ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ಬಿ.ಜಿ.ನಗರದ ಬಿಜಿಎಸ್ ಸಭಾಂಗಣದಲ್ಲಿ ಆದಿಚುಂಚನಗಿರಿ ಅಣ್ವಿಕ ವೈದ್ಯಕೀಯ ಸಂಸ್ಥೆ, ಆದಿಚುಂಚನಗಿರಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಅನುವಾದಾತ್ಮಕ ಸಂಶೋಧನೆಗಾಗಿ ಆರೋಗ್ಯ ವಿಜ್ಞಾನಗಳಲ್ಲಿ ಅಂತರಶಿಸ್ತೀಯ ವಿಧಾನಗಳು ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
ಶ್ರೀಮಠವು ಇದು ದೇಶದ ಪ್ರಸಿದ್ಧ ಮಠಗಳಲ್ಲಿ ಒಂದಾಗಿ 1800ಕ್ಕೂ ಹೆಚ್ಚು ವರ್ಷಗಳ ಇತಿಹಾಸವನ್ನು ಹೊಂದಿದೆ. ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಗಳ ಮೂಲಕ ಸಮಾಜವನ್ನು ಸ್ವಾವಲಂಬಿಗಳನ್ನಾಗಿ ಮಾಡಲು, ಸಾಮಾಜಿಕ ಸಮಾನತೆ ಮತ್ತು ಸರಿಸಮಾನತೆ, ಸಮೃದ್ಧಿ, ಉತ್ಕೃಷ್ಟತೆ, ಸಶಕ್ತೀಕರಣ, ಉದ್ಯಮಶೀಲತೆ ಮತ್ತು ಜ್ಞಾನೋದಯಕ್ಕಾಗಿ ಎಲ್ಲರಿಗೂ ಅಮೂಲ್ಯವಾದ ಶಿಕ್ಷಣ ನೀಡುವ ಕೆಲಸ ಮಾಡುತ್ತಿದೆ ಎಂದು ಶ್ರೀಮಠದ ಕಾರ್ಯವನ್ನು ಬಣ್ಣಿಸಿದರು.ಶಿಕ್ಷಣ ತಜ್ಞರು, ಸಮಾಜ ಸೇವಕರು ಮತ್ತು ಮಹಾನ್ ಸಂತರಾಗಿದ್ದ ಭೈರವೈಕ್ಯ ಡಾ.ಬಾಲಗಂಗಾಧರನಾಥ ಶ್ರೀಗಳು ಸುಮಾರು ಐದು ದಶಕಗಳ ಕಾಲ ಆಧ್ಯಾತ್ಮಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಉಲ್ಲೇಖನೀಯ ಕೊಡುಗೆ ನೀಡಿದ್ದಾರೆ. ಅವರ ದರ್ಶನ ಮತ್ತು ಆಧ್ಯಾತ್ಮಿಕ ಜ್ಞಾನವನ್ನು ಶಿಕ್ಷಣ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ ಜೋಡಿಸುವ ಅವರ ದರ್ಶನವು ಇಂದಿಗೂ ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತಿದೆ ಎಂದರು.
ಇಂಟರ್-ಡಿಸಿಪ್ಲಿನರಿ ಅಪ್ರೋಚಸ್ ಇನ್ ಹೆಲ್ತ್ ಸೈನ್ಸಸ್ ಫಾರ್ ಟ್ರಾನ್ಸ್ಲಷನಲ್ ರಿಸರ್ಚ್ ಎಂಬ ವಿಷಯದ ಕುರಿತು ಆಯೋಜಿಸಿರುವ ಈ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಚರ್ಚೆಗಳು ಹೊಸ ವಿಚಾರಗಳನ್ನು ಪ್ರೇರೇಪಿಸುತ್ತದೆ. ಅಂತರಾಷ್ಟ್ರೀಯ ಸಹಯೋಗವನ್ನು ಉತ್ತೇಜಿಸಿ ಸಂಶೋಧನೆಯನ್ನು ಪ್ರೋತ್ಸಾಹಿಸುತ್ತದೆ ಮತ್ತು ಆರೋಗ್ಯ ವಿಜ್ಞಾನದ ಉನ್ನತಿಗೆ ಮಹತ್ವದ ಕೊಡುಗೆ ನೀಡುತ್ತದೆ. ಈ ಸಮ್ಮೇಳನದ ಉಪಯುಕ್ತತೆ ದೇಶಕ್ಕೆ ಕೊಡುಗೆಯಾಗಲಿ ಎಂದರು.
ಇಂದಿನ ಸಮ್ಮೇಳನವನ್ನು ನೋಡಿದಾಗ ಡಾ.ನಿರ್ಮಲಾನಂದನಾಥಶ್ರೀಗಳ ದೂರದೃಷ್ಟಿ ಕಾಣಿಸುತ್ತಿದೆ. ಪ್ರಸ್ತುತ ಜನರು ಎದುರಿಸುತ್ತಿರುವ ಆರೋಗ್ಯ ಸಮಸ್ಯೆಗಳಿಗೆ ವಿಭಿನ್ನ ಪರಿಹಾರಗಳ ಅವಶ್ಯಕತೆ ಇದೆ. ನಮ್ಮ ಭಾರತೀಯ ಪದ್ಧತಿಯು ಬಹಳ ಹಿಂದೆಯೇ ಎಲ್ಲಾ ರೀತಿಯ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ಮಟ್ಟಿಗೆ ವಿಕಸನಗೊಂಡಿತ್ತು. ನಿಮ್ಮ ಆಧುನಿಕ ವ್ಯವಸ್ಥೆಯು ನಮ್ಮ ಸನಾತನ ಮತ್ತು ಪ್ರಾಚೀನ ಜ್ಞಾನ ಪದ್ಧತಿಯನ್ನು ಸಂಯೋಜಿಸಿದರೆ ಮಾತ್ರ, ನಾವು ಒಂದು ಸಮಗ್ರ ಪರಿಹಾರವನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಇಂದು ಹೆಲ್ತ್ ಕೇರ್ ಅನಿವಾರ್ಯ: