ರೇಖಾಚಿತ್ರ ವಿಶ್ವ ದಾಖಲೆಗೆ ಸೇರ್ಪಡೆ

KannadaprabhaNewsNetwork |  
Published : Mar 19, 2025, 12:30 AM IST
ಚಿತ್ರದುರ್ಗ ಎರಡನೇ ಪುಟದ ಟಿಂಟ್  ಬಾಟಂ    | Kannada Prabha

ಸಾರಾಂಶ

ಎಂಸ್ಯಾಂಡ್‍ನಿಂದ ತಯಾರಿಸಿರುವ ಆಂಜನೇಯಸ್ವಾಮಿ ರೇಖಾಚಿತ್ರ ನೋಬೆಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‍ಗೆ ಸೇರಿರುವ ಕುರಿತು ಮಂಜುನಾಥರೆಡ್ಡಿ ಮಾಹಿತಿ ನೀಡಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಎಂ ಸ್ಯಾಂಡ್ ಬಳಸಿ ವಿಶ್ವದಲ್ಲಿಯೇ ಅತಿ ದೊಡ್ಡದಾದ ಆಂಜನೇಯಸ್ವಾಮಿಯ ರೇಖಾಚಿತ್ರ ಬಿಡಿಸಿರುವುದು ನೋಬೆಲ್ ಬುಕ್ ಆಫ್ ವರ್ಲ್ಡ್ ರೇಕಾರ್ಡ್‌ಗೆ ಸೇರ್ಪಡೆಯಾಗಿದ್ದು, ಮೆಡಲ್ ಹಾಗೂ ಸರ್ಟಿಫಿಕೆಟ್ ಸಿಕ್ಕಿದೆ ಎಂದು ಸಾಯಿಕ್ಯಾಡ್ ಕಂಪನಿಯ ಮಂಜುನಾಥರೆಡ್ಡಿ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುರುವನೂರು ಗ್ರಾಮದಲ್ಲಿ ಸಂಘಟಿ ಹನುಮಂತಪ್ಪನವರಿಗೆ ಸೇರಿದ 5 ಎಕರೆ ಜಮೀನಿನಲ್ಲಿ ಒಂದು ವಾರಗಳ ಕಾಲ ಶ್ರಮಪಟ್ಟು ಆಂಜನೇಯಸ್ವಾಮಿ ರೇಖಾಚಿತ್ರವನ್ನು ಬಿಡಿಸಿದ್ದೇವೆ. ಇದಕ್ಕೆ ಜನಾರ್ಧನ್ ಹಾಗೂ ಮೋಹನ್ ಅವರು ಕೈಜೋಡಿಸಿದ್ದು, ಇಷ್ಟು ದೊಡ್ಡದಾದ ರೇಖಾಚಿತ್ರವನ್ನು ಇದುವರೆವಿಗೂ ಯಾರೂ ಬಿಡಿಸಿರಲಿಲ್ಲ ಎಂದರು.

ಮೊದಲು ತರಕಾರಿಯಿಂದ ಆಂಜನೇಯ ಸ್ವಾಮಿಯ ರೇಖಾಚಿತ್ರ ಬಿಡಿಸಬೇಕೆಂದುಕೊಂಡಿದ್ದೆವು. ಅಷ್ಟೊಂದು ಪ್ರಮಾಣದಲ್ಲಿ ತರಕಾರಿಯನ್ನು ಹೊಂದಿಸುವುದು ಕಷ್ಟವಾಗುತ್ತದೆನ್ನುವ ಕಾರಣಕ್ಕೆ ಎಂಸ್ಯಾಂಡ್‍ನಿಂದ ಸಿದ್ಧಪಡಿಸಿರುವ ರೇಖಾಚಿತ್ರವನ್ನು ಸಹಸ್ರಾರು ಭಕ್ತರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಮಂಜುನಾಥ ರೆಡ್ಡಿ ಹರ್ಷ ವ್ಯಕ್ತಪಡಿಸಿದರು.

ದೇವರ ಸೇವೆ ಅಂದುಕೊಂಡು ಬಿಡಿಸಿರುವ ಇಷ್ಟೊಂದು ದೊಡ್ಡ ಗಾತ್ರದ ಆಂಜನೇಯಸ್ವಾಮಿ ರೇಖಾಚಿತ್ರಕ್ಕೆ ನೋಬಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದೊರಕಿರುವುದು ನಮಗೆ ಎಲ್ಲಿಲ್ಲದ ಖುಷಿ ಕೊಟ್ಟಿದೆ ಎಂದು ಸಂತಸ ವ್ಯಕ್ತಪಡಿಸಿದರು. ಈ ವೇಳೆ ಜನಾರ್ಧನ್ ಹಾಗೂ ಮೋಹನ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!