ವಸತಿ ಶಾಲೆಗಳಿಗೆ ಪ್ರವೇಶ: ಅರ್ಹರಿಂದ ಅರ್ಜಿಗಳ ಆಹ್ವಾನ

KannadaprabhaNewsNetwork |  
Published : Jun 22, 2025, 01:18 AM IST
(ಸಾಂದರ್ಭಿಕ ಚಿತ್ರ) | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 7, 8 ಮತ್ತು 9ನೇ ತರಗತಿಗಳಲ್ಲಿ ಲಭ್ಯವಿರುವ ಹಾಗೂ ಮುಂದಿನ ದಿನಗಳಲ್ಲಿ ಲಭ್ಯವಾಗಬಹುದಾದಂತಹ ಸ್ಥಾನಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

- ಅರ್ಜಿ ಸಲ್ಲಿಕೆಗೆ ಜೂ.27 ಕೊನೆಯ ದಿನವಾಗಿ ನಿಗದಿ

- - -

ದಾವಣಗೆರೆ: ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 7, 8 ಮತ್ತು 9ನೇ ತರಗತಿಗಳಲ್ಲಿ ಲಭ್ಯವಿರುವ ಹಾಗೂ ಮುಂದಿನ ದಿನಗಳಲ್ಲಿ ಲಭ್ಯವಾಗಬಹುದಾದಂತಹ ಸ್ಥಾನಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಜೂನ್ 27 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂನ್ 21ರಿಂದ ಆರಂಭವಾಗುತ್ತಿದೆ. ಎಲ್ಲ ಮೊರಾರ್ಜಿ, ಕಿತ್ತೂರು, ಅಂಬೇಡ್ಕರ್, ಇಂದಿರಾಗಾಂಧಿ ಹಾಗೂ ಪ್ರತಿಭಾನ್ವಿತ ವಸತಿ ಶಾಲೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯೊಂದಿಗೆ ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಿಂದಿನ ತರಗತಿಯ ಅಂಕಪಟ್ಟಿ, ಶಾಲಾ ದೃಢೀಕರಣ ಪತ್ರ, ಎಸ್‌ಎಟಿ (ಸ್ಯಾಟ್) ಸಂಖ್ಯೆಯೊಂದಿಗೆ ಆಧಾರ್ ಕಾರ್ಡ್ ನಕಲು ಪ್ರತಿ, ಇತ್ತೀಚಿನ 2 ಭಾವಚಿತ್ರಗಳನ್ನು ಭರ್ತಿ ಮಾಡಿದ ಅರ್ಜಿಗಳನ್ನು ದಾವಣಗೆರೆ ಉಪವಿಭಾಗ ವ್ಯಾಪ್ತಿಯ ದಾವಣಗೆರೆ ಸಮಾಜ ಕಲ್ಯಾಣ ಇಲಾಖೆಗೆ ಹಾಗೂ ಹೊನ್ನಾಳಿ ಉಪವಿಭಾಗ ವ್ಯಾಪ್ತಿಯ ಚನ್ನಗಿರಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಸೂಚಿಸಿದೆ. ಪ್ರವೇಶ ಪರೀಕ್ಷೆಯನ್ನು ಜೂ.29ರಂದು ಬೆಳಗ್ಗೆ 11ರಿಂದ 12ರವರೆಗೆ ಜಿಲ್ಲೆಯ ದೇವರಬೆಳಕೆರೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಚನ್ನಗಿರಿ ತಾಲೂಕಿನ ಕಾಕನೂರು ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ನಡೆಸಲಾಗುವುದು.

- - -

(ಸಾಂದರ್ಭಿಕ ಚಿತ್ರ)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ
‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ