ಕನ್ನಡಪ್ರಭ ವಾರ್ತೆ ಉಡುಪಿ
ಇದು ಕೇಂದ್ರದ ಸರ್ಕಾರದ ಯೋಜನೆ ವಿಫಲಗೊಳಿಸುವ ವ್ಯವಸ್ಥಿತ ಷಡ್ಯಂತ್ರವಾಗಿದೆ. ಸಿಎಂ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಈ ವಿಚಾರದಲ್ಲಿ ಬಡ ರೋಗಿಗಳಿಗೆ ಕಿರುಕುಳ ಕೊಟ್ಟು ರಾಜಕೀಯ ಮಾಡಬಾರದು ಎಂದು ಸಲಹೆ ಮಾಡಿದರು. ಇ.ಡಿ.ಗೆ ದಲಿತರು ಎಂಬ ಪ್ರತ್ಯೇಕತೆ ಇಲ್ಲ:
ಗೃಹ ಸಚಿವ ಪರಮೇಶ್ವರ್ ಅವರ ಸಂಸ್ಥೆಗಳ ಮೇಲಿನ ಇಡಿ ದಾಳಿಯಲ್ಲಿ ಕೇಂದ್ರ ಸರ್ಕಾರದ ಹಸ್ತಕ್ಷೇಪ ಇಲ್ಲ. ಅದೊಂದು ಸ್ವತಂತ್ರ ಸಂಸ್ಥೆ ಎಂದು ಮನಮೋಹನ್ ಸಿಂಗ್ ಅವರೇ ಹೇಳಿದ್ದರು. ತಮ್ಮ ರಕ್ಷಣೆಗೋಸ್ಕರ ಮುಖ್ಯಮಂತ್ರಿ, ದಲಿತ ನಾಯಕನ ಮೇಲೆ ಇ.ಡಿ. ದಾಳಿ ಎಂದು ಬಿಂಬಿಸುತ್ತಿದ್ದಾರೆ. ಇಡಿಗೆ ದಲಿತ ದಲಿತೇತರರು ಅಂತ ಇರುವುದಿಲ್ಲ. ಅಕ್ರಮ ವ್ಯವಹಾರ, ಸಂಪತ್ತು, ಆರ್ಥಿಕ ಅಪರಾಧ ಇರುವ ಕಡೆ ದಾಳಿಯಾಗುತ್ತದೆ. ದಾಳಿಯನ್ನು ಜಾತಿ ವರ್ಗಕ್ಕೆ ಸೀಮಿತ ಮಾಡಬಾರದು ಎಂದರು.ಚುಟ್ಪುಟ್ ಅಂದ್ರೆ ಅವಮಾನ:
ಛಲವಾದಿಗೆ ಮುತ್ತಿಗೆ ಸರಿಯಲ್ಲ:
ಬಿಜೆಪಿಯ ದಲಿತ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಕಾಂಗ್ರೆಸ್ ಪಕ್ಷದ ದಿಗ್ಬಂದನ, ಪ್ರತಿಪಕ್ಷ ನಾಯಕನ ಧ್ವನಿಯನ್ನು ಮೊಟಕುಗೊಳಿಸುವ ಕೆಲಸ. ದಲಿತರ ಬಗ್ಗೆ ಮಾತನಾಡುವ ಕಾಂಗ್ರೆಸಿಗರು ದಲಿತ ನಾಯಕನನ್ನು ನಡೆಸಿಕೊಂಡ ರೀತಿ ಸರಿಯಿಲ್ಲ. ನಾರಾಯಣಸ್ವಾಮಿ ಅವರು ತಾವು ಬಳಸಿದ ನಾಯಿ ಶಬ್ದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ವಿಷಾದಿಸಿದ ನಂತರವೂ ಮುತ್ತಿಗೆ ಹಾಕಿದ್ದು ಎಷ್ಟು ಸರಿ ಎಂದು ಕೋಟ ಪ್ರಶ್ನಿಸಿದರು. ............................ಭಾನು ಮುಷ್ತಾಕ್ಗೆ ಬುಕರ್: ಕೋಟ ಶುಭಾಶಯ
ಕನ್ನಡದ ಪ್ರಸಿದ್ಧ ಲೇಖಕಿ ಬಾನು ಮುಸ್ತಾಕ್ ಅವರ ಕೃತಿಗೆ ಅತ್ಯುನ್ನತ ಬೂಕರ್ ಪ್ರಶಸ್ತಿ ಬಂದಿದೆ. ‘ಎದೆಯ ಹಣತೆ’ ಇಂಗ್ಲಿಷಿಗೆ ತರ್ಜುಮೆಗೊಂಡು, ವಿಶ್ವದ ಗಮನ ಸೆಳೆದಿದೆ. ಕನ್ನಡಕ್ಕೆ ಇದು ಬಹುದೊಡ್ಡ ಕೊಡುಗೆ. ಬಾನು ಮುಷ್ತಾಕ್ ಲೇಖನ, ವಿಚಾರಧಾರೆಗಳು ಮಹಿಳೆಯ ಬಗೆಗಿನ ಕಾಳಜಿಯ ಬರಹಗಳಿಗೆ ಸಿಕ್ಕಿದಂತಹ ಮನ್ನಣೆ. ಕರ್ನಾಟಕ ಮತ್ತು ಭಾರತ ದೇಶದ ಎಲ್ಲಾ ಅಭಿಮಾನಿಗಳು ಪ್ರಶಸ್ತಿಯನ್ನು ಗೌರವದಿಂದ ಸ್ವಾಗತಿಸುತ್ತೇವೆ. ಭಾನು ಮುಷ್ತಾಕ್ ಅವರ ಬಗ್ಗೆ ಹೆಮ್ಮೆ ಇದೆ, ನಮಗೆ ಖುಷಿ ಮತ್ತು ಸಂತೋಷ ಕೊಟ್ಟಿದೆ ಎಂದರು.