ಕನ್ನಡಪ್ರಭ ವಾರ್ತೆ ಸಿಂಧನೂರು
ನಗರದ ಮಿನಿವಿಧಾನಸೌಧ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆಯಲ್ಲಿ ಮಾತನಾಡಿದ ಅವರು, ಕಚೇರಿ ಅವಧಿಯಲ್ಲಿ ಐಡಿ ಕಾರ್ಡ್ ಕೊರಳಲ್ಲಿ ಧರಿಸಬೇಕು. ತಮ್ಮ ಕುರ್ಚಿಯಲ್ಲಿ ತಮ್ಮ ಹೆಸರು, ಹುದ್ದೆ ಹೊಂದಿರುವ ಪದನಾಮ ಮತ್ತು ಲೋಕಾಯುಕ್ತ ಕಚೇರಿಯ ದೂರವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ಹಾಕಿರಬೇಕು.
ಸರ್ಕಾರದ ಸುತ್ತೋಲೆ, ಆದೇಶಗಳನ್ನು ಅಧಿಕಾರಿಗಳು ಪಾಲನೆ ಮಾಡಬೇಕು. ಅರ್ಜಿದಾರರು ದೂರು ನೀಡಲು ಬಂದಾಗ ಸೌರ್ಜನ್ಯದಿಂದ ವರ್ತಿಸಬೇಕು ಎಂದು ಹೇಳಿದರು.ಕಳೆದ ನಾಲ್ಕು ವರ್ಷಗಳಿಂದ ಸಿಂಧನೂರಿನ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸಾಲ ಪಡೆಯಲು ಅಲೆದಾಡುತ್ತಿದ್ದರೂ ತಮಗೆ ಸಾಲ ಮಂಜೂರು ಮಾಡುತ್ತಿಲ್ಲವೆಂದು ಕೋಟೆ ಏರಿಯಾದ ಎಸ್.ಎಸ್.ಪಾಟೀಲ್ ಎನ್ನುವವವರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಶಶಿಧರ್ ಅವರಿಗೆ ದೂರು ಸಲ್ಲಿಸಿದರು. ಆದ ಸಭೆಯಲ್ಲಿದ್ದ ಸಹಕಾರಿ ನಿಬಂಧಕರ ಕಚೇರಿಯ ಅಧಿಕಾರಿಗಳನ್ನು ತೀವ್ರ ತರಾಟೆ ತೆಗೆದುಕೊಂಡ ಲೋಕಾಯುಕ್ತರು ಸರ್ಕಾರದಿಂದ ಸಾಲ ನೀಡಲು ಆದೇಶವಿದ್ದರೂ ಯಾಕೆ ಸಾಲ ಒದಗಿಸಿಲ್ಲ. ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.