ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ಡಿಸಿ ಕಚೇರಿ ತುಂಗಭದ್ರಾ ಸಭಾಂಗಣದಲ್ಲಿ ಶುಕ್ರವಾರ ತ್ಯಾವಣಿಗೆ, ಮೆಳ್ಳೆಕಟ್ಟೆ, ಹಿರೇಮಳಲಿ, ವಲಯ 2ರ ರೈತ ಮುಖಂಡರು, ರೈತರು, ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಫೆ.16ರಂದು ಭದ್ರಾ ಕಾಲುವೆಗೆ ನೀರು ಬಿಟ್ಟಿದ್ದರೂ ಕೊನೆ ಭಾಗಕ್ಕೆ ನೀರು ಬಂದಿಲ್ಲ ಇದರಿಂದ ರೈತರು ಬೆಳೆದ ತೋಟಗಾರಿಕೆ, ಕಬ್ಬು, ಭತ್ತದ ಬೆಳೆಗಳು ನೀರಿಲ್ಲದೇ ಒಣಗುತ್ತಿವೆಯೆಂದು ರೈತರೂ ಹೋರಾಟ ನಡೆಸಿದ್ದಾರೆ ಎಂದರು.
ಕಾಲುವೆ ಮೇಲ್ಭಾಗದ ರೈತರಿಗೆ ಸಾಕಷ್ಟು ನೀರು ಲಭ್ಯವಾಗುತ್ತಿದ್ದು, ಕೊನೆಯ ಭಾಗದ ರೈತರ ಹಿತದೃಷ್ಟಿಯಿಂದ ನೀರನ್ನು ಬಳಸದಂತೆ ಮನವಿ ಮಾಡಲಾಗುವುದು. ಜಿಲ್ಲೆಯ ಚನ್ನಗಿರಿ ತಾಲೂಕು ಸೇರಿ ಕಾಲುವೆಯ ಅಕ್ಕಪಕ್ಕದಲ್ಲಿ ಅನಧಿಕೃತವಾಗಿ ಪಂಪ್ ಸೆಟ್ ಅಳವಡಿಸಿರುವುದನ್ನು ಈಗಾಗಲೇ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದೇವೆ. ವಿದ್ಯುತ್ ಪೂರೈಕೆಯನ್ನು ಆ ಭಾಗದಲ್ಲಿ ನಿಲ್ಲಿಸಲಾಗಿದೆ. ಆದರೂ, ನೀರೆತ್ತಿದರೆ ಅಂತಹ ಪಂಪ್ಸೆಟ್ಗಳು, ಮೋಟಾರುಗಳ ಜಪ್ತಿ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.ಜಿಪಂ ಸಿಇಒ ಡಾ.ಸುರೇಶ ಬಿ.ಇಟ್ನಾಳ್ ಮಾತನಾಡಿ ಭದ್ರಾ ಕಾಲುವೆಯಲ್ಲಿ ಹೂಳೆತ್ತಲು ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ 4 ಲಕ್ಷ ಮಾನವ ದಿನಗಳ ಸೃಜನೆಗೆ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯಕುಮಾರ ಎಂ.ಸಂತೋಷ, ಉಪ ವಿಭಾಗಾಧಿಕಾರಿ ಎನ್.ದುರ್ಗಾಶ್ರೀ, ಹರ್ಷ, ತಹಸೀಲ್ದಾರ್ ಅಶ್ವತ್ಥ್, ನೀರಾವರಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಮಂಜುನಾಥ, ಬೆಸ್ಕಾಂ ಇ.ಇ ಪಾಟೀಲ್ ಇತರರಿದ್ದರು.
ಅಣೆಕಟ್ಟೆಯಲ್ಲಿ ನೀರಿನ ಸಂಗ್ರಹದ ಆಧಾರದಲ್ಲಿ ನೀರಿನ ಹಂಚಿಕೆಯಾಗಿದೆ. ಕಾಲುವೆಗೆ ಅಳವಡಿಸಿರುವ ಅನಧಿಕೃತ ಪಂಪ್ ಸೆಟ್ಗಳ ತೆರವು ಮೂಲಕ ಕಾಲುವೆಯಲ್ಲಿ ಹೆಚ್ಚಿನ ನೀರು ಹರಿಸಿ ಕೊನೆಯ ಭಾಗಕ್ಕೆ ನೀರು ತಲುಪಿಸಬೇಕಾಗಿದೆ. ಈಗಿನ ವೇಳಾಪಟ್ಟಿಯಂತೆ ಫೆ.28ರವರೆಗೆ ನೀರು ಬಿಡುತ್ತಿದ್ದು, ಇದನ್ನು ಇನ್ನೂ ಕೆಲವು ದಿನಗಳ ಕಾಲ ಮುಂದುವರಿಸಲು ಸಚಿವರ ಗಮನಕ್ಕೆ ತರಲಾಗುವುದು. ಕಾಲುವೆಯಲ್ಲಿ ಹೆಚ್ಚಿನ ಕ್ಯೂಸೆಕ್ ನೀರು ಹರಿಸಲು ಮತ್ತು ಭದ್ರಾವತಿ ಭಾಗದಲ್ಲಿ ಅನಧಿಕೃತವಾಗಿ ಹಾಕಿದ ಪಂಪ್ಸೆಟ್ಗಳ ತೆರವುಗೊಳಿಸುವಂತೆಯೂ ಮನವಿ ಮಾಡಲಾಗುವುದು.
....