ಪರವಾನಗಿ ಪಡೆದು ಹೋಂ ಸ್ಟೇ ನಡೆಸಿ, ಕಾನೂನು ಉಲ್ಲಂಘಿಸಿದರೆ ಕ್ರಮ: ಇ. ಬಾಲಕೃಷ್ಣ

KannadaprabhaNewsNetwork |  
Published : Aug 26, 2026, 02:45 AM IST
ಫೋಟೋವಿವರ- (25ಎಚ್‌ಪಿಟಿ2,3)  ಹಂಪಿ, ಹೊಸಹಂಪಿ, ಜನತಾ ಬಜಾರ್ ಹಾಗೂ ಕಡ್ಡಿರಾಂಪುರ, ಕಮಲಾಪುರ ಪ್ರದೇಶಗಳ ವ್ಯಾಪ್ತಿಯಲ್ಲಿ ನಿಯಮ ಬಾಹಿರವಾಗಿ ಅನಧಿಕೃತ ಹೋಂ ಸ್ಟೇಗಳ ದಿಢೀರ್ ಪರಿಶೀಲನೆಯ ಕಾರ್ಯಾಚರಣೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿ ಪರೀಶೀಲನೆ ನೆಡೆಸಿದರು | Kannada Prabha

ಸಾರಾಂಶ

ವಸತಿ ಅಥವಾ ಕೃಷಿ ಉದ್ದೇಶಕ್ಕೆ ಅನುಮತಿ ಪಡೆದು ವಾಣಿಜ್ಯ ರೂಪದಲ್ಲಿ ಹೋಂ ಸ್ಟೇ ನಡೆಸುವುದು ಕಾನೂನು ಬಾಹಿರವಾಗಿದೆ. ಪರವಾನಗಿ ಇದ್ದರೂ ಸರ್ಕಾರದ ನಿಯಮಾವಳಿಗಳನ್ನು ಉಲ್ಲಂಘಿಸಿದ್ದರೆ ಅಂತಹ ಹೋಂಸ್ಟೇಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹಂಪಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಹೇಳಿದರು.

ಹೊಸಪೇಟೆ: ವಸತಿ ಅಥವಾ ಕೃಷಿ ಉದ್ದೇಶಕ್ಕೆ ಅನುಮತಿ ಪಡೆದು ವಾಣಿಜ್ಯ ರೂಪದಲ್ಲಿ ಹೋಂ ಸ್ಟೇ ನಡೆಸುವುದು ಕಾನೂನು ಬಾಹಿರವಾಗಿದೆ. ಪರವಾನಗಿ ಇದ್ದರೂ ಸರ್ಕಾರದ ನಿಯಮಾವಳಿಗಳನ್ನು ಉಲ್ಲಂಘಿಸಿದ್ದರೆ ಅಂತಹ ಹೋಂಸ್ಟೇಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹಂಪಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಹೇಳಿದರು.

ಮಂಗಳವಾರ ಹಂಪಿ, ಹೊಸಹಂಪಿ, ಜನತಾ ಬಜಾರ್ ಹಾಗೂ ಕಡ್ಡಿರಾಂಪುರ, ಕಮಲಾಪುರ ಪ್ರದೇಶಗಳ ವ್ಯಾಪ್ತಿಯಲ್ಲಿ ನಿಯಮ ಬಾಹಿರವಾಗಿ ಅನಧಿಕೃತ ಹೋಂ ಸ್ಟೇಗಳ ದಿಢೀರ್ ಪರಿಶೀಲನೆಯಲ್ಲಿ ಮಾತನಾಡಿದರು.

ಹಂಪಿ ಮತ್ತು ಹೊಸಹಂಪಿ, ಜನತಾ ಬಜಾರ್ ಹಾಗೂ ಕಡ್ಡಿರಾಂಪುರ, ಕಮಲಾಪುರ ವ್ಯಾಪ್ತಿಯಲ್ಲಿ ಸೂಕ್ತ ಪರವಾನಗಿ ಇಲ್ಲದೆ ನಡೆಯುತ್ತಿರುವ ಹೋಂಸ್ಟೇ, ಗೆಸ್ಟ್‌ಹೌಸ್‌, ಲಾಡ್ಜ್‌ಗಳನ್ನು ತಕ್ಷಣವೇ ಬಂದ್ ಮಾಡಬೇಕು. ನೇರ ಬುಕಿಂಗ್ ಹಾಗೂ ಆನ್‌ಲೈನ್ ಬುಕಿಂಗ್‌ಗಳನ್ನು ಇಂದಿನಿಂದಲೇ ಸಂಪೂರ್ಣವಾಗಿ ನಿಲ್ಲಿಸಬೇಕು. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕಡ್ಡಿರಾಂಪುರ ಬಳಿ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಹೋಂ ಸ್ಟೇ ತಕ್ಷಣ ಬಂದ್ ಮಾಡಬೇಕು. ಕೃಷಿ ಚಟುವಟಿಕೆಗೆ ಪಡೆದಿದ್ದ ವಿದ್ಯುತ್ ಸಂಪರ್ಕವನ್ನು, ಹೋಂ ಸ್ಟೇಗೆ ಅನಧಿಕೃತವಾಗಿ ಪಡೆದಿರುವುದನ್ನು ಅಧಿಕಾರಿಗಳ ತಂಡ ಪತ್ತೆ ಹಚ್ಚಿ ಜೆಸ್ಕಾಂ ಸಿಬ್ಬಂದಿ ಮೂಲಕ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿ ಸ್ಥಳದಲ್ಲಿಯೇ ನೋಟೀಸ್ ಜಾರಿ ಮಾಡಲಾಯಿತು.

ನಿಯಮ ಪಾಲಿಸದಿದ್ದರೆ ವಿದ್ಯುತ್​ ನೀರು ಸಂಪರ್ಕ ಕಡಿತಗೊಳಿಸುವುದಲ್ಲದೆ, ಅನಧಿಕೃತ ಹೋಂಸ್ಟೇಗಳನ್ನು ಪೂರ್ಣವಾಗಿ ಸೀಜ್ ಮಾಡಲಾಗುವುದು ಎಂದರು.

ಅಧಿಕೃತ ಅನುಮತಿ ಸಿಗುವ ವರೆಗೆ ಯಾವುದೇ ಕಾರಣಕ್ಕೂ ಹೋಂ ಸ್ಟೇ ನಡೆಸುವುದಿಲ್ಲ ಎಂದು ಮಾಲೀಕರು ಜಿಲ್ಲಾಧಿಕಾರಿಗೆ ಹಾಗೂ ಹಂಪಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಲಿಖಿತವಾಗಿ ಮುಚ್ಚಳಿಕೆ ಪತ್ರ ನೀಡಬೇಕು ಎಂದು ಹೋಂ ಸ್ಟೇ ಮಾಲೀಕರಿಗೆ ಅಧಿಕಾರಿಗಳ ತಂಡ ನಿರ್ದೇಶನ ನೀಡಿತು.

ಹೊಸಪೇಟೆ ಉಪವಿಭಾಗಾಧಿಕಾರಿ ವಿವೇಕಾನಂದ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಪ್ರಭುಲಿಂಗ ತಳಕೇರಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ಆಲಂ ಪಾಷಾ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೀಸಲು ಅರಣ್ಯದಲ್ಲಿ ಕಳ್ಳ ಬೇಟೆ ಯತ್ನ: ಮೂವರು ವಶಕ್ಕೆ
ಕೊಡಗಿನಲ್ಲಿ ಮುಸಲಧಾರೆ: ತ್ರಿವೇಣಿ ಸಂಗಮ ಮುಳುಗಡೆ