
ಕನ್ನಡಪ್ರಭ ವಾರ್ತೆ, ತುಮಕೂರು
ಸಾಹಿತ್ಯ ಸಮ್ಮೇಳನಗಳು ನಮ್ಮ ಹಿಂದಿನ ಬರಹಗಾರರು ಕಂಡ ಕನ್ನಡದ ಉಜ್ವಲ ಭವಿಷ್ಯದ ಕನಸನ್ನು ಸಾಕಾರಗೊಳಿಸುವ ಪೂರಕ ವೇದಿಕೆಗಳಾಗುತ್ತಿವೆ. ಆದರೆ ಅದಕ್ಕಾಗಿ ಹೊರಗೆ ಹೇಗೋ ಹಾಗೆಯೇ ಅಂತರಂಗದಲ್ಲೂ ‘ಉಸಿರು ಕನ್ನಡವಾಗುವಂತೆ’ ಪ್ರತಿಯೊಬ್ಬರೂ ಪಣತೊಡಬೇಕು ಎಂದು ಕರೆ ನೀಡಿದರು.
ಮನೆ-ಮನೆಗಳಲ್ಲಿ ಪುಸ್ತಕ ಸಂಗ್ರಹ, ನಿರಂತರ ಓದು, ವಿಚಾರ ವಿನಿಮಯ, ಸಂವಾದ, ಕವಿತಾ ವಾಚನ, ಕಥಾ ರಚನೆ ತರಬೇತಿ ಮುಂತಾದ ಸಾಹಿತ್ಯ ಚಟುವಟಿಕೆಗಳನ್ನು ಉತ್ತೇಜಿಸುವ ಅಗತ್ಯವಿದೆ ಎಂದ ಅವರು, ಬರಹಗಾರರು, ಓದುಗರು, ಸಾಹಿತ್ಯ ಪೋಷಕರು, ಸ್ವಯಂಸೇವಾ ಸಂಘಟನೆಗಳು ಹಾಗೂ ಮಕ್ಕಳ ಸಾಹಿತ್ಯ ಪರಿಷತ್ತು ಒಂದಾಗಿ ಸಾಹಿತ್ಯದ ಆಗುಹೋಗುಗಳ ವಿಚಾರ ಚರ್ಚಿಸಿ, ನವೀನ ಮಾರ್ಗಗಳನ್ನು ಶೋಧಿಸುವ ಮೂಲಕ ಸದಭಿರುಚಿಯ ಸಾಹಿತ್ಯ ರಚನೆ ಹಾಗೂ ಪ್ರಸಾರದತ್ತ ಕ್ರಿಯಾಶೀಲರಾಗಬೇಕು ಎಂದು ಸಲಹೆ ನೀಡಿದರು.ಶಾಲೆಗಳಲ್ಲೂ ಹೆಚ್ಚು ಹೆಚ್ಚು ಸಾಹಿತ್ಯ ಚಟುವಟಿಕೆಗಳು ಆಯೋಜನೆಯಾಗಲಿ ಎಂದು ಆಶಿಸಿದ ಅವರು, ಕನ್ನಡದ ಭವಿಷ್ಯ ಯುವ ಪೀಳಿಗೆಯ ಕೈಯಲ್ಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್. ಸಿದ್ಧಲಿಂಗಪ್ಪ, ತಹಸೀಲ್ದಾರ್ ರಾಜೇಶ್ವರಿ ಹಾಗೂ ಕನ್ನಡ ಸೇನೆ ಪದಾಧಿಕಾರಿಗಳಾದ ಧನಿಯಾಕುಮಾರ್, ಶಬ್ಬೀರ್ ಅಹ್ಮದ್, ನಟರಾಜ್ ಶೆಟ್ಟಿ, ಮಲ್ಲಿಕಾರ್ಜುನಯ್ಯ ಉಮಾ ಮಹೇಶ್, ಗುರು ರಾಘವೇಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.