- ಇಂಧನ ಪೂರೈಕೆಯಲ್ಲಿ ಕೊರತೆಯಿಲ್ಲ; ಸಾಕಷ್ಟು ದಾಸ್ತಾನು ಲಭ್ಯ
- ೧೧.೮೧ ಲಕ್ಷ ಲೀಟರ್ ಪೆಟ್ರೋಲ್, ೧೮ ಲಕ್ಷ ಲೀಟರ್ ಡೀಸೆಲ್ ಸಂಗ್ರಹಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲೆಯಲ್ಲಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ. ಸಾಕಷ್ಟು ದಾಸ್ತಾನು ಲಭ್ಯವಿದ್ದು ಅನಧಿಕೃತವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬಂದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು.ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂಧನ ವಿತರಕ ಮಾಲೀಕರೊಂದಿಗೆ ಸಭೆ ನಡೆಸಿ ಮಾತನಾಡಿ, ಪೆಟ್ರೋಲಿಯಂ ಉತ್ಪನ್ನಗಳಾದ ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ಸಿಲಿಂಡರ್ಗಳನ್ನು ಅಕ್ರಮವಾಗಿ ದಾಸ್ತಾನು ಮಾಡುವುದು ಕಾನೂನುಬಾಹಿರ ಮತ್ತು ಅಪಾಯಕಾರಿ. ಇದು ಶಿಕ್ಷಾರ್ಹ ಅಪರಾಧವಾಗಿದ್ದು, ಅಸುರಕ್ಷಿತ ಸಂಗ್ರಹವು ಭೀಕರ ಅಗ್ನಿ ಅವಘಡಗಳಿಗೆ ಕಾರಣವಾಗಬಹುದು ಎಂದು ತಿಳಿಸಿದರು.
ಸಾರ್ವಜನಿಕರು ಪೆಟ್ರೋಲಿಯಂ ಉತ್ಪನ್ನಗಳನ್ನು ಅನಾವಶ್ಯಕವಾಗಿ ಸಂಗ್ರಹಿಸಿಡುವುದು ಕಾನೂನುಬಾಹೀರ ಮತ್ತು ಅಸುರಕ್ಷಿತ. ಅಧಿಕಾರಿಗಳು ಇದನ್ನು ತಡೆಗಟ್ಟಿ ಅಗ್ನಿ ಅವಘಡಗಳು ಉಂಟಾಗದಂತೆ ಗಮನಹರಿಸಬೇಕು ಮತ್ತು ಅನಗತ್ಯವಾಗಿ ಕ್ಯಾನ್ ಮತ್ತು ಬಾಟಲ್ಗಳಲ್ಲಿ ತುಂಬಿಸುವವರ ವಿರುದ್ಧ ಕಾನೂನು ಕ್ರಮ ವಹಿಸಿ ಎಂದು ಸೂಚಿಸಿದರು.
ಪೆಟ್ರೋಲ್ ಬಂಕ್ ಮಾಲೀಕರು ಕಾನೂನು, ನಿಯಮ ಹಾಗೂ ಸುತ್ತೋಲೆಗಳನ್ನು ಅನುಸರಿಸಬೇಕು ಹಾಗೂ ಇಂಧನವನ್ನು ಕ್ಯಾನ್ ಅಥವಾ ಬಾಟಲ್ ಗಳಲ್ಲಿ ತುಂಬಿಸುವ ಪ್ರಕ್ರಿಯೆ ನಿರ್ಬಂಧಿಸಬೇಕು ಎಂದು ಎಂದು ಸೂಚಿಸಿದರು.
ಮಂಡ್ಯದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಇಂಧನ ವಿತರಕ ಮಾಲೀಕರೊಂದಿಗೆ ಸಭೆ ನಡೆಸಿದರು.