಾಗಿದ್ದ ಅವಧಿಯಲ್ಲಿ ಬೆಳ್ಳೂರಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಿದ ನಂತರ ಅದಿಚುಂಚನಗಿರಿ ಆಸ್ಪತ್ರೆಗೆ ವಹಿಸಲಾಗಿತ್ತು. ಕೆಲ ನಿಯಮಗಳ ಮಾರ್ಪಾಡು ನಡೆಯುತ್ತಿರುವುದರಿಂದ ಆದಿಚುಂಚನಗಿರಿ ಆಸ್ಪತ್ರೆಯವರೇ ಈ ಸಮುದಾಯ ಕೇಂದ್ರವನ್ನು ಮುಂದುವರಿಸುತ್ತಿದ್ದರೂ ಕೂಡ ಸರ್ಕಾರದ ಸೌಲಭ್ಯಗಳೆಲ್ಲವೂ ಸಿಗುತ್ತದೆ ಎಂದರು.
ಈ ವೇಳೆ ಬೆಳ್ಳೂರು ಪಪಂ ಅಧ್ಯಕ್ಷೆ ಲಕ್ಷ್ಮಮ್ಮ, ಉಪಾಧ್ಯಕ್ಷ ಮಹಮ್ಮದ್ ಯಾಸಿನ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್, ತಹಸೀಲ್ದಾರ್ ಜಿ.ಆದರ್ಶ, ತಾಲೂಕು ಆರೋಗ್ಯಾಧಿಕಾರಿ ಡಾ.ರಮೇಶ್, ತಾಪಂ ಮಾಜಿ ಸದಸ್ಯ ವೆಂಕಟೇಶ್, ಮುಖಂಡರಾದ ರವಿಕುಮಾರ್, ಪದ್ಮನಾಭ, ತಾಲೂಕು ಕಸಾಪ ಮಾಜಿ ಅಧ್ಯಕ್ಷ ಸಿ.ಆರ್.ಚಂದ್ರಶೇಖರ್ ಸೇರಿದಂತೆ ಹಲವರು ಇದ್ದರು.