ರಾಮನಗರ: ನಗರಸಭೆ ವ್ಯಾಪ್ತಿಯ 17ನೇ ವಾರ್ಡಿನಲ್ಲಿ ಯುಐಡಿಎಫ್ ಯೋಜನೆ ಅಡಿಯಲ್ಲಿ ನಿರ್ಮಾಣಗೊಂಡಿರುವ ರಸ್ತೆ ಮತ್ತು ಚರಂಡಿ ಕಾಮಗಾರಿಗಳನ್ನು ನಗರಸಭಾಧ್ಯಕ್ಷ ಕೆ.ಶೇಷಾದ್ರಿ ಶುಕ್ರವಾರ ಪರಿಶೀಲನೆ ನಡೆಸಿ, ವಾರ್ಡಿನ ಸಮಸ್ಯೆಗಳನ್ನು ಆಲಿಸಿದರು.
ಬಳಿಕ ಮಾತನಾಡಿದ ಕೆ.ಶೇಷಾದ್ರಿ, ಬಾಲಗೇರಿ ಹಳೇ ಊರು. ಇಲ್ಲಿ ಹೆಚ್ಚಾಗಿ ಕುಡಿಯುವ ನೀರು, ಸ್ವಚ್ಛತೆ ಸಮಸ್ಯೆ ಕಂಡು ಬಂದಿದೆ. ಮಾರ್ಚ್ 15ರೊಳಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲಾಗುವುದು. ಫಿಲೇಚರಿಗಳ ಕಲ್ಮಶ ಚರಂಡಿಯಲ್ಲಿ ಹಾಕುತ್ತಿರುವುದರಿಂದ ನೀರು ಚರಂಡಿಯಲ್ಲಿ ಸರಾಗವಾಗಿ ಹರಿಯುತ್ತಿಲ್ಲ. ಕೂಡಲೇ ಸ್ವಚ್ಛತೆಗೆ ಕ್ರಮ ವಹಿಸಲಾಗುವುದು ಎಂದರು.
ವಾರ್ಡಿನಲ್ಲಿ ಸೂರಿಲ್ಲದಿವರಿಗೆ ಮನೆ, ಚರಂಡಿಗಳ ಮೇಲೆ ಸ್ಲಾಬ್ ಅಳವಡಿಕೆ, ಸಮುದಾಯ ಭವನದ ಬಗ್ಗೆ ಸ್ಥಳೀಯರು ಗಮನ ಸೆಳೆದಿದ್ದಾರೆ. ನಗರಸಭೆ ನಿಮ್ಮಗಳ ಕಲ್ಯಾಣಕ್ಕೆ ಸದಾ ಸಿದ್ದವಿದ್ದು, ಆದ್ಯತೆ ಮೇರೆಗೆ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಶೇಷಾದ್ರಿ ಹೇಳಿದರು.ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಮಾತನಾಡಿ, ವಾರ್ಡಿನ ಸಮಸ್ಯೆಗಳ ಬಗ್ಗೆ ಅಧ್ಯಕ್ಷರ ಗಮನ ಸೆಳೆದಿದ್ದೆವು. ಅದರಂತೆ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಬಂದು ಪರಿಶೀಲಿಸಿದ್ದು, ಸಮಸ್ಯೆ ಬಗೆಹರಿಸಬೇಕು. ಈ ವಾರ್ಡಿಗೆ ಹೆಚ್ಚಿನ ಅನುದಾನ ನೀಡಿ ಮಾದರಿ ವಾರ್ಡ್ ಆಗಿ ರೂಪಿಸುವಂತೆ ಮನವಿ ಮಾಡಿದರು.
ನಗರಸಭೆ ಉಪಾಧ್ಯಕ್ಷೆ ಗಿರಿಜಮ್ಮ ಗುರುವೇಗೌಡ, ಸದಸ್ಯೆ ನಾಗಮ್ಮ , ಕಂದಾಯ ಅಧಿಕಾರಿ ನಾಗರಾಜು, ಸಮುದಾಯ ಅಧಿಕಾರಿ ನಟರಾಜೇಗೌಡ, ಆರೋಗ್ಯ ನಿರೀಕ್ಷಕ ವಿಜಯ್ ಕುಮಾರ್, ವಕೀಲ ವಿನೋದ್ , ಮುಖಂಡರಾದ ಪ್ರಭು, ಶಂಕರಣ್ಣ, ಶ್ರೀನಿವಾಸ್, ಮುರುಗೇಶ್ ಮತ್ತಿತರರು ಹಾಜರಿದ್ದರು.
27ಕೆಆರ್ ಎಂಎನ್ 1.ಜೆಪಿಜಿರಾಮನಗರ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಶುಕ್ರವಾರ ಬಾಲಗೇರಿ ಬಡಾವಣೆಯಲ್ಲಿ ಯುಐಡಿಎಫ್ ಯೋಜನೆ ಅಡಿಯಲ್ಲಿ ನಡೆದಿರುವ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.