ಅಡ್ಡಹೊಳೆ: ಸ್ಚೇರಿಂಗ್‌ ತುಂಡಾಗಿ ಅಂಗಡಿಗೆ ನುಗ್ಗಿದ ಲಾರಿ

KannadaprabhaNewsNetwork |  
Published : Jun 26, 2024, 12:32 AM IST
ಅಡ್ಡಹೊಳೆ: ಅಂಗಡಿಗೆ ನುಗ್ಗಿದ ಲಾರಿ-ಹಾನಿ | Kannada Prabha

ಸಾರಾಂಶ

ಲಾರಿ ಚಾಲಕ ಕಾರ್ತಿಕ್ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಉಪ್ಪಿನಂಗಡಿ: ಸ್ಟೇರಿಂಗ್ ತುಂಡಾಗಿ ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿಯೊಂದು ಹೆದ್ದಾರಿ ಪಕ್ಕದ ಅಂಗಡಿಗೆ ನುಗ್ಗಿದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ೭೫ರ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿನ ಕಡೆಗೆ ಕೆಂಪು ಮಣ್ಣು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಗುಂಡ್ಯ ಸಮೀಪ ಶಿರಾಡಿ ಗ್ರಾಮದ ಅಡ್ಡಹೊಳೆ ಸೇತುವೆ ದಾಟಿ ಹೋಗುತ್ತಿದ್ದಂತೆ ಸ್ಟೇರಿಂಗ್ ತುಂಡಾಗಿದೆ. ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಪಕ್ಕದ ತಂಗಚ್ಚನ್ ಎಂಬವರ ಮಾಲಕತ್ವದ ಟಯರ್ ಪಂಕ್ಚರ್‌ ಅಂಗಡಿ ಹಾಗೂ ಹೋಟೆಲ್‌ಗೆ ನುಗ್ಗಿದೆ. ಈ ವೇಳೆ ಅಂಗಡಿಯಲ್ಲಿ ಇಬ್ಬರು ಮಹಿಳೆಯರಿದ್ದು ಓಡಿ ಹೋಗಿ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಘಟನೆಯಿಂದಾಗಿ ಎರಡು ಅಂಗಡಿಗಳಿಗೂ ಸಂಪೂರ್ಣ ಹಾನಿಯಾಗಿದೆ. ಲಾರಿ ಚಾಲಕ ಕಾರ್ತಿಕ್ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಾರತೀಯರ ಕರೆತರಲು ವಿಶೇಷ ವಿಮಾನ ಮಾಡಿ: ಮೋದಿಗೆ ಸಿಎಂ ಸಿದ್ದು ಪತ್ರ
100ಕ್ಕೂ ಕನ್ನಡಿಗರ ಹೊತ್ತು ಬಂತು ಮೊದಲ ವಿಮಾನ