ನಿಷೇಧಿತ ವಸ್ತು ಮಾರಾಟ ಮಾಡಿದರೆ ಸೂಕ್ತ ಕ್ರಮ: ಎಸ್ಪಿ

KannadaprabhaNewsNetwork |  
Published : Dec 22, 2023, 01:30 AM IST
ಚಿತ್ರ: ರಾಮರಾಜನ್ | Kannada Prabha

ಸಾರಾಂಶ

ಶಬ್ಧ ಮಾಲಿನ್ಯ ನಿಯಂತ್ರಣ ಮಂಡಳಿ ವಿಂಗಡಿಸಿರುವ ಪ್ರದೇಶಗಳಲ್ಲಿ ನಿಗದಿಪಡಿಸಿರುವ ಡೆಸಿಬಲ್‍ಗಿಂತ ಹೆಚ್ಚಿನ ಡೆಸಿಬಲ್ ಸೌಂಡ್ಸ್ ಸಿಸ್ಟಂ/ಧ್ವನಿವರ್ಧಕಗಳನ್ನು ಉಪಯೋಗಿಸಬಾರದು ಹಾಗೂ ಪ್ರವಾಸಿಗರು ಬಳಸಲು ಯಾವುದೇ ರೀತಿಯ ಅವಕಾಶಗಳನ್ನು ನೀಡಬಾರದು.

ಮಡಿಕೇರಿ: 2024ರ ಹೊಸ ವರ್ಷಾಚರಣೆಯನ್ನು ಸಂಭ್ರಮಿಸುವ ಸಲುವಾಗಿ ಜಿಲ್ಲೆ, ಹೊರಜಿಲ್ಲೆ, ಹೊರರಾಜ್ಯಗಳಿಂದ ಪ್ರವಾಸದ ನಿಮಿತ್ತ ಆಗಮಿಸಿ ಜಿಲ್ಲಾ ವ್ಯಾಪ್ತಿಯಲ್ಲಿನ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್‌ಗಳಲ್ಲಿ ತಂಗಲು ಬರುವ ಪ್ರವಾಸಿಗರು ರೆವಾ ಪಾರ್ಟಿ ನೆಪದಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಸರಬರಾಜು/ಬಳಕೆ ಮಾಡುವುದು ಕಂಡುಬಂದಲ್ಲಿ ಜಿಲ್ಲಾ ಪೊಲೀಸ್ ಕಚೇರಿ ದೂರವಾಣಿಗೆ ಸಂಖ್ಯೆ: 08272-228300, 9480804900 ಕ್ಕೆ ಕರೆ ಮಾಡಿ ಮಾಹಿತಿ ಒದಗಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಶಬ್ಧ ಮಾಲಿನ್ಯ ನಿಯಂತ್ರಣ ಮಂಡಳಿ ವಿಂಗಡಿಸಿರುವ ಪ್ರದೇಶಗಳಲ್ಲಿ ನಿಗದಿಪಡಿಸಿರುವ ಡೆಸಿಬಲ್‍ಗಿಂತ ಹೆಚ್ಚಿನ ಡೆಸಿಬಲ್ ಸೌಂಡ್ಸ್ ಸಿಸ್ಟಂ/ಧ್ವನಿವರ್ಧಕಗಳನ್ನು ಉಪಯೋಗಿಸಬಾರದು ಹಾಗೂ ಪ್ರವಾಸಿಗರು ಬಳಸಲು ಯಾವುದೇ ರೀತಿಯ ಅವಕಾಶಗಳನ್ನು ನೀಡಬಾರದು.

ಹೋಂ ಸ್ಟೇ/ರೆಸಾರ್ಟ್/ಲಾಡ್ಜ್ ಗಳಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಸರಬರಾಜು/ಬಳಕೆ ಮಾಡುವುದು ಕಂಡುಬಂದಲ್ಲಿ ಹೋಂ ಸ್ಟೇ/ರೆಸಾರ್ಟ್/ಲಾಡ್ಜ್ ಗಳ ಮಾಲೀಕರು ಹಾಗೂ ಮಧ್ಯವರ್ತಿಗಳು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವುದು ಮತ್ತು ಮಾಹಿತಿ ನೀಡದೇ ಮಾದಕ ವಸ್ತುಗಳನ್ನು ಮಾರಟ/ಬಳಕೆ ಮಾಡಲು ಸಹಕರಿಸಿರುವುದು ಕಂಡುಬಂದಲ್ಲಿ ಹೋಂ ಸ್ಟೇ/ರೆಸಾರ್ಟ್/ಲಾಡ್ಜ್ ಗಳ ಮಾಲೀಕರು ಹಾಗೂ ಮಧ್ಯವರ್ತಿಗಳ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡು ಪರವಾನಿಗೆ ರದ್ದುಗೊಳಿಸಲಾಗುವುದು.

ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ/ ತುರ್ತು ಸಹಾಯವಾಣಿ 112 ಗೆ ಕರೆ ಮಾಡಬೇಕು. ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಕೋರಿರುವ ಎಸ್‍ಪಿ, ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ