ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿರುವ ದಾಳಿ ಖಂಡನೀಯ. ಆದರೆ, ಹಮಾಸ್ ಉಗ್ರಗಾಮಿಗಳ ಕೃತ್ಯವನ್ನು ಇಂಡಿಯಾ ಒಕ್ಕೂಟ ಬೆಂಬಲಿಸುತ್ತಿರುವುದು ಖಂಡನೀಯ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಭಯೋತ್ಪಾದಕ ಕೃತ್ಯ ಎಲ್ಲೇ ನಡೆದರೂ ಅದು ಖಂಡನೀಯ. ಅಂತಹ ಕೃತ್ಯಗಳಿಗೆ ಯಾರೂ ಬೆಂಬಲಿಸಬಾರದು. ಇಸ್ರೇಲ್ನಲ್ಲಿ ಸಾಕಷ್ಟು ಜನ ಸಾವನ್ನಪ್ಪಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನುಡಿದರು.