ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದಲ್ಲಿ ಮಂಗಳವಾರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಭಾನುವಳ್ಳಿ ಸುತ್ತಮುತ್ತಲ 20 ಗ್ರಾಮಗಳಿಗೆ ಕುಡಿಯುವ ನೀರಿನ ಸರಬರಾಜಿನಲ್ಲಿ ತೀವ್ರ ತರಹದ ಸಮಸ್ಯೆ ಉಂಟಾಗಿದ್ದು, ಅದರ ತುರ್ತು ನಿರ್ವಹಣೆಗಾಗಿ ಅಗತ್ಯವಿರುವ 35-40 ಲೋಡ್ ಪ್ರಮಾಣದ ಮರಳನ್ನು ನಂದಿಗಾವಿ ಮರಳು ಬ್ಲಾಕಿನಿಂದ ತೆಗೆದುಕೊಳ್ಳಲು ಜಿಲ್ಲಾಡಳಿತ ಅನುಮೋದನೆ ನೀಡಿದ್ದು, ಈ ಕೂಡಲೆ ಗ್ರಾಮೀಣ ಜನರಿಗೆ ಕುಡಿಯುವ ನೀರನ್ನು ಒದಗಿಸುವ ಮಹತ್ವದ ಕಾರ್ಯವನ್ನು ತಕ್ಷಣದಿಂದಲೇ ಆರಂಭಿಸುವಂತೆ ಅವರು ಜಿಲ್ಲಾ ಭೂವಿಜ್ಞಾನ ಮತ್ತು ಗಣಿಗಾರಿಕೆ ಇಲಾಖೆಯ ಹಿರಿಯ ವಿಜ್ಞಾನಿ ರಷ್ಮಿ ಅವರಿಗೆ ಸೂಚಿಸಿದ ಅವರು, ಘಟನೋತ್ತರ ಅನುಮೋದನೆಗಾಗಿ ಸರ್ಕಾರಕ್ಕೆ ಸಲ್ಲಿಸುವಂತೆ ತಿಳಿಸಿದರು.ತಗ್ಗಿ ಗ್ರಾಮದ ಭದ್ರಾ ಚಾನಲ್ನಲ್ಲಿ ರೈತರು ಪಂಪ್ ಸೆಟ್ ಮೂಲಕ ನೀರನ್ನು ಸೆಳೆದುಕೊಳ್ಳುತ್ತಿದ್ದು, ಕುಡಿಯುವ ನೀರಿಗೆ ಹಾಹಾಕಾರ ಕಂಡುಬರುತ್ತಿದೆ. ಈ ಬಗ್ಗೆ ಸಾರ್ವಜನಿಕ ವಲಯದಿಂದ ಕಚೇರಿಗೆ ಸಾಕಷ್ಟು ದೂರುಗಳೂ ಸಹ ಬರುತ್ತಿವೆ. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಬೆಸ್ಕಾಂ ಮತ್ತು ಪೊಲೀಸ್ ಇಲಾಖೆಯ ಸಹಕಾರ ಪಡೆದು, ಅಕ್ರಮವಾಗಿ ನೀರೆತ್ತುತ್ತಿರುವವರ ವಿರುದ್ಧ ದೂರು ದಾಖಲಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಈಗಾಗಲೇ ಆರಂಭಗೊಂಡಿರುವ ಜನಗಣತಿ ಕಾರ್ಯಕ್ಕೆ ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳು ಮನೆಮನೆಗೆ ತೆರಳಿ ಸಮೀಕ್ಷೆ ನಡೆಸುತ್ತಿದ್ದಾರೆ. ಸಾರ್ವಜನಿಕರು ತಮ್ಮ ಮನೆಗೆ ಸಮೀಕ್ಷೆಗಾಗಿ ಬರುವ ಅಧಿಕಾರಿ ಸಿಬ್ಬಂದಿಗೆ ಅಗತ್ಯ ಮಾಹಿತಿ ನೀಡಿ ಸೌಜನ್ಯಯುತವಾಗಿ ನಡೆದುಕೊಳ್ಳುವಂತೆ ಮನವಿ ಮಾಡಿದರು.
ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಹಕ್ಕಿ ಜ್ವರ ಪ್ರಕರಣಗಳು ಕಂಡುಬಂದಿಲ್ಲ. ಆದ್ದರಿಂದ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಜಿಲ್ಲೆಯ ಯಾವುದೇ ಸ್ಥಳದಲ್ಲಿ ಹಕ್ಕಿ-ಪಕ್ಷಿಗಳು ಅನುಮಾನಾಸ್ಪರ ರೀತಿಯಲ್ಲಿ ಮೃತಪಟ್ಟಿದ್ದು ಕಂಡು ಬಂದಲ್ಲಿ ಸಾರ್ವಜನಿಕರು ಮಾಹಿತಿ ನೀಡಿ ಎಂದರು.