ಆದರ್ಶ ಕೃಷಿ ಸಮಾಜ ನಿರ್ಮಿಸಿದ ಪ್ರೊ.ಎಂ. ಡಿ. ನಂಜುಂಡಸ್ವಾಮಿ

KannadaprabhaNewsNetwork |  
Published : Aug 22, 2024, 12:51 AM IST
ತುಮಕೂರು ವಿವಿ ಪ್ರೊ. ಎಂ.ಡಿ. ನಂಜುಂಡಸ್ವಾಮಿ ಅಧ್ಯಯನ ಪೀಠ ಮತ್ತು ಸ್ನಾತಕೋತ್ತರ ಅರ್ಥಶಾಸ್ತ್ರ ಅಧ್ಯಯನ ವಿಭಾಗ ಬುಧವಾರ ಆಯೋಜಿಸಿದ್ದ ‘ಕರ್ನಾಟಕ ರೈತ ಚಳುವಳಿಯಲ್ಲಿ ಪ್ರೊ.ಎಂ.ಡಿ. ನಂಜುಂಡಸ್ವಾಮಿ ಅವರ ಪಾತ್ರ’ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಉದ್ಘಾಟಿಸಿದರು. | Kannada Prabha

ಸಾರಾಂಶ

ಆದರ್ಶ ಕೃಷಿ ಸಮಾಜ ನಿರ್ಮಿಸಿದ ಪ್ರೊ.ಎಂ. ಡಿ. ನಂಜುಂಡಸ್ವಾಮಿ

ಕನ್ನಡಪ್ರಭ ವಾರ್ತೆ ತುಮಕೂರುನಾಡಿನಲ್ಲಿ ಆದರ್ಶ ಕೃಷಿ ಸಮಾಜವನ್ನು ನಿರ್ಮಿಸಿದ ಪ್ರೊ. ಎಂ.ಡಿ. ನಂಜುಂಡಸ್ವಾಮಿ ಅವರು ರೈತ ಸಂಘಟನೆಗಳಿಗೆ ವಿಜ್ಞಾನ ಮತ್ತು ಕಾನೂನಿನ ಸ್ಪರ್ಶಕೊಟ್ಟರು ಎಂದು ದಾವಣಗೆರೆಯ ಹೊನ್ನಾಳಿ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಧನಂಜಯ ಬಿ. ಜಿ. ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಪ್ರೊ.ಎಂ.ಡಿ. ನಂಜುಂಡಸ್ವಾಮಿ ಅಧ್ಯಯನ ಪೀಠ ಮತ್ತು ಸ್ನಾತಕೋತ್ತರ ಅರ್ಥಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಬುಧವಾರ ಆಯೋಜಿಸಿದ್ದ ಕರ್ನಾಟಕ ರೈತ ಚಳುವಳಿಯಲ್ಲಿ ಪ್ರೊ.ಎಂ.ಡಿ. ನಂಜುಂಡಸ್ವಾಮಿ ಅವರ ಪಾತ್ರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.ಕೃಷಿಯನ್ನು ವಾಣಿಜ್ಯೀಕರಣಗೊಳಿಸಿ, ಬೆಳೆ ವಿಮೆ ಮಾಡಿಸಿದರೆ ಯಾವ ರೈತನೂ ಆತ್ಮಹತ್ಯೆ ಮಾಡಿಕೊಳ್ಳವುದಿಲ್ಲ. ಸರ್ಕಾರಗಳು ರೈತರಿಗೆ ಉಚಿತ ಯೋಜನೆಗಳನ್ನು ಕೊಡುವ ಬದಲು ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಿಬೇಕು. ಬೆಳೆಗೆ ನೀರು, ಕೃಷಿ ಕಾರ್ಯಗಳಿಗೆ ವಿದ್ಯುತ್ ಸರಬರಾಜು ಮಾಡಿದರೆ ರೈತನ ಬೆಳೆ ಸಮೃದ್ಧವಾಗಿರುತ್ತದೆ ಎಂದು ಸರ್ಕಾರಗಳಿಗೆ ಪ್ರೊ.ಎಂ.ಡಿ. ನಂಜುಂಡಸ್ವಾಮಿ ಅವರು ಮನವರಿಕೆ ಮಾಡಿಸಲು ಚಳುವಳಿಗಳನ್ನು ಆಯೋಜಿಸುತ್ತಿದ್ದರು ಎಂದು ತಿಳಿಸಿದರು.ಅನ್ನದಾತರ ದಾಸ್ಯ ಮತ್ತು ದಾರಿದ್ರ್ಯವನ್ನು ಬಿಡುಗಡೆಗೊಳಿಸಿದ ಪ್ರೊ.ಎಂ.ಡಿ. ನಂಜುಂಡಸ್ವಾಮಿ ಅವರು ರೈತರ ಆತ್ಮದ ಧ್ವನಿ ಕೇಳಿದ ಮೊದಲಿಗ. ರೈತರ ಹೋರಾಟವನ್ನು ಒಪ್ಪದ ಭಾರತೀಯ ಸಮಾಜಕ್ಕೆ ಮನವರಿಕೆ ಮಾಡಿಸಲು, ಆಳುವ ವರ್ಗದವರ ದರ್ಪ, ಅಸಮಾನತೆಯನ್ನು ಹೋಗಲಾಡಿಸಲು ರೈತರ ಋಣದಲ್ಲಿ ದೇಶವಿದೆ. ರೈತ ಸಾಲಗಾರನಲ್ಲ, ಸರ್ಕಾರ ಸಾಲಗಾರ ಎಂದು ವೇದಿಕೆಗಳಲ್ಲಿ ಗುಡುಗಿದ ಉಗ್ರ ಚಳುವಳಿಯ ಸೌಮ್ಯ ನಾಯಕ ಪ್ರೊ. ಎಂ.ಡಿ. ನಂಜುಂಡಸ್ವಾಮಿ ಎಂದರು.ರೈತರಿಗೆ ಸ್ವಾಭಿಮಾನದ ದೀಕ್ಷೆಯನ್ನು ನೀಡಿ, ಯುವಕರನ್ನು ಪರ್ಯಾಯ ರಾಜಕೀಯಕ್ಕೆ ಪರಿಚಯಿಸಿ, ಕನ್ನಡ ಸಾಹಿತ್ಯ ಲೋಕಕ್ಕೆ ಹೊಸ ಪಾತ್ರ, ಶಬ್ದಗಳ ಪರಿಕಲ್ಪನೆಗಳನ್ನು ನೀಡಿ, ರಾಜ್ಯದ ಭವಿಷ್ಯಕ್ಕಾಗಿ ಎರಡನೇ ತಲೆಮಾರಿನ ನಾಯಕರನ್ನು ಸೃಷ್ಟಿಸಿ, ಮಹಿಳಾ ಸಬಲೀಕರಣಕ್ಕಾಗಿ ಹೋರಾಡಿದವರು ಪ್ರೊ. ಎಂ.ಡಿ. ನಂಜುಂಡಸ್ವಾಮಿ. ರಾಜಕೀಯದಲ್ಲಿ ಶೂದ್ರರು ಮುಂದಾಳತ್ವ ವಹಿಸಿದರೆ ರಾಜ್ಯದ ಅಭಿವೃದ್ಧಿ ಎಂಬ ಸಮಭಾವನೆಯನ್ನು ಹೊಂದಿದ್ದರು ಅವರು ಎಂದು ತಿಳಿಸಿದರು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಜೀವನದಲ್ಲಿ ಪರಿಪೂರ್ಣತೆ ಹೊಂದಲು ಮಹನೀಯರ ಬದುಕಿನ ಅಂಶಗಳನ್ನು ಅಳವಡಿಸಿಕೊಳ್ಳಬೇಕು. ರೈತರಿಗೆ ಗೌರವಿಸುವುದು ಧರ್ಮ. ಎರಡು ದಶಕಗಳ ಕಾಲ ರೈತರಿಗಾಗಿ ಹೋರಾಡಿದ ಪ್ರೊ.ಎಂ.ಡಿ. ನಂಜುಂಡಸ್ವಾಮಿ ಅವರ ಬದುಕು ದೇಶದ ಎಲ್ಲ ರೈತರಿಗೂ ಮಾದರಿಎಂದು ಹೇಳಿದರು. ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನಕುಮಾರ್‌ಕೆ.,ಪ್ರೊ. ಎಂ.ಡಿ. ನಂಜುಂಡಸ್ವಾಮಿ ಅಧ್ಯಯನ ಪೀಠದ ನಿರ್ದೇಶಕ ಡಾ. ಮುನಿರಾಜುಎಂ., ಸ್ನಾತಕೋತ್ತರ ಅರ್ಥಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷ ಪ್ರೊ. ಜಯಶೀಲ, ಪ್ರಾಧ್ಯಾಪಕ ವಿಲಾಸ್ ಎಂ.ಕದ್ರೋಳ್ಕರ್ ಉಪಸ್ಥಿತರಿದ್ದರು. ಪ್ರಾಧ್ಯಾಪಕ ಪ್ರೊ.ರವೀಂದ್ರಕುಮಾರ್ ಬಿ. ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳನ್ನು ಅಧ್ಯಯನ ಪ್ರವಾಸಕ್ಕೆ ಟಿಪ್ಪರಲ್ಲಿ ಕರೆದೊಯ್ದ ಹೆಡ್‌ಮಾಸ್ಟರ್‌!
ಬೆಂಗಳೂರು ರೇಸ್‌ಕೋರ್ಸ್‌ ಕುಣಿಗಲ್‌ಗೆ ಶಿಫ್ಟ್‌ : ಸಂಪುಟ