ಮಾಯಗಾನಹಳ್ಳಿಯಲ್ಲಿ ಹೈಟೆಕ್ ಕೆಪಿಎಸ್ಸಿ ಶಾಲೆಗೆ ಕ್ರಮ

KannadaprabhaNewsNetwork |  
Published : Sep 30, 2025, 12:00 AM IST
29ಕೆಆರ್ ಎಂಎನ್ 6.ಜೆಪಿಜಿರಾಮನಗರ ತಾಲೂಕಿನ ಮಾಯಗಾನಹಳ್ಳಿ ಗ್ರಾಮ ಪಂಚಾಯಿತಿ ಮೊದಲ ಹಂತಸ್ತಿನ ಸಭಾ ಭವನ ಕಟ್ಟಡವನ್ನು ಲೋಕಾರ್ಪಣೆ ಸಮಾರಂಭದಲ್ಲಿ ಗ್ರಾಪಂ ಅಧ್ಯಕ್ಷರು ಮತ್ತು ಸದಸ್ಯರನ್ನು ಶಾಸಕ ಇಕ್ಬಾಲ್ ಹುಸೇನ್ ಸನ್ಮಾನ ಮಾಡಿದರು. | Kannada Prabha

ಸಾರಾಂಶ

ರಾಮನಗರ: ತಾಲೂಕಿನ ಮಾಯಗಾನಹಳ್ಳಿಯಲ್ಲಿ ಹೈಟೆಕ್ ಆಗಿರುವ ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಿಸಲು ಕ್ರಮ ವಹಿಸಲಾಗುವುದು ಎಂದು ಶಾಸಕ ಇಕ್ಬಾಲ್ ಹುಸೇನ್ ಭರವಸೆ ನೀಡಿದರು.

ರಾಮನಗರ: ತಾಲೂಕಿನ ಮಾಯಗಾನಹಳ್ಳಿಯಲ್ಲಿ ಹೈಟೆಕ್ ಆಗಿರುವ ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಿಸಲು ಕ್ರಮ ವಹಿಸಲಾಗುವುದು ಎಂದು ಶಾಸಕ ಇಕ್ಬಾಲ್ ಹುಸೇನ್ ಭರವಸೆ ನೀಡಿದರು.

ಮಾಯಗಾನಹಳ್ಳಿ ಗ್ರಾಪಂ ಮೊದಲ ಹಂತಸ್ತಿನ ಸಭಾ ಭವನ ಕಟ್ಟಡವನ್ನು ಲೋಕಾರ್ಪಣೆ ಗೊಳಿಸಿದ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ರಂಜಿತ್ ರವರು ಕೆಪಿಎಸ್ಸಿ ಶಾಲೆಯ ಬೇಡಿಕೆ ಮುಂದಿಟ್ಟಾಗ ಶಾಸಕ ಇಕ್ಬಾಲ್ ಹುಸೇನ್ ಶಾಲೆ ಸ್ಥಾಪನೆ ಮಾಡುವುದಾಗಿ ವಾಗ್ದಾನ ಮಾಡಿದರು.

ಸ್ಥಳೀಯ ಗ್ರಾಮ ಪಂಚಾಯಿತಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ನಿಮಗೆ ಸರ್ಕಾರ ಹೆಚ್ಚಿನ ಅಧಿಕಾರ ನೀಡಿದೆ. ಗ್ರಾಮ ಪಂಚಾಯತಿಗೆ ಸರ್ಕಾರ ದಿಂದ ಹೆಚ್ಚಿನ ಅನುದಾನ ಲಭ್ಯವಾಗುತ್ತಿದ್ದು, ಶಾಸಕರ ಅನುದಾನದಡಿ 13 ಕೋಟಿ ರು.ಗಳ ವೆಚ್ಚದಲ್ಲಿ ಹಲವು ಶಾಶ್ವತ ಅಭಿವೃದ್ಧಿ ಕೆಲಸಗಳು ಗ್ರಾಪಂನಲ್ಲಿ ಮಾಡಲಾಗುತ್ತಿದೆ. ಮಾಯಗಾನಹಳ್ಳಿ ಗ್ರಾಪಂ ಸದಸ್ಯರೆಲ್ಲರೂ ಉತ್ತಮ ಕಟ್ಟಡ ನಿರ್ಮಿಸಿ ಮಾದರಿಯ ಕೆಲಸ ಮಾಡಿದ್ದೀರಿ ಎಂದು ಶ್ಲಾಘಿಸಿದರು.

ಮಾಯಗಾನಹಳ್ಳಿ ಗ್ರಾಪಂ ಮೇಲಂತಸ್ತಿನ ಕಟ್ಟಡದ ಜೊತೆಗೆ ವರ್ಗ 1ರಲ್ಲಿ ಕಾಂಪೌಂಡ್, ನೆಲಹಾಸು, ಬಣ್ಣ, ಸೇರಿ ಒಟ್ಟು 30 ಲಕ್ಷ ರೂ ವೆಚ್ಚದಲ್ಲಿ ಸುಂದರ, ಸುಸಜ್ಜಿತವಾಗಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ವಿಶೇಷವಾಗಿ ಗ್ರಾಪಂ ಆವರಣದಲ್ಲಿ ಗ್ರಾಮ ಆಡಳಿತಾಧಿಕಾರಿಗಳಿಗೆ ಕೊಠಡಿ ಮೀಸಲಿಟ್ಟಿರುವುದು ಇತರ ಗ್ರಾಪಂಗಳಿಗೆ ಮಾದರಿಯಾಗಿದೆ. ಯಾವುದೇ ವ್ಯಕ್ತಿ ಗ್ರಾಪಂ ಸದಸ್ಯರಾಗುವುದು ಮುಖ್ಯವಲ್ಲ, ಗ್ರಾಮದ ಜನರು ಮೆಚ್ಚುವ ಕೆಲಸಗಳನ್ನು ವಿಶಾಲವಾದ ಚಿಂತನೆಯೊಂದಿಗೆ ಅಭಿವೃದ್ಧಿ ಕೆಲಸ ಮಾಡಿದಾಗ ಮಾತ್ರ ನಿಮಗೆ ಗೌರವ ಸಿಗುತ್ತದೆ ಎಂದು ಇಕ್ಬಾಲ್ ಹುಸೇನ್ ಹೇಳಿದರು.

ಗ್ರಾಪಂ ಮಾಜಿ ಅಧ್ಯಕ್ಷ ಎಂ.ಎಚ್.ರಂಜಿತ್ ಮಾತನಾಡಿ, ಮಾಯಗಾನಹಳ್ಳಿ ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಹೈಟೆಕ್ ಶಾಲೆಯ ಅವಶ್ಯಕತೆಯಿದೆ. ಅದರಿಂದ ಈ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ನೆರವಾಗುತ್ತದೆ. ಸ್ಪರ್ಧಾತ್ಮಕ ಯುಗಕ್ಕೆ ಮಕ್ಕಳನ್ನು ಸಿದ್ದಗೊಳಿಸಲು ಸಾಧ್ಯವಾಗುತ್ತದೆ ಎಂದು ಶಾಸಕರಲ್ಲಿ ಮನವಿ ಮಾಡಿದರು‌.

ಗ್ರಾಮ‌ ಪಂಚಾಯಿತಿ ಪಿಡಿಒ ಡಿ.ಎಲ್.ಮಾದೇಗೌಡ ಮಾತನಾಡಿ, ಎಲ್ಲ ಸದಸ್ಯರ ಸಹಕಾರದಲ್ಲಿ ಎಲ್ಲ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿದ್ದು, ಸುಮಾರು ಶೇ.80ರಷ್ಟು ಇ-ಖಾತಾಗಳು ಆಗಿದೆ. 4 ಉಪ ಗ್ರಾಮಗಳಿಗೆ ಪ್ರಸ್ತಾವನೆ ನೀಡಲಾಗಿದೆ. ಸ್ಮಶಾನ ಅಭಿವೃದ್ಧಿಗೆ ಕ್ರಮ‌ ವಹಿಸಲಾಗಿದೆ ಎಂದು ಪಂಚಾಯಿತಿಯಿಂದ ಕೈಗೊಂಡಿರುವ ಪ್ರಗತಿಯ ಪಕ್ಷಿನೋಟದ ಬಗ್ಗೆ ಮಾಹಿತಿ ನೀಡಿದರು.

ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್, ಬಗರ್ ಹುಕ್ಕು ಸಮಿತಿ ಸದಸ್ಯ ರವಿ, ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಗುರುಪ್ರಸಾದ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾಪರಮಶಿವಯ್ಯ, ಮಾಜಿ ಅಧ್ಯಕ್ಷ ಎಂ.ಎಚ್.ರಂಜಿತ್, ಸದಸ್ಯರಾದ ಪ್ರಕಾಶ್, ನಾಗ ರಾಜು, ರಾಜಶೇಖರ್, ವೆಂಕಟೇಶ್, ಶ್ರೀನಿವಾಸ್, ಮಾಯಮ್ಮ, ಶೋಭಾ, ಕೆಂಪರಾಜಮ್ಮ, ಪಿಡಿಒ ಡಿ.ಎಲ್. ಮಾದೇಗೌಡ ಮತ್ತಿತರರು ಉಪಸ್ಥಿತರಿದ್ದರು.

ಕೋಟ್‌...........

ಗ್ರಾಮ ಪಂಚಾಯತಿ ಸದಸ್ಯರು ಅವರ ಗ್ರಾಮ ವ್ಯಾಪ್ತಿಯಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ ಇತ್ಯಾದಿ ಪ್ರಾಥಮಿಕ ಸಮಸ್ಯೆಗಳನ್ನು ಆಯಾ ಗ್ರಾಮಗಳಲ್ಲಿ ಪರಿಶೀಲನೆ ಮಾಡಬೇಕು. ಖುದ್ದಾಗಿ ಗ್ರಾಮಗಳನ್ನು ವೀಕ್ಷಿಸಬೇಕು. ಸೌಲಭ್ಯಗಳು ಇಲ್ಲದೆಡೆ ಕೂಡಲೇ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಶ್ರದ್ಧಾಸಕ್ತಿಯಿದ್ದಾಗ ಮಾತ್ರ ಗ್ರಾಮೀಣಾಭಿವೃದ್ಧಿ ಸಾಧ್ಯ.

-ಇಕ್ಬಾಲ್‌ ಹುಸೇನ್‌, ಶಾಸಕ, ರಾಮನಗರ

29ಕೆಆರ್ ಎಂಎನ್ 6.ಜೆಪಿಜಿ

ರಾಮನಗರ ತಾಲೂಕಿನ ಮಾಯಗಾನಹಳ್ಳಿ ಗ್ರಾಮ ಪಂಚಾಯಿತಿ ಮೊದಲ ಹಂತಸ್ತಿನ ಸಭಾ ಭವನ ಕಟ್ಟಡದ ಲೋಕಾರ್ಪಣೆ ಸಮಾರಂಭದಲ್ಲಿ ಗ್ರಾಪಂ ಅಧ್ಯಕ್ಷರು ಮತ್ತು ಸದಸ್ಯರನ್ನು ಶಾಸಕ ಇಕ್ಬಾಲ್ ಹುಸೇನ್ ಸನ್ಮಾನಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ-ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಒತ್ತಾಯ