ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈದಿಗಳ ಸನ್ನಡತೆ ಆಧಾರದ ಮೇಲೆ ಬಿಡುಗಡೆ, ಆಶಾ ಕಾರ್ಯಕರ್ತೆಯರಿಗೆ ಹೆಚ್ಚುವರಿ 1 ಸಾವಿರ ರು. ಪ್ರೋತ್ಸಾಹಧನ ವಿತರಣೆ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.
*ರಾಜ್ಯದ ವಿವಿಧ ಕೇಂದ್ರ ಕಾರಾಗೃಹದಲ್ಲಿರುವ 48 ಜೀವಾವಧಿ ಬಂದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆಗೆ ತೀರ್ಮಾನ
*ಆಶಾ ಕಾರ್ಯಕರ್ತೆಯರಿಗೆ ಹೆಚ್ಚುವರಿಯಾಗಿ ಒಂದು ಸಾವಿರ ರುಪಾಯಿ ಪ್ರೋತ್ಸಾಹದನ ನೀಡಲು ನಿರ್ಧಾರ*ಬೆಳಗಾವಿ ಜಿಲ್ಲೆಯ ಬೆನಕನಹಳ್ಳಿ ಗ್ರಾಪಂ, ಹಿಂಡಲಂಗಾ ಗ್ರಾಪಂ ಹಾಗೂ ಹಿರೇಬಾಗೇವಾಡಿ ಗ್ರಾಪಂಗಳು ಪಟ್ಟಣ ಪಂಚಾಯಿತಿಗಳನ್ನಾಗಿ ಮೇಲ್ದರ್ಜೆಗೆ
- ರಾಮನಗರ ಜಿಲ್ಲೆಯ ಗನಾಳು ಬಳಿಯ ಅರ್ಕಾವತಿ ನದಿಯಿಂದ ನೀರು ಎತ್ತಿ ರಾಮನಗರ ಮತ್ತು ಕನಕಪುರ ತಾಲೂಕಿನ 46 ಕೆರೆಗಳನ್ನು ತುಂಬಿಸುವ 110 ಕೋಟಿ ರು. ಯೋಜನೆಗೆ ಅನುಮೋದನೆ
- ಚನ್ನಪಟ್ಟಣ ತಾಲೂಕಿನಲ್ಲಿ ಸರಗೂರಿನಿಂದ ಹೊಸಪುರಕ್ಕೆ ಸೇತುವೆ ನಿರ್ಮಾಣ ಕಾಮಗಾರಿಗೆ 15 ಕೋಟಿ ರು. ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಒಪ್ಪಿಗೆ- ಮಾಗಡಿ, ರಾಮನಗರ, ಕುಣಿಗಲ್ ತಾಲೂಕುಗಳಿಗೆ ನೀರು ಪೂರೈಸಲು 90 ಕೋಟಿ ರು. ಮೊತ್ತದ ಸತ್ತೇಗಾಲ ಕುಡಿಯುವ ನೀರು ಯೋಜನೆಗೆ ಅನುಮೋದನೆ.
- ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಭವನದ ಕಟ್ಟಡ ನಿರ್ಮಾಣ ಉದ್ದೇಶಕ್ಕಾಗಿ ಅಣಕನೂರು ಗ್ರಾಮದ ಅನುಮೋದಿತ ಬಡಾವಣೆಯಲ್ಲಿ 3404 ಚ.ಮೀ. ವಿಸ್ತೀರ್ಣದ ನಿವೇಶನವನ್ನು ಉಚಿತವಾಗಿ ಮಂಜೂರು ಮಾಡಲು ನಿರ್ಣಯ.