ಕನ್ನಡಪ್ರಭ ವಾರ್ತೆ ಮಣಿಪಾಲ
ಈ ಸಾಲಿನಲ್ಲಿ ಇಂಡಿಯನ್ ಓವರ್ಸೀಸ್ ಬ್ಯಾಂಕ್ ನ ನಿವೃತ್ತ ಅಧ್ಯಕ್ಷ ಡಾ.ಎಂ.ನರೇಂದ್ರ, ಸಿನೆಮಾನಟಿ, ನಿರ್ಮಾಪಕಿ ಡಾ. ಜಯಮಾಲಾ ರಾಮಚಂದ್ರ, ಮಣಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ವೈದ್ಯಕೀಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎಚ್. ಮಂಜುನಾಥ ಹಂದೆ, ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಮಾಜಿ ಡೀನ್ ಡಾ. ಎಡ್ಕತೋಡಿ ಸಂಜೀವ ರೈ ಹಾಗೂ ಹಿರಿಯ ಕೃಷಿಕ ಬೆಳ್ತಂಗಡಿಯ ಬಿ.ಕೆ. ದೇವ ರಾವ್ ಅವರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.
ಸಹಯೋಗ ಸಂಸ್ಥೆಗಳ ಮುಖ್ಯಸ್ಥರಾದ ಟಿ. ಸತೀಶ್ ಪೈ, ವಾಸಂತಿ ರಾಮದಾಸ್ ಪೈ, ಅಶೋಕ್ ಪೈ ಉಪಸ್ಥಿತರಿದ್ದರು. ಮಾಹೆ ಮಣಿಪಾಲದ ಸಹಕುಲಾಧಿಪತಿ ಡಾ. ಎಚ್.ಎಸ್.ಬಲ್ಲಾಳ್ ಸ್ವಾಗತಿಸಿದರು. ಉಪಕುಲಪತಿ ಡಾ.ಎಂ.ಡಿ.ವೆಂಕಟೇಶ್ ಅಭಿನಂದನಾ ಭಾಷಣ ಮಾಡಿದರು, ಡಾ. ರವಿರಾಜ್ ಎನ್.ಎಸ್. ವಂದಿಸಿದರು.ತಾಯಿ- ಮಗಳಿಗೆ ಕಂಚಿನ ಪದಕ
ಈ ಸಂದರ್ಭದಲ್ಲಿ ಕರ್ನಾಟಕ ಅಂಚೆ ವೃತ್ತದ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಎಸ್.ರಾಜೇಂದ್ರ ಕುಮಾರ್, ಬೆಂಗಳೂರು ದಕ್ಷಿಣ ವಲಯದ ಪೋಸ್ಟ್ ಮಾಸ್ಟರ್ ಜನರಲ್ ಎಲ್.ಕೆ.ದಾಸ್, ಉತ್ತರ ಕರ್ನಾಟಕ ವಲಯದ ಪೋಸ್ಟ್ ಮಾಸ್ಟರ್ ಜನರಲ್ ಕರ್ನಲ್ ಸುಶೀಲ್ ಕುಮಾರ್ ಹಾಗೂ ಜನರಲ್ ಮ್ಯಾನೇಜರ್ ಡಿಎಪಿ ಜೂಲಿಯಾ ಮೊಹಪಾತ್ರ ಉಪಸ್ಥಿತರಿದ್ದರು.