- ಒಂದು ದಶಕದ ಕ್ರಿಯಾ ಯೋಜನೆ, ಕಾಫಿ ಬೆಳೆ ಅಭಿವೃದ್ಧಿ ಹಾಗೂ ವ್ಯವಸ್ಥಿತ ಮಾರುಕಟ್ಟೆ ಕಲ್ಪಿಸುವುದು,
-ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಅಮರ್ದೀಪ್ ಸಿಂಗ್ ಭಾಟಿಯಾ ಅವರೊಂದಿಗೆ ದಶ ವಾರ್ಷಿಕ ಯೋಜನೆ ಚರ್ಚೆ
- ಮುಂದಿನ ಹತ್ತು ವರ್ಷಗಳಲ್ಲಿ ಕಾಫಿ ಬೆಳೆಗಾರರ ಆದಾಯ ಹಾಗೂ ರಫ್ತು ಪ್ರಮಾಣ ದ್ವಿಗುಣಗೊಳಿಸುವ ಪೂರಕ ಅಂಶ ಒಳಗೊಂಡ ಕ್ರಿಯಾಯೋಜನೆ ಸಲ್ಲಿಕೆ- ಅತ್ಯಂತ ಮಾರಕವಾದ ಸರ್ಫೈಸಿ ಕಾಯ್ದೆಯಿಂದ ಕಾಫಿ ಬೆಳೆಗಾರರನ್ನು ಹೊರಗಿಡಲು ಮನವಿಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂಬಂಧ ಕೇಂದ್ರದ ವಾಣಿಜ್ಯ ಸಚಿವ ಪೀಯೂಷ್ ಗೋಯಲ್ ಅವರನ್ನು ಭೇಟಿಯಾಗಿ ಕಾಫಿ ಬೆಳೆ ಹಾಗೂ ಕಾಫಿ ಬೆಳೆಗಾರರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಅನಂತರ ಮುಂದಿನ ಹತ್ತು ವರ್ಷಗಳಲ್ಲಿ ಕಾಫಿ ಬೆಳೆಗಾರರ ಆದಾಯವನ್ನು ದ್ವಿಗುಣಗೊಳಿಸುವ ಹಾಗೂ ಕಾಫಿ ರಫ್ತು ಪ್ರಮಾಣದಲ್ಲಿ ದ್ವಿಗುಣಗೊಳಿಸುವ ಪೂರಕ ಅಂಶಗಳನ್ನು ಒಳಗೊಂಡಿರುವ ವಿವರವಾದ ಕ್ರಿಯಾಯೋಜನೆಯನ್ನು ಸಚಿವರಿಗೆ ನೀಡಲಾಗಿದೆ ಎಂದರು.
ಸಚಿವರೊಂದಿಗೆ ಮಾತನಾಡುವಾಗ ಪ್ರಸ್ತುತ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಸಹ ವಿವರಿಸಿ, ಅದರ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಮನವಿ ಮಾಡಲಾಯಿತು. ಪ್ರಮುಖವಾಗಿ ಬೆಳೆ ಸಾಲಕ್ಕೆ ಬಡ್ಡಿ ಸಹಾಯ ಧನ ನೀಡಲು, ಹವಾಮಾನ ಆಧಾರಿತ ವಿಮಾ ಯೋಜನೆಯನ್ನು ಕಾಫಿ ಬೆಳೆಗೂ ವಿಸ್ತರಿಸಲು ಹಾಗೂ ಬೆಳೆಗಾರರಿಗೆ ಅತ್ಯಂತ ಮಾರಕವಾಗಿರುವ ಸರ್ಫೈಸಿ ಕಾಯ್ದೆಯಿಂದ ಕಾಫಿ ಬೆಳೆಗಾರರನ್ನು ಹೊರಗಿಡಲು ಮನವಿ ಮಾಡಲಾಯಿತು ಎಂದು ಹೇಳಿದರು.
ಕಾಫಿ ಆಧಾರಿತ ರಾಸಾಯನಿಕ ಗೊಬ್ಬರ ತಯಾರಿಸಿ ಬೆಳೆಗಾರರಿಗೆ ಒದಗಿಸಲು ಸಂಬಂಧಿಸಿದ ಇಲಾಖಾ ಸಚಿವ ರೊಂದಿಗೆ ಚರ್ಚಿಸುವ ವಿಶ್ವಾಸ ವ್ಯಕ್ತಪಡಿಸಿದರು. ಕಾಫಿ ಮಂಡಳಿ ಸಹ ಇದಕ್ಕೆ ಪೂರಕವಾದ ವಿವರವಾದ ಯೋಜನಾ ವರದಿ ಸಿದ್ಧಗೊಳಿಸುತ್ತಿದೆ. ಕೇಂದ್ರ ವಾಣಿಜ್ಯ ಸಚಿವಾಲಯಕ್ಕೆ ನೀಡುವ ಸಲುವಾಗಿ ಕಾಫಿ ಬೆಳೆಗಾರರು ಪಡೆದಿರುವ ಬೆಳೆ ಸಾಲದ ಪ್ರಮಾಣದ ಮಾಹಿತಿ ಕಲೆ ಹಾಕಲಾಗುತ್ತಿದೆ. ಸಚಿವರ ಭೇಟಿ ನಂತರ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಅಮರ್ದೀಪ್ ಸಿಂಗ್ ಭಾಟಿಯಾ ಅವರೊಂದಿಗೆ ದಶ ವಾರ್ಷಿಕ ಯೋಜನೆ ಬಗ್ಗೆ ವಿವರವಾಗಿ ಚರ್ಚಿಸಲಾಯಿತು ಎಂದು ಹೇಳಿದರು. 25 ಕೆಸಿಕೆಎಂ 1