ಕನ್ನಡಪ್ರಭ ವಾರ್ತೆ ಕೋಲಾರಸಾರ್ವಜನಿಕರ ಕೆಲಸ ದೇವರ ಕೆಲಸವನ್ನು ಎಲ್ಲರೂ ಒಟ್ಟಾಗಿ ಮಾಡಿದಾಗ ಮಾತ್ರ ಅರ್ಥಪೂರ್ಣವಾಗಲು ಸಾಧ್ಯ ಎಂದು ರಾಜ್ಯ ಆಹಾರ ಖಾತೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.ನಗರದ ಹೊರವಲಯದ ದಕ್ಷಿಣ ಕಾಶೀ ಎಂದೇ ಪ್ರಚಲಿತದಲ್ಲಿರುವ ಅಂತರಗಂಗೆಯ ಶ್ರೀ ಕಾಶೀ ವಿಶ್ವನಾಥ ಸ್ವಾಮಿಯ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ರಸ್ತೆ ನಿರ್ಮಾಣಕ್ಕೆ ಮಾತುಕತೆ
ಈ ಭಾರಿಯ ಬಜೆಟ್ನಲ್ಲಿ ಅಭಿವೃದ್ದಿ ಕೆಲಸಗಳ ಬಗ್ಗೆ ಈಗಾಗಲೇ ಬೇಡಿಕೆ ಸರ್ಕಾರದ ಮುಂದೆ ಪ್ರಸ್ತಾಪಿಸಲಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಮೂರು ಜಿಲ್ಲೆಗಳ ಅಭಿವೃದ್ದಿ ಮಾಡಲು ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪಕ್ಷದ ಸಿದ್ಧಾಂತ ಪಾಲಸಬೇಕುಬಂಗಾರಪೇಟೆ ಶಾಸರ ಎಸ್,ಎನ್.ನಾರಾಯಣಸ್ವಾಮಿ ಅವರ ಅರೋಪಕ್ಕೆ ಪ್ರತಿಕ್ರಿಯಿಸಿ, ನಾವು ಒಂದೇ ಪಕ್ಷದವರಾಗಿದ್ದರೂ ಕೆಲವೊಮ್ಮೆ ಅಭಿಪ್ರಾಯಗಳು ಮೂಡುತ್ತವೆ. ಅದನ್ನು ಪಕ್ಷದ ಸಮ್ಮುಖದಲ್ಲಿ ಸರಿಪಡಿಸಿ ಕೊಂಡು ಎಲ್ಲರೂ ಕಾಂಗ್ರೆಸ್ ಪಕ್ಷದ ಸಿದ್ಧಾಂತದಡಿಯಲ್ಲಿ ಹೋಗಬೇಕು, ಅಭಿವೃದ್ದಿಗೆ ಜನರು ನೀಡಿರುವ ಜನಾದೇಶವನ್ನು ಬೆಳೆಸಿಕೊಂಡು ಮುನ್ನಡೆಯ ಬೇಕಾಗಿದೆ ಎಂದು ತಿಳಿಸಿದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ಉಪಾಧ್ಯಕ್ಷ ಎಲ್.ಎ.ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧಕ್ಷ ಪ್ರಸಾದಬಾಬು, ಎಸ್.ಸಿ.ಘಟಕದ ಅಧ್ಯಕ್ಷ ಜಯದೇವ, ಮಾಜಿ ನಗರಸಭಾ ಸದಸ್ಯ ಸಿ.ಸೋಮಶೇಖರ್, ಕ್ರೈಸ್ತ ಸಮುದಾಯದ ಮುಖಂಡ ಸುಧೀರ್ ಇದ್ದರು.