ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಶಾಸಕರು, ಪುತ್ರರು ಸೇರಿದಂತೆ ಉಚ್ಚಾಟನೆಗೊಳಿಸಿರುವ ಆದೇಶವನ್ನು ರಾಜ್ಯ ನಾಯಕರು ಹಿಂಪಡೆದರೆ ಸ್ವಾಗತಿಸುತ್ತೇವೆ. ಜಿಲ್ಲೆಯ ವಿಚಾರದಲ್ಲಿ ನಮ್ಮ ನಾಯಕರು ಕೈಗೊಳ್ಳುವ ಯಾವುದೇ ನಿಲುವು, ತೀರ್ಮಾನಗಳಿಗೆ ನಾವು ಬದ್ಧ ಎಂದರು.
ಒಂದು ಮನೆಯೆಂದಾಗ ಸಣ್ಣಪುಟ್ಟ ಮನಸ್ತಾಪ, ಗೊಂದಲ, ವ್ಯತ್ಯಾಸಗಳೆಲ್ಲಾ ಸಹಜ. ಅಂದ ಮೇಲೆ ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದು, ಕೆಲವೊಂದಿಷ್ಟು ವ್ಯತ್ಯಾಸ ಸಹಜ. ಅದನ್ನೆಲ್ಲಾ ಮರೆತು, ಲೋಕಸಭೆ ಚುನಾವಣೆ ಗೆಲುವನ್ನೇ ಗುರಿಯಾಗಿಟ್ಟುಕೊಂಡು ನಾವು ಕೆಲಸ ಮಾಡಲಿದ್ದೇವೆ, ದಾವಣಗೆರೆ ಸೇರಿದಂತೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳನ್ನೂ ಗೆಲ್ಲುವ ಗುರಿ ನಮ್ಮದು ಎಂದು ಅವರು ಹೇಳಿದರು.ವಿಧಾನಸಭೆ ಚುನಾವಣೆ ಸೋಲಿನ ನಂತರ ಪಕ್ಷದಲ್ಲಿ ಸಣ್ಣಪುಟ್ಟ ವ್ಯತ್ಯಾಸ, ಅಸಮಾಧಾನ ಇವೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ವಹಿಸಿಕೊಂಡಿದ್ದಾರೆ. ನೂತನ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಪಕ್ಷ ಸಂಘಟನೆ ಬಲಿಷ್ಟವಾಗಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ, ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಮತ್ತೆ ನರೇಂದ್ರ ಮೋದಿಯವರಿಗೆ ಪ್ರಧಾನಿ ಮಾಡುವ ಗುರಿ ನಮ್ಮದು ಎಂದು ಅವರು ತಿಳಿಸಿದರು.
ರ, ಗ್ರಾಮೀಣ ಪ್ರದೇಶಕ್ಕೆ ವಿದ್ಯುತ್ ಸಹ ಪೂರೈಸದ ಸರ್ಕಾರ ಇದು ಎಂದು ಅವರು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.ಗ್ಯಾರಂಟಿ ಸುಳ್ಳು ಭರವಸೆಗಳನ್ನು ಈಡೇರಿಸುವಲ್ಲೇ ಕಾಂಗ್ರೆಸ್ ಸರ್ಕಾರ ಹೊಯ್ದಾಡುತ್ತಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರೆಲ್ಲಾ ತಮ್ಮ ಕುರ್ಚಿ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ. ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿ, ಸಿಎಂ ಆಗಲು ಡಿ.ಕೆ.ಶಿವಕುಮಾರ, ಸತೀಶ ಜಾರಕಿಹೊಳಿ, ಡಾ.ಜಿ. ಪರಮೇಶ್ವರ ಒಳಗೊಳಗೆ ಪ್ರಯತ್ನ ನಡೆಸಿದ್ದಾರೆ. ಇಂತಹ ಸರ್ಕಾರದ ಬಗ್ಗೆ ಜನ ಭ್ರಮನಿರಸನರಾಗಿದ್ದಾರೆ ಎಂದು ಅವರು ಟೀಕಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ, ಮಾಜಿ ಶಾಸಕ ಡಾ. ಯತೀಂದ್ರ ಭ್ರಷ್ಟಾಚಾರ ಬಟಾಬಯಲಾಗಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವತಃ ರಾಜ್ಯದ ಗುತ್ತಿಗೆದಾರರೆ ಧ್ವನಿ ಎತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಯಾರು ಯಾರಿಗೆ ಎಷ್ಟೆಷ್ಟು ದುಡ್ಡು ಕೊಟ್ಟಿದ್ದೇವೆಂಬುದಾಗಿ ಗುತ್ತಿಗೆದಾರರು ಹೇಳಿಕೆ ನೀಡುತ್ತಿರುವುದನ್ನು, ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ಸಿನ ಹಿರಿಯ ನಾಯಕರ ರಾಜಕೀಯ ಚಟುವಟಿಕೆ ಗಮನಿಸಿದರೆ, ಈ ಸರ್ಕಾರಕ್ಕಂತೂ ಆಯಸ್ಸು ಇಲ್ಲವೆಂಬುದು ಸ್ಪಷ್ಟವಾಗುತ್ತದೆ ಎಂದು ಎಸ್.ಎಂ. ವೀರೇಶ ಹನಗವಾಡಿ ತಿಳಿಸಿದರು.