ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಗಣಪತಿ ದೇವಾಲಯದಿಂದ ಆಚಾರ್ಯರ ಭಾವ ಚಿತ್ರಗಳ ಮೆರವಣಿಗೆಯಲ್ಲಿ ವಿಪ್ರ ಬಂಧುಗಳು, ಬ್ರಾಹ್ಮಣ ಸಮಾಜದ ವಿವಿಧ ಸಂಘಟನೆಗಳ ಮುಖಂಡರು, ವೇದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮೆರವಣಿಗೆಯು ಚಂಡೇ ವಾದನ, ವಿಶ್ವೇಶ್ವರಯ್ಯ ವೇಷಧಾರಿ, ಪಟ ಕುಣಿತ, ನಾದ ಸ್ವರ, ಡೊಳ್ಳು ಕುಣಿತಗಳ ಜಾನಪದ ಕಲಾ ಪ್ರಕಾರದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ನೆಹರು ನಗರದ ಶಂಕರ ಮಠದಲ್ಲಿ ಪೂಜೆ ಸಲ್ಲಿಸಿ ನಂತರ ಶ್ರೀ ಗಣಪತಿ ದೇವಾಲಯದಲ್ಲಿ ಸಂಪನ್ನಗೊಂಡಿತು.ತದ ನಂತರ ಶ್ರೀಶಂಕರರ ಬಗ್ಗೆ ವೇ.ಬ್ರ. ಶಿವಶಂಕರ ದೀಕ್ಷಿತ್ ಅವರಿಂದ ಪ್ರವಚನ ಕಾರ್ಯಕ್ರಮ ನಡೆಯಿತು.
ಶಂಕರ ಜಯಂತಿ ಅಂಗವಾಗಿ ಸಾಮೂಹಿಕ ಉಪನಯನ, ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಂಡ್ಯ ಶಾಸಕ ರವಿಕುಮಾರ್ ಗಣಿಗ ಭಾಗವಹಿಸಿದ್ದರು.
ಮೇ 7ಕ್ಕೆ ಕೃಷಿ ಜನಜಾಗೃತಿ ಅಭಿಯಾನ: ಜೋಗಿಗೌಡಮಂಡ್ಯ: ಸಮಗ್ರ ಸಾವಯವ ಸುಸ್ಥಿರ ಕೃಷಿ ಟ್ರಸ್ಟ್ನಿಂದ ಮೇ 7ರಂದು ಬೆಳಗ್ಗೆ 10.30ಕ್ಕೆ ತಾಲೂಕಿನ ಕೆ.ಗೌಡಗೆರೆ ಗ್ರಾಮದಲ್ಲಿ ಕೃಷಿ ಜನ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ನ ಅಧ್ಯಕ್ಷ ಜೋಗೀಗೌಡ ತಿಳಿಸಿದರು.
ಕೃಷಿ ಮಾರುಕಟ್ಟೆ ವ್ಯವಸ್ಥೆ, ಸಮಗ್ರ ಕೃಷಿ ವಿಚಾರ, ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಉಪಯೋಗಿಸಿಕೊಳ್ಳುವುದರ ಕುರಿತು ಹಾಗೂ ಇನ್ನೂ ಹಲವು ವಿಚಾರಗಳ ಕುರಿತು ರೈತರ ಸಮ್ಮುಖದಲ್ಲಿ ಪರಿಹಾರ ಕಂಡುಕೊಳ್ಳುವುದಕ್ಕಾಗಿ ಜನಜಾಗೃತಿ ಅಭಿಯಾನ ಹಮ್ಮಿಕೊಂಡಿರುವುದಾಗಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.ರೈತರಿಗಾಗಿ ಸಂಸ್ಥೆ ಮೂಲಕ ಹಂತ ಹಂತವಾಗಿ ಕೃಷಿ ಜ್ಞಾನವನ್ನು ನೀಡುವುದು. ಭೂಮಿಗೆ ತಕ್ಕಂತೆ ಬೆಳೆ ಬೆಳೆಯುವುದು, ಆ ಬೆಳೆಯನ್ನು ಸಮಗ್ರ ಕೃಷಿಯಲ್ಲಿ ಮಾಡುವುದರ ಬಗ್ಗೆ ಅರಿವು ಮೂಡಿಸುವುದು. ಹೆಚ್ಚು ಲಾಭ ಬರುವಂತಹ ಒಂದೇ ಪ್ರದೇಶದಲ್ಲಿ ಪೂರಕ ಬೆಳೆಗಳನ್ನು ಬೆಳೆಯುವ ಕುರಿತು ಚರ್ಚಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಕಾಂತರಾಜು, ರಾಜು ಇದ್ದರು.