ಕುರುಗೋಡು: ನಮ್ಮ ಜೀವನದೊಂದಿಗೆ ಅವಿನಾಭಾವ ಸಂಬಂಧ ಹೊಂದಿರುವ ಜಾನಪದ ಸಂಸ್ಕೃತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಶಾಸಕ ಜೆ.ಎನ್.ಗಣೇಶ್ ಹೇಳಿದರು.
ಉತ್ತರ ಕರ್ನಾಟಕದ ವಿಧಾನಸಭಾ ಕ್ಷೇತ್ರಗಳ ಪೈಕಿ ಕಂಪ್ಲಿ ವಿಧಾನ ಸಭಾ ಕ್ಷೇತ್ರದ ಶೈಕ್ಷಣಿಕ ಅಭಿವೃದ್ಧಿಗೆ ಅತಿಹೆಚ್ಚು ₹೨೦೦ಕೋಟಿ ಅನುದಾನ ತಂದಿರುವೆ. ಮುಂದಿನ ದಿನಗಳಲ್ಲಿ ಹೆಚ್ಚು ಅನುದಾನ ತಂದು ಶೈಕ್ಷಣಿಕ ಕ್ಷೇತ್ರ ಅಭಿವೃದ್ಧಿ ಪಡಿಸಲಾಗುವುದು ಎಂದರು.
ರಂಗಭೂಮಿ ಕಲಾವಿದ ಗೆಣಿಕೆಹಾಳು ಎಂ.ತಿಮ್ಮನ ಗೌಡ ಮಾತನಾಡಿ, ಪ್ರಭಾವಿ ದೃಶ್ಯಮಾಧ್ಯಮಗಳ ಪ್ರಭಾವದಿಂದ ಗ್ರಾಮೀಣ ಜನಪದ ಕಲೆಗಳು ನಶಿಸಿ ಹೋಗುತ್ತಿವೆ. ಗ್ರಾಮೀಣ ಭಾಗದಲ್ಲಿ ನೂರಾರು ಜಾನಪದ ಕಲಾವಿದರು ಜೀವಂತವಾಗಿದ್ದಾರೆ ಅವರನ್ನು ಗುರುತಿಸಿ ಪ್ರೋತ್ಸಾಹಿಸುವ ಅಗತ್ಯವಿದೆ. ಕಲೆ ಉಳಿಸಿ ಬೆಳೆಸಲು ಕಾಲಕಾಲಕ್ಕೆ ಉತ್ಸವ ಆಯೋಜಿಸುವ ಅಗತ್ಯವಿದೆ, ವಿವಿಧ ರೀತಿಯ ನಾಟಕ ಹಾಗೂ ಜಾನಪದ ಹಾಡು ಇಂದಿಗೂ ಹಳ್ಳಿಗಳಲ್ಲಿ ಜೀವಂತವಾಗಿದೆ. ಕನ್ನಡ ಮತ್ತು ಸಂಸ್ಕೃತ ಇಲಾಖೆ ನಗರಕ್ಕೆ ಸಿಮೀತವಾಗಿದ್ದು ಗ್ರಾಮೀಣ ಕಲಾವಿದರಿಗೆ ಸೂಕ್ತ ಮಾನ್ಯತೆ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.ಸಿಪಿಐ ವಿಶ್ವನಾಥ ಕೆ. ಹಿದೇಗೌಡ ಮಾತನಾಡಿ, ಜಾನಪದ ಪರಂಪರೆಯು ಉತ್ತಮ ಮೌಲ್ಯ ಸಾರುತ್ತವೆ. ವಿದ್ಯಾರ್ಥಿಗಳು ಯಾವುದೇ ದುಶ್ಚಟಕ್ಕೆ ದಾಸರಾಗದೇ ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಮೂಲಕ ಮಾದರಿಯಾಗಬೇಕು
ಅಧ್ಯಕ್ಷತೆ ವಹಿಸಿದ್ದ ಮಾತನಾಡಿ, ಪ್ರಾಂಶುಪಾಲ ಡಾ.ಎಚ್ ರಾಮಕೃಷ್ಣ, ಸರ್ಕಾರದಿಂದ ಸಿಗುವ ವಿವಿಧ ಸೌಲಭ್ಯ ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ವಿದ್ಯಾರ್ಥಿಗಳು ವಿವಿಧ ಬಗೆಯ ಬಟ್ಟೆ ತೊಟ್ಟು, ವಿವಿಧ ಬಗೆಯ ಜಾನಪಡ ಹಾಡುಗಳಿಗೆ ನೃತ್ಯ ಮಾಡಿ ಸಂಭ್ರಮಿಸಿದರು. ಕಾಲೇಜಿನ ಸಿಬ್ಬಂದಿ ಗ್ರಾಮೀಣ ಸೊಗಡಿನ ಬಟ್ಟೆ ಧರಿಸಿ ಮಿಂಚಿದರು.