ಬಳ್ಳಾರಿ ನಾಲಾ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಕ್ರಮ

KannadaprabhaNewsNetwork |  
Published : Sep 25, 2024, 12:56 AM IST
ಸಚಿವ ಸತೀಶ ಜಾರಕಿಹೊಳಿ ಅವರು ಬಳ್ಳಾರಿ ನಾಲಾ ವೀಕ್ಷಿಸಿದರು | Kannada Prabha

ಸಾರಾಂಶ

ವಿಪರೀತ ಮಳೆ ನಡುವೆ ಸಚಿವ ಸತೀಶ ಜಾರಕಿಹೊಳಿ ಅವರು ದಾಮಣೆ ರಸ್ತೆಯ ಬಳ್ಳಾರಿ ನಾಲಾ ವೀಕ್ಷಣೆ ಮಾಡಿ, ಶಾಶ್ವತ ಪರಿಹಾರ ಕಲ್ಪಿಸುವುದಾಗಿ ಸ್ಥಳೀಯರಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ವಿಪರೀತ ಮಳೆ ನಡುವೆ ಸಚಿವ ಸತೀಶ ಜಾರಕಿಹೊಳಿ ಅವರು ದಾಮಣೆ ರಸ್ತೆಯ ಬಳ್ಳಾರಿ ನಾಲಾ ವೀಕ್ಷಣೆ ಮಾಡಿ, ಶಾಶ್ವತ ಪರಿಹಾರ ಕಲ್ಪಿಸುವುದಾಗಿ ಸ್ಥಳೀಯರಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.

ಮಳೆ ಸಂದರ್ಭದಲ್ಲಿ ಪ್ರತಿ ವರ್ಷವೂ ಬಳ್ಳಾರಿ ನಾಲಾದಿಂದ ಸಮಸ್ಯೆ ಉದ್ಭವಾಗುತ್ತಿದೆ. ಇದನ್ನು ಮನಗಂಡ ಸಚಿವರು ರೈತರು, ಸ್ಥಳೀಯರಿಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸ್ಥಳಕ್ಕೆ ಭೇಟಿ ನೀಡಿ, ಬಳ್ಳಾರಿ ನಾಲಾದಿಂದ ಉದ್ಭವಿಸುವ ಸಮಸ್ಯೆ ವೀಕ್ಷಣೆ ಮಾಡಿದರು. ಬಳಿಕ ಸ್ಥಳೀಯರೊಂದಿಗೆ ಚರ್ಚಿಸಿದ ಸಚಿವರು ಶೀಘ್ರವೇ ನಾಲಾದಿಂದ ಉಂಟಾಗುವ ಅವಾಂತರ ತಪ್ಪಿಸಿ, ಸಮಸ್ಯೆ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.ಮಳೆಗಾಲದಲ್ಲಿ ಅವಾಂತರ ಸೃಷ್ಟಿಸಿಯಾದರೆ ಬೇಸಿಗೆಯಲ್ಲಿ ಕೊಳಚೆ, ಪ್ಲಾಸ್ಟಿಕ್ ಕಸದ ಸಮಸ್ಯೆ ಎದುರಾಗುತ್ತಿದೆ. ಪ್ರತಿ ವರ್ಷ ಕೋಟ್ಯಂತರ ರೂ. ಖರ್ಚು ಮಾಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ, ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸ್ಥಳೀಯ ರೈತರು ಮನವಿ ಮಾಡಿಕೊಂಡರು.ಈ ವೇಳೆ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ಬಳ್ಳಾರಿ ನಾಲಾ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಸ್ಥಳೀಯರೊಂದಿಗೆ ಸಭೆ ನಡೆಸಿ, ವಿಸ್ತೃತವಾಗಿ ಚರ್ಚಿಸಿ ಯೋಜನಾ ವರದಿ ಸಿದ್ಧಪಡಿಸುವುದಾಗಿ ಭರವಸೆ ನೀಡಿದರು.ಬಳ್ಳಾರಿ ನಾಲಾ ಅಗಲೀಕರಣ ಮಾಡಬೇಕೆಂಬ ಒತ್ತಾಯ ಇದೆ. ರೈತರಿಗೆ ಶಾಶ್ವತ ಪರಿಹಾರ ಕಲ್ಪಿಸಲು ದೊಡ್ಡ ಮೊತ್ತದ ಅನುದಾನದ ಅವಶ್ಯವಿದೆ. ಶೀಘ್ರವೇ ಅಗತ್ಯ ಕ್ರಮ ಕೈಗೊಂಡು ಶಾಶ್ವತ ಪರಿಹಾರ ಕಲ್ಪಿಸಲಾವುದು ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!