- ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ದೌರ್ಜನ್ಯ ನಿಯಂತ್ರಣ ಸಭೆ
- ಪರಿಶಿಷ್ಟ ಜಾತಿ, ಪಂಗಡದ ಅಭಿವೃದ್ಧಿಗೆ ಹಲವಾರು ಯೋಜನೆ ಜಾರಿ
- ಯೋಜನೆಗಳ ಕುರಿತ ಮಾಹಿತಿಯನ್ನು ಸಮುದಾಯದ ಜನರಿಗೆ ತಲುಪಿಸಿ- ಕೆಲವೆಡೆ ರುದ್ರಭೂಮಿ ನೀಡಬೇಕೆಂದು ಅರ್ಜಿ
ಅರ್ಜಿ ಸಲ್ಲಿಸಿರುವ ನಿವೇಶನ ರಹಿತ ಪರಿಶಿಷ್ಟ ಜಾತಿ ಮತ್ತು ಪಂಗಡದ ಅರ್ಹ ಫಲಾನುಭವಿಗಳಿಗೆ ಸ್ಥಳ ಗುರುತಿಸಿ ನಿವೇಶನ ಒದಗಿಸಲು ಕ್ರಮವಹಿಸಲಾಗುತ್ತಿದೆ ಎಂದು ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ದಲ್ಜಿತ್ ಕುಮಾರ್ ಹೇಳಿದರು.
ಸರ್ಕಾರ, ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅವು ಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಹೊಣೆ ಆಯಾ ಇಲಾಖೆಗಳ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಅರ್ಹ ಫಲಾನುಭವಿಗಳನ್ನು ಗುರುತಿಸಿ ಸರ್ಕಾರದ ಯೋಜನೆಗಳನ್ನು ತಲುಪಿಸುವಂತೆ ತಿಳಿಸಿದ ಅವರು, ಈ ಯೋಜನೆಗಳ ಕುರಿತ ಮಾಹಿತಿಯನ್ನು ಸಮುದಾಯದ ಜನರಿಗೆ ತಲುಪಿಸಿ ಅವರ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು.
ಚಿಕ್ಕಮಗಳೂರು ತಾಲೂಕು ತಹಸೀಲ್ದಾರ್ ಡಾ. ಸುಮಂತ್ ಸಭೆಗೆ ಮಾಹಿತಿ ನೀಡಿ ಕುರುವಂಗಿ ಗ್ರಾಮದ ಸರ್ವೆ ನಂಬರ್ 42/01 ರಲ್ಲಿ ಸ್ಮಶಾನಕ್ಕೆ ಮೂರು ಎಕರೆ ಜಮೀನು ಮಂಜೂರು ಆಗಿದ್ದು, ಸ್ಥಳ ಪರಿಶೀಲಿಸಲಾಗಿದೆ. ಸದರಿ ಸ್ಥಳದಲ್ಲಿ ಯಾವುದೇ ಒತ್ತುವರಿಯಾಗಿರುವುದು ಕಂಡು ಬಂದಿಲ್ಲ ಎಂದರು.
ಸಭೆಯಲ್ಲಿ ಕೊಪ್ಪ ತಾಲೂಕು ತಹಸೀಲ್ದಾರ್ ಲಿಖಿತ, ಚಿಕ್ಕಮಗಳೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ವಿಜಯ್ ಕುಮಾರ್, ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಚ್.ಡಿ. ರೇವಣ್ಣ ಹಾಗೂ ಅನುಸೂಚಿ ಜಾತಿ ಮತ್ತು ಅನುಸೂಚಿ ಬುಡಕಟ್ಟುಗಳ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯರಾದ ಹುಣಸೆಮಕ್ಕಿ ಲಕ್ಷ್ಮಣ, ರಾಜಶಂಕರ್, ಕೆ.ಎಂ. ರಾಮಣ್ಣ ಇದ್ದರು. 28 ಕೆಸಿಕೆಎಂ 1ಚಿಕ್ಕಮಗಳೂರಿನ ತಾಲೂಕು ಪಂಚಾಯಿತಿಯ ಡಾ. ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ಉಪ ವಿಭಾಗಾಧಿಕಾರಿ ದಲ್ಜಿತ್ ಕುಮಾರ್ ಅಧ್ಯಕ್ಷತೆಯಲ್ಲಿ ಸೋಮವಾರ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆ ನಡೆಯಿತು. ಡಾ. ಸುಮಂತ್, ವಿಜಯಕುಮಾರ್, ರೇವಣ್ಣ, ಲಿಖಿತ ಇದ್ದರು.