ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಸಾಪ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಕಸಾಪ 111ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅತಿಥಿ ಉಪನ್ಯಾಸಕರಾಗಿ ಆಗಮಿಸಿದ್ದ ಬಾಗಲಕೋಟೆ ಶಾಸಕರ ಮಾದರಿ ಶಾಲೆಯ ಮುಖ್ಯಶಿಕ್ಷಕ ಸಾಹಿತಿ ಸಂಗಮೇಶ ಸಣ್ಣತಂಗಿ ಮಾತನಾಡಿ, ಕನ್ನಡಿಗರ ಹಿತ ಕಾಯುವುದು, ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ, ನೆಲ, ಜಲ ಸಂರಕ್ಷಣೆ, ಇವುಗಳ ಬೆಳವಣಿಗೆ, ಕನ್ನಡ ಗ್ರಂಥ ಪ್ರಕಟಿಸುವುದು, ಸಮ್ಮೇಳನಗಳ ಆಯೋಜನೆ, ಜನಜಾಗೃತಿ ಮೂಡಿಸುವ ಧ್ಯೇಯ್ಯೋದ್ದೇಶಗಳೊಂದಿಗೆ ಸದಾಕಾಲ ಕಾರ್ಯೋನ್ಮುಖವಾದ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಹೆಮ್ಮೆಯ, ಅಭಿಮಾನದ ಸಂಸ್ಥೆಯಾಗಿದೆ ಎಂದರು.ಕಸಾಪ ನಾಡು ನುಡಿ ಒಳಿತಿಗಾಗಿ ವೈಶಿಷ್ಟಪೂರ್ಣ ಕಾರ್ಯಕ್ರಮ, ಸಮ್ಮೇಳನಗಳನ್ನು ಆಯೋಜಿಸಿ ಜನಸಾಮಾನ್ಯರು ಕನ್ನಡ ಕಾರ್ಯಕ್ರಮಗಳಲ್ಲಿ ಭಾಗವಹಿಸುವ, ಕನ್ನಡಿಗರನ್ನು ಒಗ್ಗೂಡಿಸುವ ಕಾರ್ಯ ಮಾಡುತ್ತಿದೆ. ರಾಜ್ಯ, ಜಿಲ್ಲೆ, ತಾಲೂಕು, ಹೋಬಳಿ ಮಟ್ಟದಲ್ಲಿ ಕಸಾಪ ಘಟಕಗಳಿವೆ. ದೇಶ ವಿದೇಶಗಳಲ್ಲಿಯೂ ಕನ್ನಡಪರ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಶಿರೂರಿನ ಹಿರಿಯರು, ಕನ್ನಡ ಪಂಡಿತರಾದ ಎ.ಸಿ. ಚೌಕಿಮಠ, ಮಹಾಲಿಂಗಪುರದ ಹಿರಿಯ ಸಾಹಿತಿ ಗುರುರಾಜ ಖಾಸನೀಸ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಎ.ಸಿ. ಚೌಕಿಮಠ, ಸಾಹಿತಿ ಗುರುರಾಜ ಖಾಸನೀಸ್ ಮಾತನಾಡಿದರು.ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಆನಂದ ಹಲಕುರ್ಕಿ, ಆರ್. ಸಿ. ಚಿತ್ತವಾಡಗಿ, ಜಿಲ್ಲಾ ಕಸಾಪ ಮಹಿಳಾ ಪ್ರತಿನಿಧಿ ಜಯಶ್ರೀ ಮುರನಾಳ, ಪಿ.ಎ. ಚೌಕಿಮಠ ಇನ್ನಿತರರು ಪಾಲ್ಗೊಂಡಿದ್ದರು.ಜಿಲ್ಲೆಯಲ್ಲಿ ನಿರಂತರ ಕಾರ್ಯಕ್ರಮ ಆಯೋಜಿಸುವಲ್ಲಿ ಜಿಲ್ಲಾ ಕಸಾಪ ಮುಂಚೂಣಿಯಲ್ಲಿದೆ. ಅಲಕ್ಷಿತ ಸಾಹಿತಿಗಳಿಗೆ, ಕಲಾವಿದರಿಗೆ ವೇದಿಕೆ ಒದಗಿಸಿಕೊಟ್ಟು ಪೂಜ್ಯರ, ಹಿರಿಯರ, ಹಿರಿಯ ಸಾಹಿತಿಗಳ ಮಾರ್ಗದರ್ಶನದೊಂದಿಗೆ ಜಿಲ್ಲಾ ಸಮ್ಮೇಳನಗಳು, ತಾಲೂಕು ಸಮ್ಮೇಳನಗಳು, ಶಿಕ್ಷಕ-ಸಾಹಿತಿಗಳ ಸಮ್ಮೇಳನ, ವಿಭಾಗ ಮಟ್ಟದ ಸಾಂಸ್ಕೃತಿಕ ಸಮ್ಮೇಳನ ನಡೆಸಿದೆ. ವಿಶ್ವವಿದ್ಯಾಲಯಗಳು, ಅಕಾಡೆಮಿಗಳ ಸಹಯೋಗದೊಂದಿಗೂ ಹತ್ತು ಹಲವು ಕಾರ್ಯಕ್ರಮಗಳನ್ನು ಜಿಲ್ಲೆಯ ವಿವಿದೆಡೆ ನಡೆಸಲಾಗಿದೆ. ಜಿಲ್ಲೆಯಲ್ಲಿ ನಿರಂತರ ಕಾರ್ಯಕ್ರಮಗಳನ್ನು ಆಯೋಜಿಸಿ 30ಕ್ಕೂ ಹೆಚ್ಚು ಕೃತಿಗಳನ್ನು ಜಿಲ್ಲಾ ಕಸಾಪ ಪ್ರಕಟಿಸಿದೆ
- ಶಿವಾನಂದ ಶೆಲ್ಲಿಕೇರಿ ಕಸಾಪ ಜಿಲ್ಲಾಧ್ಯಕ್ಷ