ಕನಕದಾಸರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಶಾಸಕ ದೊಡ್ಡನಗೌಡ ಪಾಟೀಲ್

KannadaprabhaNewsNetwork |  
Published : Feb 01, 2024, 02:06 AM IST
ಪೋಟೊ28ಕೆಎಸಟಿ2: ಕುಷ್ಟಗಿ ಪಟ್ಟಣದಲ್ಲಿ ಕನಕದಾಸರ ಕಂಚಿನ ಪುತ್ತಳಿ ಅನಾವರಣದ ಅಂಗವಾಗಿ ಕನಕದಾಸರ ಭಾವಚಿತ್ರವನ್ನು ಮೆರವಣಿಗೆಯನ್ನು ಮಾಡಿದರು. | Kannada Prabha

ಸಾರಾಂಶ

ದಾಸ ಸಾಹಿತ್ಯದಲ್ಲಿ ತಮ್ಮದೇ ಆದ ಸನ್ಮಾರ್ಗ ನೀಡಿದ ಮಹಾನ್ ನಾಯಕ ಕನಕದಾಸರು, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ದೊಡ್ಡನಗೌಡ ಪಾಟೀಲ್ ಹೇಳಿದರು.

ಕುಷ್ಟಗಿ: ದಾಸ ಸಾಹಿತ್ಯದಲ್ಲಿ ತಮ್ಮದೇ ಆದ ಸನ್ಮಾರ್ಗ ನೀಡಿದ ಮಹಾನ್ ನಾಯಕ ಕನಕದಾಸರು, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ದೊಡ್ಡನಗೌಡ ಪಾಟೀಲ್ ಹೇಳಿದರು.ಪಟ್ಟಣದ ಗಜೇಂದ್ರಗಡ ರಸ್ತೆಯಲ್ಲಿರುವ ಕನಕದಾಸ ವೃತ್ತದಲ್ಲಿ ಕನಕದಾಸರ ಕಂಚಿನ ಪುತ್ತಳಿಯನ್ನು ಪ್ರತಿಷ್ಠಾಪನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಸಕಲ ಮಂಗಲ ವಾದ್ಯಗಳೊಂದಿಗೆ ಭಕ್ತ ಕನಕದಾಸ ರವರ ಭಾವಚಿತ್ರದ ಮೆರವಣಿಗೆ ವಿಜ್ರಂಭಣಿಯಿಂದ ನಡೆಯಿತು. ಮೆರವಣಿಗೆಯಲ್ಲಿ ಸುಮಂಗಲಿಯರು, ಮಕ್ಕಳು ಕುಂಭ, ಕಳಶ ಹೊತ್ತು ನಡೆದರು.

ಈ ಸಂದರ್ಭದಲ್ಲಿ ತಿಂಥಣಿ ಕನಕ ಗುರುಪೀಠದ ಸಿದ್ದರಾಮನಂದಪುರಿ ಸ್ವಾಮಿಗಳು, ಬಾದಿಮನಾಳದ ಶಿವಸಿದ್ದೇಶ್ವರ ಸ್ವಾಮಿಗಳು, ಮದ್ದಾನೇಶ್ವರ ಮಠದ ಕರಿಬಸವ ಶಿವಾಚಾರ್ಯ ಸ್ವಾಮಿಗಳು, ಅಭಿನವ ಕರಿಬಸವ ಶಿವಾಚಾರ್ಯರು, ಶಿವಾನಂದಯ್ಯ ಗುರುವಿನ, ಶರಣಯ್ಯ ಗುರುವಿನ, ಮಾಜಿ ಶಾಸಕ ಕೆ ಶರಣಪ್ಪ ವಕೀಲರು, ರವಿಕುಮಾರ ಸ್ವಾಮಿ ಹಿರೇಮಠ, ಬಸವರಾಜ ಹಳ್ಳೂರು, ಮಲ್ಲಣ್ಣ ಪಲ್ಲೆದ, ಅಮರೇಶ್ವರ ಶೆಟ್ಟರ, ಪರಸಪ್ಪ ಕತ್ತಿ, ಪಕೀರಪ್ಪ ವಕೀಲರು, ಕಲ್ಲೇಶ ತಾಳದ, ನಟರಾಜ ಸೋನಾರ್ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ