ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಂಡು ಮುನ್ನಡೆಯಿರಿ: ಕೆ.ವಿ.ಪ್ರಭಾಕರ್

KannadaprabhaNewsNetwork |  
Published : Aug 19, 2026, 01:15 AM IST
೧೮ಕೆಎಲ್‌ಆರ್-೮ಮಾಜಿ ಸಿಎಂ ಸಿದ್ದರಾಮಯ್ಯರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಕೋಲಾರದ ೩೩ನೇ ವಾರ್ಡಿನ ರಹಮತ್ ನಗರದ ಬೀಡಿ ಕಾಲೋನಿಯಲ್ಲಿ ಯುವಕರನ್ನುದ್ದೇಶಿಸಿ ಮಾತನಾಡುತ್ತಿರುವುದು. | Kannada Prabha

ಸಾರಾಂಶ

ಮುಕ್ತಬ್-ಎ- ಹಸ್ನೈನ್ ಮದ್ರಾಸದಲ್ಲಿ ಪಾಠ ಪ್ರವಚನಕ್ಕೆ ಬರುವ ವಿದ್ಯಾರ್ಥಿಗಳಿಗೆ ಗಣಕಯಂತ್ರಗಳನ್ನು ವೈಯಕ್ತಿಕವಾಗಿ ಕೊಡಿಸಲಾಗುವುದು. ತಂತ್ರಜ್ಞಾನದ ಯುಗದಲ್ಲಿ ಪ್ರತಿಯೊಬ್ಬರೂ ಎಐ ತಂತ್ರಜ್ಞಾನ ಕಲಿಯುವುದು ಅನಿವಾರ್ಯವಾಗಿದೆ ಎಂದು ನುಡಿದರು.

ಕೋಲಾರ: ಯುವಕರು ಮಾದಕ ವ್ಯಸನಗಳಿಂದ ದೂರವಿದ್ದು, ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದರು. ನಗರದ ೩೩ನೇ ವಾರ್ಡಿನ ರಹಮತ್ ನಗರದ ಬೀಡಿ ಕಾಲೋನಿಯ ಮುಕ್ತಬ್- ಎ- ಹಸ್ನೈನ್ ಮದರಾಸದಲ್ಲಿ ಯುವಕರನ್ನು ಉದ್ದೇಶಿಸಿ ಮಾತನಾಡಿದರು. ದುಶ್ಚಟಗಳಿಗೆ ಬಲಿಯಾಗುವ ಯುವಜನರ ಸಂಖ್ಯೆ ಮಿತಿ ಮೀರುತ್ತಿದೆ. ಮಾದಕ ವಸ್ತುಗಳನ್ನು ನಿರಂತರ ಸೇವಿಸಿ ಅನೇಕ ಕಾಯಿಲೆಗಳಿಗೆ ಈಡಾಗುತ್ತಿದ್ದಾರೆ. ಪಾಲಕರು ಇಂತಹ ವಿಷಯದಲ್ಲಿ ಎಚ್ಚರವಹಿಸುವ ಜತೆಗೆ ಮಕ್ಕಳ ಭವಿಷ್ಯಕ್ಕಾಗಿ ಉತ್ತಮ ವಾತಾವರಣ ನಿರ್ಮಿಸಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

ಮುಕ್ತಬ್-ಎ- ಹಸ್ನೈನ್ ಮದ್ರಾಸದಲ್ಲಿ ಪಾಠ ಪ್ರವಚನಕ್ಕೆ ಬರುವ ವಿದ್ಯಾರ್ಥಿಗಳಿಗೆ ಗಣಕಯಂತ್ರಗಳನ್ನು ವೈಯಕ್ತಿಕವಾಗಿ ಕೊಡಿಸಲಾಗುವುದು. ತಂತ್ರಜ್ಞಾನದ ಯುಗದಲ್ಲಿ ಪ್ರತಿಯೊಬ್ಬರೂ ಎಐ ತಂತ್ರಜ್ಞಾನ ಕಲಿಯುವುದು ಅನಿವಾರ್ಯವಾಗಿದೆ ಎಂದು ನುಡಿದರು.

ದುಶ್ಚಟಗಳಿಂದ ದೂರವಿರಲು ವ್ಯಾಯಾಮ, ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದು ಅತಿ ಅವಶ್ಯಕ. ಈ ನಿಟ್ಟಿನಲ್ಲಿ ಯುವಕರು ತಮ್ಮ ಆಸಕ್ತಿಯ ಕ್ರೀಡೆಗಳಲ್ಲಿ ಭಾಗವಹಿಸಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ ಎಂದು ಕಿವಿಮಾತು ಹೇಳಿದರು.

ಮದರಾಸ ಪಕ್ಕದಲ್ಲಿರುವ ಜಾಗದಲ್ಲಿ ಉತ್ತಮ ಕ್ರೀಡಾಂಗಣವನ್ನು ನಿರ್ಮಿಸಿಕೊಡಲು ಪ್ರಭಾಕರ್‌ರಿಗೆ ಯುವಕರು ಮನವಿ ಮಾಡಿದರು. ಅತಿ ಶೀಘ್ರದಲ್ಲೇ ಕ್ರೀಡಾಂಗಣ ನಿರ್ಮಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.

ಮುಖಂಡ ಯಾರಬ್, ಸಾಧಿಕ್ ಪಾಷಾ, ಅಕ್ಬರ್ ಪಾಷಾ, ಭಾಷಾ, ಮುನ್ನ, ಬಾಬು, ಸೈಯದ್, ಸಾಧಿಕ್, ನವೀದ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂಕವೀರರಾಗದೆ ಕೌಶಲ್ಯವಂತರಾಗಿ ಬೆಳವಣಿಗೆ ಸಾಧಿಸಿ: ಪ್ರೊ.ಕೆ.ಶಿವಚಿತ್ತಪ್ಪ
ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಆಗ್ರಹ