ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಅಂಬೇಡ್ಕರ್ ಭವನ ಸಭಾಂಗಣದಲ್ಲಿ ಜಿಲ್ಲಾ ವ್ಯಾಪ್ತಿಯ ತಾಪಂ ಇಒ, ಗ್ರಾಪಂ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರುಗಳಿಗೆ ಇ-ಸ್ವತ್ತು ತಂತ್ರಾಂಶದ ಕಾರ್ಯಾಗಾರದಲ್ಲಿ ಮಾತನಾಡಿದರು.ಗ್ರಾಮೀಣ ಪ್ರದೇಶಗಳ ಆಸ್ತಿಗಳಿಗೆ ಇ-ಸ್ವತ್ತು ದಾಖಲೆ ವಿತರಣೆಯಲ್ಲಿನ ಸಮಸ್ಯೆಗಳ ಕುರಿತು ಅಧ್ಯಯನ ನಡೆಸಬೇಕು. ಪರಿಹಾರ ಸೂಚಿಸಲು ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಬೇಕು. ಇ-ಸ್ವತ್ತು ತಂತ್ರಾಂಶದಡಿ ಪರಿಷ್ಕೃತ ಸುತ್ತೋಲೆಗಳು ಹಾಗೂ ಸರ್ಕಾರದ ಮಾರ್ಗಸೂಚಿಗಳನ್ವಯ ಇ-ಸ್ವತ್ತು ಮಾಡಬೇಕು ಎಂದರು.
ಸಾರ್ವಜನಿಕರಿಗೆ ನಮೂನೆ 9, 11 ಮತ್ತು 11ಎಗಳನ್ನು ವಿತರಿಸಲು ಮತ್ತು ಇ-ಸ್ವತ್ತು ತಂತ್ರಾಂಶದಡಿ ದಾಖಲಾತಿಗಳನ್ನು ವಿತರಿಸುವಲ್ಲಿ ವಿಳಂಬವಾಗುತ್ತಿರುವುದರ ಬಗ್ಗೆ ಕ್ರಮ ವಹಿಸಬೇಕು. ಇ-ಸ್ವತ್ತು ವಿತರಣೆಯಲ್ಲಿ ಪಾರದರ್ಶಕತೆ ಕಾಪಾಡಬೇಕು. ತೆರಿಗೆ ಸೋರಿಕೆಗೆ ಕಡಿವಾಣ ಹಾಕುವ ಮೂಲಕ ಗ್ರಾಪಂ ವರಮಾನ ಹೆಚ್ಚಳಕ್ಕೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.ಯಾವುದೇ ಇ-ಸ್ವತ್ತು ಅಧಿಕೃತವಾಗಿ ಗ್ರಾಪಂನಲ್ಲಿಯೇ ಮಾಡಬೇಕು. ಅದನ್ನು ಹೊರತುಪಡಿಸಿ ಖಾಸಗಿ ಸೈಬರ್ ಸೆಂಟರ್ ಗಳಲ್ಲಿ ಇ-ಸ್ವತ್ತು ಮಾಡಿದ್ದಲ್ಲಿ ಕ್ರಮ ಜರುಗಿಸಲಾಗುವುದು. ಎಲ್ಲಾ ಪಿಡಿಒಗಳು ಕೇಂದ್ರ ಸ್ಥಾನದಲ್ಲಿ ಇರಬೇಕು, ಕಡ್ಡಾಯವಾಗಿ ಇ-ಹಾಜರಾತಿ ಇರಬೇಕು ಮತ್ತು ಸಾರ್ವಜನಿಕ ಅಹವಾಲು ಸ್ವೀಕರಿಸಿ ಬಗೆಹರಿಸಬೇಕು ಎಂದರು.
ತರಬೇತಿ ಕಾರ್ಯಾಗಾರದ ಸಂಶೋಧನಾ ಅಧಿಕಾರಿಗಳಾದ ಶಶಿಧರ್ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ, ಸರ್ಕಾರವು ಹಂತ ಹಂತವಾಗಿ ಜಾರಿಗೆ ತರುವ ಸುತ್ತೋಲೆಗಳಿಗೆ ಅನುಗುಣವಾಗಿ ಇ-ಸ್ವತ್ತುಗಳನ್ನು ಮಾಡಬೇಕು ಮತ್ತು ಪಂಚತಂತ್ರ ತಂತ್ರಾಂಶದ ನಿರ್ವಹಣೆ, ವಾಣಿಜ್ಯ ಮತ್ತು ಕೈಗಾರಿಕೆ, ವಸತಿ ಮತ್ತು ವಾಣಿಜ್ಯ ಹಾಗೂ ಅಪಾರ್ಟ್ಮೆಂಟ್ ಆಸ್ತಿಗಳ ವಿಧಗಳ ಆಧಾರವಾಗಿ ಕಂದಾಯ ನಿರ್ಧಾರ ಮಾಡುವ ಬಗ್ಗೆ, ದಾಖಲೆಗಳನ್ನು ನಿರ್ವಹಿಸಬೇಕು ಎಂದರು.