ಅಂಬೇಡ್ಕರ್ ತತ್ವಗಳನ್ನು ಎಲ್ಲರೂ ಅಳವಡಿಸಿಕೊಳ್ಳಿ: ಪಿಎಸ್ ಐ ರಾಜು

KannadaprabhaNewsNetwork |  
Published : Apr 17, 2024, 01:15 AM IST
ದಾಬಸ್‌ಪೇಟೆ ಪಟ್ಟಣದ ಉದ್ಧಾನೇಶ್ವರ ವೃತ್ತದಲ್ಲಿ ಹಮ್ಮಿಕೊಂಡಿದ್ದ ಡಾ. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ  ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ರಾಜ್ಯ ಸಂಚಾಲಕ ಬಸವರಾಜು ಮಾತನಾಡಿ, ಜಗತ್ತಿನ ಉದ್ದಗಲ್ಲಕ್ಕೂ ತಾಂಡವವಾಡುತ್ತಿದ್ದ ಸಾಮಾಜಿಕ ಸಮಸ್ಯೆಗಳಿಗೆ ತಾತ್ವಿಕ ಪರಿಹಾರ ಸೂಚಿಸಿದವರು. ಅಂಬೇಡ್ಕರ್ ಅವರ ವಿಚಾರಧಾರೆಗಳ ಬಗ್ಗೆ ಜನತೆಯಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದರು.

ಕನ್ನಡಪ್ರಭ ವಾರ್ತೆ ದಾಬಸ್‌ಪೇಟೆ

ಭಾರತದ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ರ ಆದರ್ಶ ಮತ್ತು ತತ್ವಗಳನ್ನು ಎಲ್ಲರೂ ತಮ್ಮಲ್ಲಿ ಅಳವಡಿಸಿಕೊಂಡರೆ ದೇಶವು ಕಾನೂನಾತ್ಮಕವಾಗಿ ಉತ್ತಮ ಭವಿಷ್ಯವನ್ನು ಕಾಣುವ ಜೊತೆಗೆ ಅಭಿವೃದ್ಧಿಗೆ ಹೆಚ್ಚು ಸಹಾಯಕವಾಗುತ್ತದೆ ಎಂದು ದಾಬಸ್ ಪೇಟೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ರಾಜು ತಿಳಿಸಿದರು.

ಪಟ್ಟಣದ ಉದ್ಧಾನೇಶ್ವರ ವೃತ್ತದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾವ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರಾಜ್ಯ ಸಂಚಾಲಕ ಬಸವರಾಜು ಮಾತನಾಡಿ, ಜಗತ್ತಿನ ಉದ್ದಗಲ್ಲಕ್ಕೂ ತಾಂಡವವಾಡುತ್ತಿದ್ದ ಸಾಮಾಜಿಕ ಸಮಸ್ಯೆಗಳಿಗೆ ತಾತ್ವಿಕ ಪರಿಹಾರ ಸೂಚಿಸಿದವರು. ಅಂಬೇಡ್ಕರ್ ಅವರ ವಿಚಾರಧಾರೆಗಳ ಬಗ್ಗೆ ಜನತೆಯಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದರು.

ಸಂಘಟನೆಯ ಹೋಬಳಿ ಸಂಚಾಲಕ ಹನುಮಂತರಾಜು ಮಾತನಾಡಿ, ರಾಷ್ಟ್ರ ನಾಯಕರು ಯಾವುದೇ ಜಾತಿ, ಧರ್ಮಕ್ಕೆ ಸೀಮಿತವಾಗುವುದಿಲ್ಲ, ಅಂತಹ ದಾರ್ಶನಿಕರ ಆದರ್ಶಗಳನ್ನು ದೇಶದ ಅಭಿವೃದ್ಧಿಗೆ ಮತ್ತು ಐಕ್ಯತೆಗೆ ನಾವೆಲ್ಲರೂ ಮಾದರಿಯಾಗಿ ಸ್ವೀಕರಿಸಬೇಕು ಎಂದರು.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು, ಸಾಧಕರನ್ನು ಸನ್ಮಾನಿಸಲಾಯಿತು.

ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ ಚೌಧರಿ, ಗ್ರಾಪಂ ಅಧ್ಯಕ್ಷರಾದ ರಾಮಾಂಜನೇಯ, ಉಮಾದೇವಿ ಹನುಮಂತರಾಜು, ತಾಲೂಕು ಸಂಚಾಲಕ ಬರದಿ ಹನುಮಂತರಾಯಪ್ಪ, ವೆಂಕಟೇಶ್, ರಾಮಕೃಷ್ಣಯ್ಯ, ವೀರಣ್ಣ, ಗಂಗಾಧರ್, ಕಾಂತರಾಜು, ಜಯಶೀಲಾ, ಪೂಜಾರಾಮಯ್ಯ ಮತ್ತಿತ್ತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಳಿಪಟ ದಾರ ಕುತ್ತಿಗೆ ಸೀಳಿ ಮಗಳನ್ನು ಹಾಸ್ಟೆಲ್‌ನಿಂದ ಕರೆತರಲು ಹೊರಟಿದ್ದ ಅಪ್ಪ ದಾರುಣ ಸಾವು
ಪೌರಾಯುಕ್ತೆಗೆ ಬೆಂಕಿ: ಕಾಂಗ್ರೆಸ್ಸಿಗನಿಂದ ಧಮ್ಕಿ