ಯಮಕನಮರಡಿಯಲ್ಲಿ ಕಾರ್ಯಕರ್ತರ ಹರ್ಷ

KannadaprabhaNewsNetwork |  
Published : Jun 05, 2024, 12:30 AM IST
ಸಂಭ್ರಮ | Kannada Prabha

ಸಾರಾಂಶ

ಯಮಕನಮರಡಿ: ಯಮಕನಮರಡಿ ಕ್ಷೇತ್ರದಾದ್ಯಂತ ಕಾಂಗ್ರೆಸ್‌ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು. ಬಹುತೇಕ ಗ್ರಾಮಗಳಲ್ಲಿ ಕಾರ್ಯಕರ್ತರು ಗುಲಾಲು ಎರಚಿ, ಕುಣಿದು ಕುಪ್ಪಳಿಸಿದರು. ಅಭಿಮಾನಿಗಳು ಭವ್ಯವಾದ ವಾದ್ಯ ಮೇಲಗಳೊಂದಿಗೆ ಮೆರವಣಿಗೆ ನಡೆಸಿದರು.

ಯಮಕನಮರಡಿ: ಯಮಕನಮರಡಿ ಕ್ಷೇತ್ರದಾದ್ಯಂತ ಕಾಂಗ್ರೆಸ್‌ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು. ಬಹುತೇಕ ಗ್ರಾಮಗಳಲ್ಲಿ ಕಾರ್ಯಕರ್ತರು ಗುಲಾಲು ಎರಚಿ, ಕುಣಿದು ಕುಪ್ಪಳಿಸಿದರು. ಅಭಿಮಾನಿಗಳು ಭವ್ಯವಾದ ವಾದ್ಯ ಮೇಲಗಳೊಂದಿಗೆ ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ಕಿರಣಸಿಂಗ್ ರಜಪೂತ ಮಾತನಾಡಿ, ಚಿಕ್ಕ ವಯಸ್ಸಿನಲ್ಲೆ ಸಂಸದೆಯಾಗಿ ಆಯ್ಕೆಯಾದ ಪ್ರಿಯಾಂಕಾ ಜಾರಕಿಹೊಳಿ ಗೆಲುವು ಡಾ.ಬಾಬಾಸಾಹೇಬ ಅಂಬೇಡ್ಕರರು ಬರೆದ ಸಂವಿಧಾನದ ಗೆಲುವಾಗಿದೆ. ಕ್ಷೇತ್ರದಲ್ಲಿ ಜಿಲ್ಲೆಯಲ್ಲಿ ಕೈಗೊಂಡ ಪ್ರಗತಿ ಕಾರ್ಯಗಳೇ ನಮ್ಮ ಗೆಲುವಿಗೆ ಶ್ರೀರಕ್ಷೆಯಾಗಿದೆ ಎಂದರು. ಈ ಸಂದರ್ಭದಲ್ಲಿ ವೀರಣ್ಣ ಬಿಸಿರೊಟ್ಟಿ, ಭರಮ ದೂಪದಾಳ, ಅಭಿಜಿತ ಪಾಟೀಲ, ಉಲ್ಲಾಸ ಕಾಪಸಿ, ಜಾವೇದ ಜಕಾತಿ, ಗಿರೀಶ್‌ ಮಿಶ್ರಕೋಟಿ, ರಾಜೇಸಾಬ ಫಣಿಬಂಧ, ಸಿದ್ದಪ್ಪಾ ಶಿಳ್ಳಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೃಷಿಯಲ್ಲಿ ಹೊರ ದೇಶಗಳೊಂದಿಗೆ ಪೈಪೋಟಿ ನಡೆಸಿ
ಕ್ರೀಡಾ ಸಾಧಕಿ ಶಗುನ್‌ಗೆ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಸನ್ಮಾನ