ರೈತರಿಗೆ ಸೂಕ್ತ ವಿದ್ಯುತ್ ಪೂರೈಕೆಗೆ ಕ್ರಮ

KannadaprabhaNewsNetwork |  
Published : Aug 24, 2024, 01:24 AM IST
ಗುರುಮಠಕಲ್ ತಾಲೂಕಿನ ಚಾಮನಳ್ಳಿ ಗ್ರಾಮದ ಹತ್ತಿರ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ 21 ಕೋಟಿ ರು.ಗಳ ವೆಚ್ಚದಲ್ಲಿ ನಿರ್ಮಾಣವಾದ 110/11 ಕೆವಿ ವಿದ್ಯುತ್ ಉಪ ಕೇಂದ್ರವನ್ನು ಶಾಸಕ ಶರಣಗೌಡ ಕಂದಕೂರು  ಅವರು ಉದ್ಘಾಟಿಸಿದರು. | Kannada Prabha

ಸಾರಾಂಶ

Action for proper power supply to farmers

-21 ಕೋಟಿ ರು.ಗಳ ವೆಚ್ಚದ ವಿದ್ಯುತ್ ಉಪ ಕೇಂದ್ರ ಉದ್ಘಾಟಿಸಿದ ಶಾಸಕ ಕಂದಕೂರು

-----

ಕನ್ನಡಪ್ರಭ ವಾರ್ತೆ ಗುರುಮಠಕಲ್

ಮತಕ್ಷೇತ್ರದಲ್ಲಿ ರೈತರು ಹೆಚ್ಚಿನ ಪ್ರಮಾಣದಲ್ಲಿ ಕೃಷಿ ಪಂಪಸೆಟ್‌ಗಳ ಹಾಗೂ ವಿದ್ಯುತ್ ಸಂಪರ್ಕದ ಅವಲಂಬನೆಯಿಂದ ತಮ್ಮ ಜಮೀನನ್ನು ನೀರಾವರಿ ಕ್ಷೇತ್ರವನ್ನಾಗಿ ಮಾಡಿಕೊಂಡಿದ್ದಾರೆ. ಅವರಿಗೆ ಸೂಕ್ತ ಗುಣಮಟ್ಟದ ವಿದ್ಯುತ್ ಪೂರೈಕೆಗೆ ಜೆಸ್ಕಾಂ ಅಧಿಕಾರಿಗಳ ಸಹಕಾರದಿಂದ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದು ಶಾಸಕ ಶರಣಗೌಡ ಕಂದಕೂರು ಹೇಳಿದರು.

ತಾಲೂಕಿನ ಚಾಮನಳ್ಳಿ ಗ್ರಾಮದ ಹತ್ತಿರ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ 21 ಕೋಟಿ ರು.ಗಳ ವೆಚ್ಚದಲ್ಲಿ ನಿರ್ಮಾಣವಾದ 110/11 ಕೆವಿ ವಿದ್ಯುತ್ ಉಪ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈಗಾಗಲೇ ಗುರುಮಠಕಲ್ ಮತಕ್ಷೇತ್ರದ ಯಡ್ಡಳ್ಳಿ, ಗೊಂದೆಡಗಿ ಗ್ರಾಮಗಳಲ್ಲಿ ಹೊಸ ವಿದ್ಯುತ್ ಉಪಕೇಂದ್ರಗಳು ಕಾರ್ಯಾರಂಭ ಮಾಡಿವೆ. ಇದರಿಂದ ಆ ಭಾಗದ ಜನರಿಗೆ ಹಾಗೂ ರೈತರಿಗೆ ಹೆಚ್ಚಿನ ಅನುಕೂಲತೆಯಾಗಿದೆ ಎಂದರು.

ಇಲ್ಲಿ ಹೊಸದಾಗಿ ವಿದ್ಯುತ್ ಉಪಕೇಂದ್ರ ಸ್ಥಾಪನೆಯಿಂದ ಚಾಮನಳ್ಳಿ, ಕಂಚಗಾರಹಳ್ಳಿ, ಮುದ್ನಾಳ ಹಾಗೂ ಇತರ ಹಳ್ಳಿಗಳು ಸೇರಿದಂತೆ ನಗರ ಸುತ್ತಮುತ್ತಲಿನ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯವಾಗುವುದನ್ನು ತಪ್ಪಿಸಿ, ಸಮರ್ಪಕ ಮತ್ತು ಉತ್ತಮ ಗುಣಮಟ್ಟದ ವಿದ್ಯುತ್‌ನ್ನು ನೀಡಬಹುದಾಗಿದೆ ಎಂದು ತಿಳಿಸಿದರು.

ನನಗೆ ಪದೇ ಪದೇ ಅನೇಕ ಗ್ರಾಮಗಳ ಜನರು ವಿದ್ಯುತ್ ಕಂಬಗಳು ಹಾಗೂ ವೈರ್‌ಗಳು ಹಳೆಯದಾಗಿ ಕಡಿದು ಬೀಳುತ್ತಿವೆ, ಇದರಿಂದ ನಮಗೆ ಸರಿಯಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ ಎಂಬ ದೂರುಗಳು ಬರುತ್ತಿವೆ, ಕಾರಣ ಜೆಸ್ಕಾಂ ಅಧಿಕಾರಿಗಳು ಹಂತ-ಹಂತವಾಗಿ ಸಮಸ್ಯೆ ಪರಿಹಾರಕ್ಕೆ ಶ್ರಮಿಸಬೇಕು ಎಂದರು.

ಸಮಾರಂಭದಲ್ಲಿ ಜೆಸ್ಕಾಂ ಹಿರಿಯ ಅಧಿಕಾರಿಗಳಾದ ಚಂದ್ರಕಾಂತ ಪಾಟೀಲ್, ರಾಜೇಶ ಹಿಪ್ಪರಗಿ, ಬಸವಂತಕುಮಾರ, ರಾಘವೇಂದ್ರ, ಮಾಣಿಕರಾವ ಕುಲಕರ್ಣಿ, ಆನಂದ, ಶಂಕರ ಗುತ್ತಿ, ಬಂದಳ್ಳಿ ಗ್ರಾಪಂ ಅಧ್ಯಕ್ಷ ಮಲ್ಲಿಕಾರ್ಜುನ, ಸಂತೋಷ ಚವ್ಹಾಣ, ಭೋಜಣ್ಣಗೌಡ ಯಡ್ಡಳ್ಳಿ, ಬಸ್ಸುಗೌಡ ಚಾಮನಹಳ್ಳಿ, ಅಯ್ಯಣ್ಣಗೌಡ ಮಾಲಿ ಪಾಟೀಲ್, ಶರಣಗೌಡ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ವಿಜಯಲಕ್ಷ್ಮಿ ಇದ್ದರು.

----

23ವೈಡಿಆರ್8: ಗುರುಮಠಕಲ್ ತಾಲೂಕಿನ ಚಾಮನಳ್ಳಿ ಗ್ರಾಮದ ಹತ್ತಿರ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ 21 ಕೋಟಿ ರು.ಗಳ ವೆಚ್ಚದಲ್ಲಿ ನಿರ್ಮಾಣವಾದ 110/11 ಕೆವಿ ವಿದ್ಯುತ್ ಉಪ ಕೇಂದ್ರವನ್ನು ಶಾಸಕ ಶರಣಗೌಡ ಕಂದಕೂರು ಅವರು ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇವೇಗೌಡರು ನಮ್ಮ ಪಕ್ಷದಲ್ಲಿದ್ದರು - ಹುಷಾರು ಅಶೋಕ್, ನೀನೇ ಸತ್ತು ಹೋಗ್ತೀಯ : ಸಿಎಂ
ವಸುಂಧರಾ ಭೂಪತಿ ಸೇರಿ ಐವರಿಗೆ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ