ಗುಣಮಟ್ಟದಲ್ಲಿ ಲೋಪವಾದರೆ ಕ್ರಮ: ಶಾಸಕ ಶ್ರೀನಿವಾಸ್‌

KannadaprabhaNewsNetwork |  
Published : Jun 14, 2026, 01:30 AM IST
ಪೋಟೋ 13 : ಸೋಂಪುರ ಹೋಬಳಿಯ ಶಿವಗಂಗೆ ಗ್ರಾ.ಪಂ.ವ್ಯಾಪ್ತಿಯ ಮಾಚನಹಳ್ಳಿ ಗ್ರಾಮದಲ್ಲಿ 1.50 ಕೋಟಿ ವೆಚ್ಚದ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಶಾಸಕ ಎನ್.ಶ್ರೀನಿವಾಸ್ ಚಾಲನೆ ನೀಡಿದರು. | Kannada Prabha

ಸಾರಾಂಶ

ದಾಬಸ್‍ಪೇಟೆ: ಪ್ರತಿ ಗ್ರಾಮದಲ್ಲಿಯೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದ್ದು ಇನ್ನುಳಿದ ಕಾಮಗಾರಿ ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುವುದು ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು

ದಾಬಸ್‍ಪೇಟೆ: ಪ್ರತಿ ಗ್ರಾಮದಲ್ಲಿಯೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದ್ದು ಇನ್ನುಳಿದ ಕಾಮಗಾರಿ ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುವುದು ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ಸೋಂಪುರ ಹೋಬಳಿಯ ಶಿವಗಂಗೆ ಗ್ರಾಪಂ ವ್ಯಾಪ್ತಿಯ ಮಾಚನಹಳ್ಳಿ ಗ್ರಾಮದಲ್ಲಿ 1.50 ಕೋಟಿ ವೆಚ್ಚದ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳು ಪ್ರಗತಿಯಾಗುತ್ತವೆ. ಕಾಮಗಾರಿ ನಿರ್ವಹಿಸುತ್ತಿರುವ ಇಂಜಿನಿಯರ್ ಮತ್ತು ಗುತ್ತಿಗೆದಾರರು ಗುಣಮಟ್ಟ ಪಾಲನೆಗೆ ಗಮನ ನೀಡಬೇಕು. ಜನರು ಕೂಡ ಕಾಮಗಾರಿ ಬಗ್ಗೆ ನಿಗಾವಹಿಸಬೇಕು. ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕೆಂದರು.

ಮಾಚನಹಳ್ಳಿ ಹಾಗೂ ಮಾಚನಹಳ್ಳಿ ಕಾಲೋನಿ ಗ್ರಾಮಗಳ ಅಭಿವೃದ್ಧಿಗೆ ಸುಮಾರು 1.50 ರು.ಗಳ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗುತ್ತದೆ. ಹಾಗೂ ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಹಂತ ಹಂತವಾಗಿ ಪರಿಹರಿಸುತ್ತೇನೆ ಎಂದು ಹೇಳಿದರು.

ಕ್ಷೇತ್ರದಲ್ಲಿ ಸ್ಥಳೀಯ ಗುತ್ತಿಗೆದಾರಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ ಕಾಮಗಾರಿ ಪಟ್ಟಿ ಮಾಡಲಾಗಿದೆ. ಸ್ಥಳೀಯ ವೈಜ್ಞಾನಿಕವಾಗಿ ಸುಸಜ್ಜಿತ ಹಾಗೂ ಪಕ್ಷಕ್ಕೆ ದುಡಿದ ಗುತ್ತಿಗೆದಾರರಿಗೆ ಅವಕಾಶ ನೀಡಲಾಗುವುದು. ಈಗಾಗಲೇ ಕೆಲ ಮುಖಂಡರಿಗೆ ಕಾಮಗಾರಿ ಮಾಡುವಂತೆ ನಿರ್ದೇಶಿಸಲು ಸೂಚಿಸಲಾಗಿದೆ. ಗೌರಾಪುರ ಮಾರ್ಗವಾಗಿ ತುಮಕೂರಿಗೆ ಹೋಗುವ ರಸ್ತೆಯೂ ಕಿರಿದಾಗಿದ್ದು ಶೀಘ್ರದಲ್ಲೇ ಅಗಲೀಕರಣ ಮಾಡಿ ರಸ್ತೆ ನಿರ್ಮಿಸುತ್ತೇನೆ. ಗಂಗೇನಪುರ ರಸ್ತೆ ಸಮಸ್ಯೆ ಗಮನದಲ್ಲಿದ್ದು ಟೆಂಡರ್ ಆದ ತಕ್ಷಣ ಕಾಮಗಾರಿಗೆ ಚಾಲನೆ ನೀಡುತ್ತೇನೆ. ಐಸಾಮಿಪಾಳ್ಯದಲ್ಲಿ ನಿರ್ಮಿಸುವ ಬಸವೇಶ್ವರ ದೇವಾಲಯಕ್ಕೆ ಶಾಸಕರ ಅನುದಾನದಿಂದ ಐದು ಲಕ್ಷ ಹಾಗೂ ವೈಯಕ್ತಿಕವಾಗಿಯೂ ಸಹಕಾರ ನೀಡುತ್ತೇನೆ. ನಿಮ್ಮ ಸಮಸ್ಯೆಗಳು ಏನಿದ್ದರೂ ಸಹ ನನ್ನ ಗಮನಕ್ಕೆ, ಸ್ಥಳೀಯ ಮುಖಂಡರ ಗಮನಕ್ಕೆ ತನ್ನಿ, ನನ್ನ ನಂಬರ್ ಹಾಗೂ ಆಪ್ತ ಸಹಾಯಕನ ನಂಬರ್ ಗೆ ಕರೆ ಮಾಡಿ ಗಮನಕ್ಕೆ ತಂದರೆ ಪ್ರಾಮಾಣಿಕವಾಗಿ ಪರಿಹರಿಸುತ್ತೇನೆ ಎಂದು ಹೇಳಿದರು.

ಅಗಳಕುಪ್ಪೆ ಗೋವಿಂದರಾಜು ಮಾತನಾಡಿ, ನಮ್ಮ ಶಾಸಕರು ಪ್ರತಿಯೊಂದು ಹಳ್ಳಿಗೂ ಭೇಟಿ ನೀಡುತ್ತಿದ್ದು, ಗ್ರಾಮದ ಜನರನ್ನೇ ನೇರವಾಗಿ ಭೇಟಿ ಮಾಡಿ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಇಂತಹ ಶಾಸಕರು ಸಿಕ್ಕಿರುವುದು ಕ್ಷೇತ್ರಕ್ಕೆ ಅನುಕೂಲವಾಗಿದೆ ಎಂದರು.

ಈ ಸಂದರ್ಭದಲ್ಲಿ ಎನ್‌ಪಿಎ ಸದಸ್ಯ ಅಂಚೆಮನೆ ಪ್ರಕಾಶ್, ಗ್ರಾಪಂ ಮಾಜಿ ಅಧ್ಯಕ್ಷ ಸಂತೋಷ್, ಮಾಜಿ ಸದಸ್ಯ ಬೈರೇಗೌಡ, ಮುಖಂಡರಾದ ಗೊಟ್ಟಿಗೆರೆ ಮೂರ್ತಿ, ಚೇತನ್, ಸಿದ್ದರಾಜು, ನಾರಾಯಣ್, ಯೋಗಾನಂದೀಶ್, ಹನುಮಂತರಾಜು, ಮನು ಕಾಚನಹಳ್ಳಿ ಇತರರಿದ್ದರು.

ಪೋಟೋ 13 : ಸೋಂಪುರ ಹೋಬಳಿಯ ಶಿವಗಂಗೆ ಗ್ರಾಪಂ ವ್ಯಾಪ್ತಿಯ ಮಾಚನಹಳ್ಳಿ ಗ್ರಾಮದಲ್ಲಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಶಾಸಕ ಶ್ರೀನಿವಾಸ್ ಚಾಲನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

17ರಂದು ಡಾ.ಶಾಮನೂರು ಜನ್ಮದಿನ, ಸಾಮೂಹಿಕ ವಿವಾಹ
53 ಅತಿಥಿ ಶಿಕ್ಷಕರ ನಿಯೋಜನೆಗೆ ಕ್ರಮ: ಶಾಂತನಗೌಡ