ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಗ್ರಾಮೀಣರ ಆಟದ ಸೊಗಸು
ಜನತೆ ತಮ್ಮ ಕೆಲಸಗಳಿಗೆ ಬಿಡುವು ನೀಡಿ ಈ ಗ್ರಾಮೀಣ ಪ್ರದೇಶದಲ್ಲಿ ಆಡುವ ಆಟೋಟಗಳಲ್ಲಿ ಸಂತೋಷದಿಂದ ಭಾಗವಹಿಸಿದ್ದಾರೆ. ಇದನ್ನು ನೋಡುವುದೇ ಒಂದು ಆನಂದ. ಈ ಬಾರಿ ಮಹಿಳಾ ತಂಡಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರುವುದು ಖುಷಿ ತಂದಿದೆ. ಇಲ್ಲಿ ಗೆದ್ದ ತಂಡಗಳು ಕೊಯಮುತ್ತೂರಿನಲ್ಲಿ ನಡೆಯುವ ಕ್ರೀಡೋತ್ಸವದಲ್ಲಿ ಭಾಗಿಯಾಗುತ್ತವೆ ಎಂದರು.ಈಶ ಗ್ರಾಮೀಣ ಕ್ರೀಡೋತ್ಸವ ಹತ್ತು ಹಲವು ವಿಶೇಷಗಳನ್ನು ಒಳಗೊಂಡಿದೆ. ಇಲ್ಲಿ ಭಾಗವಹಿಸುವ ಮಂದಿ ತಮ್ಮ ದಿನನಿತ್ಯದ ಕೆಲಸದ ಒತ್ತಡಗಳನ್ನು ಮೀರಿ ತಮ್ಮಿಷ್ಟದ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಪ್ರತಿಭಾ ಪ್ರದರ್ಶನ ತೋರುತ್ತಾರೆ. ಆ ಮೂಲಕ ಕ್ರೀಡೆಗೆ ವಯಸ್ಸಾಗಲಿ ಕುಲ ಗೋತ್ರಗಳ ಹಂಗಾಗಲಿ ಯಾವುದು ಇಲ್ಲ ಎ₹ದರು.ಆಟದಲ್ಲಿ ತೋರುವ ಉತ್ಸಾಹವೆ ಮುಖ್ಯ ಎಂಬುದನ್ನು ನಾವು ಮನಗಣಬಹುದು. ಈಶ ಕೇಂದ್ರದಲ್ಲಿ ನಡೆಯುವ ಯಾವುದೇ ಕಾರ್ಯಕ್ರಮ ವಿಶ್ವಮಾನವ ಸಂದೇಶವನ್ನೇ ಸಾರುತ್ತಿದೆ. ಇಂತಹ ಕಡೆ ಬಂದು ಹೋಗುವುದು ನನ್ನ ಬದುಕಿನಲ್ಲಿ ಅತ್ಯಂತ ಮುಖ್ಯವಾದ ದಿನಚರಿಯಾಗಿದೆ ಎಂದರು. ಹುಣ್ಣಿಮೆ ದಿನವಾದ ಭಾನುವಾರ ಈಶ ಕೇಂದ್ರದಲ್ಲಿ ಜನ ಜಾತ್ರೆಯೇ ಸೇರಿತ್ತು. ಒಂದೆಡೆ ಗ್ರಾಮೀಣ ಕ್ರೀಡೋತ್ಸವ ಮತ್ತೊಂದೆಡೆ ನಾಗಮಂಟಪದ ನಾಗರಾಜನ ದರ್ಶನ,112 ಅಡಿಯ ಧ್ಯಾನಸ್ಥ ಈಶ ಮೂರ್ತಿಯ ದಿವ್ಯದರ್ಶನಕ್ಕೆ ಪ್ರವಾಸಿಗರು ಮುಗಿಬಿದ್ದಿದ್ದರು.
ಸಿಕೆಬಿ-4 ಚಿಕ್ಕಬಳ್ಳಾಪುರ ಈಶಾ ಕೇಂದ್ರದಲ್ಲಿ ನಡೆದಿರುವ ಗ್ರಾಮೀಣ ಕ್ರೀಡೋತ್ಸವದಲ್ಲಿ ಕೆ.ಜಿ.ಎಫ್ ಸಿನಿಮಾ ನಟಿ ಶ್ರೀನಿಧಿ ಶೆಟ್ಟಿ ಭಾಗಿಯಾಗಿರುವ ಚಿತ್ರ.