ಉದ್ಯೋಗ ಸಂಬಂಧಿತ ಕೌಶಲ್ಯ ಅಳವಡಿಸಿಕೊಳ್ಳಿ: ಡಾ. ಗೊಳ್ಳೆ ಶಿವಶರಣ

KannadaprabhaNewsNetwork |  
Published : Mar 05, 2025, 12:33 AM IST
ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯಲ್ಲಿ ಹಮ್ಮಿಕೊಂಡಿದ್ದ ‘ಕಲಿಕೆ ಜೊತೆಗೆ ಕೌಶಲ್ಯ 2.0’ ಯೋಜನೆ ಕುರಿತು ಒಂದು ದಿನದ ಕಾರ್ಯಗಾರಕ್ಕೆ ಚಾಲನೆ ನೀಡಲಾಯಿತು.  | Kannada Prabha

ಸಾರಾಂಶ

ಯುವಕರು ಉದ್ಯಮ ಸಂಬಂಧಿತ ಕೌಶಲ್ಯಗಳನ್ನು ಅಳವಡಿಸಿಕೊಂಡಲ್ಲಿ ಉದ್ಯೋಗ, ಜಾಗತಿಕ ಕ್ಷೇತ್ರದಲ್ಲಿ ನಿರ್ಣಾಯಕವಾದ ಪಾತ್ರ ನಿರ್ವಹಿಸುತ್ತಾರೆ.

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ಕಲಿಕೆ ಜೊತೆಗೆ ಕೌಶಲ್ಯ 2.0 ಯೋಜನೆ ಕುರಿತು ಒಂದು ದಿನದ ಕಾರ್ಯಾಗಾರ

ಕನ್ನಡಪ್ರಭ ವಾರ್ತೆ ಬಳ್ಳಾರಿ

ಯುವಕರು ಉದ್ಯಮ ಸಂಬಂಧಿತ ಕೌಶಲ್ಯಗಳನ್ನು ಅಳವಡಿಸಿಕೊಂಡಲ್ಲಿ ಉದ್ಯೋಗ, ಜಾಗತಿಕ ಕ್ಷೇತ್ರದಲ್ಲಿ ನಿರ್ಣಾಯಕವಾದ ಪಾತ್ರ ನಿರ್ವಹಿಸುತ್ತಾರೆ ಎಂದು ಕಲಬುರಗಿಯ ಕಾಲೇಜು ಶಿಕ್ಷಣ ಪ್ರಾದೇಶಿಕ ಜಂಟಿ ನಿರ್ದೇಶಕ ಡಾ. ಗೊಳ್ಳೆ ಶಿವಶರಣ ಬಿ. ಹೇಳಿದರು.

ನಗರದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಜೀವ ವಿಜ್ಞಾನ ಸಭಾಂಗಣದಲ್ಲಿ ಕಾಲೇಜು ಶಿಕ್ಷಣ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ವಿಜಯನಗರ ಶ್ರೀ ಕೃಷ್ಣದೇವರಾಯ ಸಹಯೋಗದೊಂದಿಗೆ ಕಲಿಕೆ ಜೊತೆಗೆ ಕೌಶಲ್ಯ 2.0 ಯೋಜನೆ ಕುರಿತು ಒಂದು ದಿನದ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.

ಶಿಕ್ಷಣ ಕ್ಷೇತ್ರ ವೇಗವಾಗಿ ಬದಲಾಗುತ್ತಿರುವುದರಿಂದ ಉದ್ಯೋಗ ಸಂಬಂಧಿತ ಕೌಶಲ್ಯಗಳು ಕಲ್ಯಾಣ ಕರ್ನಾಟಕ ಹಿಂದುಳಿದ ಪ್ರದೇಶಗಳ ವಿದ್ಯಾರ್ಥಿಗಳಿಗೆ ವರದಾನವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಕೌಶಲ್ಯ ವಂಚಿತರ ಪ್ರಮಾಣ ಶೇ.60 ರಷ್ಟು ಇದೆ. ಬಹುಮುಖ ಪ್ರತಿಭೆಗಳು ಮಾತ್ರ ಉದ್ಯೋಗಕ್ಕೆ ಆರ್ಹರಾಗಿದ್ದಾರೆ. ವಿದ್ಯಾರ್ಥಿಗಳು ಭವಿಷ್ಯದಲ್ಲಿ ಕೌಶಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಅಭಿಪ್ರಾಯ ಪಟ್ಟರು.

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಡಾ. ರಾಗಪ್ರಿಯ ಆರ್. ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಕೌಶಲ್ಯ ಆಧಾರಿತ ಶಿಕ್ಷಣ ಮಹತ್ವಪೂರ್ಣವಾಗಿದೆ. ಈಗಾಗಲೇ ಕೌಶಲ್ಯಾಧಾರಿತ ಶಿಕ್ಷಣವನ್ನು ಹಲವಾರು ವಿದ್ಯಾರ್ಥಿಗಳು ಪಡೆದು ಒಳ್ಳೆಯ ಸ್ಥಾನದಲ್ಲಿದ್ದಾರೆ ಎಂದು ಹೇಳಿದರು.

ವಿಶೇಷ ಆಹ್ವಾನಿತರಾಗಿ ವಿಡಿಯೋ ಸಂವಾದದ ಮೂಲಕ ಕಾಲೇಜು ಶಿಕ್ಷಣ ಬೆಂಗಳೂರು ನಿರ್ದೇಶಕಿ ಪ್ರೊ.ಶೋಭಾ ಜಿ. ಮಾತನಾಡಿ, ಶಿಕ್ಷಣ ರಂಗದಲ್ಲಿ ಪದವಿ ಜೊತೆಗೆ ಜ್ಙಾನಾಧಾರಿತ ಕೌಶಲ್ಯಗಳು ಅವಶ್ಯವಾಗಿವೆ. ಈ ನಿಟ್ಟಿನಲ್ಲಿ ಈಗಾಗಲೇ ನಾಲ್ಕು ವಿಶ್ವವಿದ್ಯಾಲಯಗಳ 28 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೌಶಲ್ಯವೃದ್ಧಿ ಪಡೆಸಿಕೊಂಡಿದ್ದಾರೆ ಎಂದರು.

ವಿಶ್ವವಿದ್ಯಾಯದ ಮೌಲ್ಯಮಾಪನ ಕುಲಸಚಿವ ಡಾ. ಎನ್.ಎಂ. ಸಾಲಿ ಮಾತನಾಡಿ, ವಿಶ್ವವಿದ್ಯಾಲಯಗಳು ಸಾಂಪ್ರದಾಯಕದಿಂದ ವೈಜ್ಞಾನಿಕತೆಯಡೆಗೆ ಸಾಗಬೇಕಾಗಿದೆ. ಶಿಕ್ಷಣದಲ್ಲಿ ಹಲವಾರು ಕೌಶಲ್ಯಗಳಿಂದ ಜಗತ್ತು ಮುಂದುವರೆಯುತ್ತಿದೆ. ನಾವು ಅದರೊಂದಿಗೆ ಸಾಗಬೇಕಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ. ಮುನಿರಾಜು ಮಾತನಾಡಿ, ವಿದ್ಯಾರ್ಥಿಗಳು ಕೌಶಲ್ಯಾಧಾರಿತ ಶಿಕ್ಷಣಕ್ಕೆ ಒಲವು ಹೊಂದಬೇಕಾಗಿದೆ. ವಿದ್ಯಾರ್ಥಿಗಳು ಶಿಕ್ಷಕರಿಂದ ಸ್ಪೂರ್ತಿ ಪಡೆದು, ಕೌಶಲ್ಯಗಳ ಕೊರತೆಯನ್ನು ಹೋಗಲಾಡಿಸಬೇಕು. ಕೌಶಲ್ಯ ಆಧಾರಿತ ಶಿಕ್ಷಣದಿಂದ ವಿಶ್ವಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ನಾವೆಲ್ಲರು ಶ್ರಮವಹಿಸೋಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿವಿಯ ಕುಲಸಚಿವ ಎಸ್.ಎನ್. ರುದ್ರೇಶ್, ಕಾರ್ಯಕ್ರಮ ಸಂಯೋಜಕರಾದ ಡಾ. ನಿರ್ಮಲ ಜೆ. ವೇದಿಕೆಯಲ್ಲಿದ್ದರು. ಕಾರ್ಯಕ್ರಮವನ್ನು ಡಾ. ಬಿ. ಸರೋಜಾ ನಿರೂಪಿಸಿದರು.

ಈ ವೇಳೆ ವಿವಿಯ ಅಧೀನದ ವಿವಿಧ ಕಾಲೇಜು ಪ್ರಾಂಶುಪಾಲರು ಹಾಗು ಸಿಬ್ಬಂದಿ, ವಿವಿಯ ವಿವಿಧ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿಜ್ಞಾನ ವಿಭಾಗಗಳ ವಿದ್ಯಾರ್ಥಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''