ಕನ್ನಡಪ್ರಭ ವಾರ್ತೆ ಸಿಂಧನೂರು
ಮಹಾಶಕ್ತಿ ಮಹಿಳಾ ಸಬಲೀಕರಣ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷೆ ವಿಜಯರಾಣಿ ಮಾತನಾಡಿ, ವಸತಿ ನಿಲಯದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯ ಬಾಕಿ ವೇತನವು 11 ತಿಂಗಳು ಹಾಗೂ ಕೆಲವರ 9 ತಿಂಗಳು ವೇತನ ಬಾಕಿಯಿದ್ದು, ಇದನ್ನು ಪಾವತಿ ಮಾಡುಲು ವಿಳಂಬ ಮಾಡುತ್ತಿರುವುದೇಕೆ ಎಂದು ಪ್ರಶ್ನೆ ಮಾಡಿದರು.
ನಂತರ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಮಹೇಶ ಪೋತೆದಾರ್ ಮಾತನಾಡಿ, ರಾಯಚೂರು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಎಲ್ಲ ವಸತಿ ನಿಲಯದ ಕಾರ್ಮಿಕರಿಗೆ ಪ್ರತಿ ತಿಂಗಳು ವೇತನ ಪಾವತಿಸಬೇಕಾದರೆ ಒಂದು ಕೋಟಿಯ ಅಗತ್ಯತೆ ಇದೆ. ವರ್ಷಕ್ಕೆ ರು.12 ಕೋಟಿ ಬೇಕಾಗುತ್ತದೆ. ಆದರೆ ಕಳೆದ ವರ್ಷ ರು.6 ರಿಂದ ರೂ.7 ಬಿಡುಗಡೆಯಾಗಿರುವುದೇ ಕಾರ್ಮಿಕರ ವೇತನ ಬಾಕಿ ಉಳಿಯಲು ಮೂಲ ಕಾರಣವಾಗಿದೆ ಎಂದು ಹೇಳಿದರು.2024ರಲ್ಲಿ ರು.10.50 ಕೋಟಿ ರಾಯಚೂರು ಜಿಲ್ಲೆಗೆ ಬಿಡುಗಡೆಯಾಗಿದೆ. ಈ ವರ್ಷದ ಏಪ್ರಿಲ್ನಿಂದ ಮಾರ್ಚ್ವರೆಗೆ ವೇತನ ನೀಡಬಹುದು. ಆದರೆ ಈ ಹಣವೂ ನಾಲ್ಕು ಹಂತದಲ್ಲಿ ಬಿಡುಗಡೆಯಾಗಲಿದ್ದು ಇನ್ನು 15 ರಿಂದ 20 ದಿನಗಳಲ್ಲಿ ಮೊದಲ ಹಂತದ ಅನುದಾನ ಬಿಡುಗಡೆಯಾಗಲಿದೆ. ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಸತಿ ನಿಲಯದ ಕಾರ್ಮಿಕರ ನಾಲ್ಕು ತಿಂಗಳ ಬಾಕಿ ವೇತನ ಜಮೆಯಾಗುತ್ತದೆ. ಬಾಕಿ ಉಳಿಯುವ ಕಳೆದ ವರ್ಷದ ಆರು ತಿಂಗಳ ವೇತನಕ್ಕೆ ಈಗಾಗಲೇ ಆಯುಕ್ತರ ಕಚೇರಿಯಿಂದ ತಪಾಸಣೆಗೆ ಬಂದಿದ್ದ ಅಧಿಕಾರಿಗಳಿಗೆ ರು.6 ಕೋಟಿ ಅನುದಾನ ಕೊರತೆಯ ಬಗ್ಗೆ ಪತ್ರದ ಮೂಲಕ ಒತ್ತಡ ಹೇರಲಾಗಿದೆ ಎಂದು ತಿಳಿಸಿದರು.
ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕ ಮೌನೇಶ ಜಾಲವಾಡಗಿ, ಎಂಎಂಎಸ್ ಸಂಘಟನೆಯ ರಾಜ್ಯ ಗೌರವ ಸಲಹೆಗಾರರಾದ ಕರಿಯಪ್ಪ ತೋರಣದಿನ್ನಿ, ಗುರುಲಿಂಗಪ್ಪ ತೋರಣದಿನ್ನಿ, ಮೌನೇಶ ತುಗ್ಗಲದಿನ್ನಿ, ಡಿವಿಪಿ ಸದಸ್ಯ ಸುರೇಶ ಎಲೆಕೂಡ್ಲಿಗಿ ಮತ್ತು ಇಲಾಖೆಯ ಎಲ್ಲ ಮೇಲ್ವಿಚಾರಕರು ಹಾಗೂ ಎಲ್ಲ ವಸತಿ ನಿಲಯದ ಕಾರ್ಮಿಕರು ಇದ್ದರು.