ಆಧುನಿಕ ಕೃಷಿ ಪದ್ಧತಿ ಅಳವಡಿಸಿ ಹೆಚ್ಚು ಲಾಭ ಪಡೆಯಿರಿ

KannadaprabhaNewsNetwork |  
Published : Aug 02, 2026, 02:00 AM IST
ಯಂತ್ರಶ್ರೀ ಭತ್ತ ನಾಟಿ ಪ್ರಾತ್ಯಕ್ಷತೆ ಹಾಗೂ ತರಬೇತಿ ಕಾರ್ಯಕ್ರಮ | Kannada Prabha

ಸಾರಾಂಶ

ತರೀಕೆರೆರೈತರು ತಮ್ಮ ಭತ್ತದ ಬೇಸಾಯದಲ್ಲಿ ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಹೆಚ್ಚಿನ ಲಾಭ ಪಡೆಯಬೇಕು ಎಂದು ಲಕ್ಕವಳ್ಳಿ ಪ್ರಗತಿ ರೈತ ಸಂಘ ಅಧ್ಯಕ್ಷ ಎಲ್.ಸಿ. ನಂದಕುಮಾರ್ ತಿಳಿಸಿದರು.

ಲಕ್ಕವಳ್ಳಿ ಪ್ರಗತಿ ರೈತ ಸಂಘ ಅಧ್ಯಕ್ಷ ನಂದಕುಮಾರ್‌ । ಯಂತ್ರಶ್ರೀ ಭತ್ತ ನಾಟಿ ಪ್ರಾತ್ಯಕ್ಷಿಕೆ, ತರಬೇತಿ

ಕನ್ನಡಪ್ರಭ ವಾರ್ತೆ, ತರೀಕೆರೆ

ರೈತರು ತಮ್ಮ ಭತ್ತದ ಬೇಸಾಯದಲ್ಲಿ ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಹೆಚ್ಚಿನ ಲಾಭ ಪಡೆಯಬೇಕು ಎಂದು ಲಕ್ಕವಳ್ಳಿ ಪ್ರಗತಿ ರೈತ ಸಂಘ ಅಧ್ಯಕ್ಷ ಎಲ್.ಸಿ. ನಂದಕುಮಾರ್ ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ತರೀಕೆರೆಯಿಂದ ಸಮೀಪದ ಲಕ್ಕವಳ್ಳಿ ವಲಯದ ಕೆಸರು ಕೊಪ್ಪ ಗ್ರಾಮದ ಲಿಂಗರಾಜು ಅವರ ಭತ್ತದ ಗದ್ದೆಯಲ್ಲಿ ಯಾಂತ್ರಿಕೃತ ಭತ್ತ ಬೇಸಾಯ, ಯಂತ್ರಶ್ರೀ ಭತ್ತ ನಾಟಿ ಪ್ರಾತ್ಯಕ್ಷಿಕೆ ಹಾಗೂ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯಂತ್ರಶ್ರೀ ಭತ್ತ ನಾಟಿ ಕಾರ್ಯಕ್ರಮ ಯಂತ್ರಗಳ ಕಾರ್ಯವೈಖರಿ ಹಾಗೂ ಅವುಗಳ ಉಪಯೋಗದ ಕುರಿತು ರೈತರಿಗೆ ಮಾಹಿತಿ ನೀಡುವ ಜೊತೆಗೆ ಕಾರ್ಮಿಕರ ಕೊರತೆ ನಿವಾರಿಸುವಲ್ಲಿ ಯಾಂತ್ರೀಕರಣ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.

ಲಕ್ಕವಳ್ಳಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ರಘುಕುಮಾರ್ ಮಾತನಾಡಿ ಕೃಷಿ ಇಲಾಖೆಯಿಂದ ರೈತರಿಗೆ ದೊರೆಯುವ ವಿವಿಧ ಸರ್ಕಾರಿ ಸೌಲಭ್ಯ ಹಾಗೂ ಸಹಾಯಧನ ಯೋಜನೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ರೈತರು ಸರ್ಕಾರದ ವಿವಿಧ ಯೋಜನೆ ಸದುಪಯೋಗಪಡಿಸಿಕೊಂಡು ಕೃಷಿಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸಬೇಕು ಎಂದು ತಿಳಿಸಿದರು.

ತಾಲೂಕು ಯೋಜನಾಧಿಕಾರಿ ಸದಾಶಿವ ಗೌಡ, ಸಿಎಚ್ಎಸ್.ಸಿ ಚಿಕ್ಕಮಗಳೂರು ವಿಭಾಗೀಯ ಯೋಜನಾಧಿಕಾರಿ ಸೋಮ ನಾಥ್, ಪ್ರಗತಿ ರೈತ ಸಂಘದ ಉಪಾಧ್ಯಕ್ಷ ಹರಿ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ರಮೇಶ್ ಕೆ.ಎಸ್. ಸಿಹೆಚ್.ಎಸ್.ಸಿ ಅಭಿಯಂತರರಾದ ಅವಿನಾಶ್, ಕೃಷಿ ಮೇಲ್ವಿಚಾರಕ ಸಂತೋಷ್, ಸಿಹೆಚ್ಎಸ್.ಸಿ ಪ್ರಬಂಧಕರಾದ ಮಂಜುನಾಥ್, ವಲಯದ ಮೇಲ್ವಿಚಾರಕಿ ಗಂಗಮ್ಮ, ಸೇವಾಪ್ರತಿನಿಧಿ ಸಂಗಮ, ರೈತರಾದ ನಂಜೇಗೌಡ, ಲಿಂಗರಾಜು, ಮಹಾಂತೇಶ್, ಹೋಬಳಿ ವ್ಯಾಪ್ತಿಯ ಕೃಷಿ ಸಖಿಯರು, ರೈತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

-

31ಕೆಟಿಆರ್.ಕೆ.2ಃ ತರೀಕೆರೆ ಸಮೀಪದ ಕೆಸರುಗೊಪ್ಪ ಗ್ಲಾಮದಲ್ಲಿ ನಡೆದ ಯಂತ್ರಶ್ರೀ ಭತ್ತ ನಾಟಿ ಪ್ರಾತ್ಯಕ್ಷಿಕೆ ಹಾಗೂ ತರಬೇತಿ ಕಾರ್ಯಕ್ರಮವನ್ನು ಲಕ್ಕವಳ್ಳಿ ಪ್ರಗತಿ ರೈತ ಸಂಘ ಅಧ್ಯಕ್ಷ ಎಲ್.ಸಿ. ನಂದಕುಮಾರ್ ಉದ್ಘಾಟಿಸಿದರು. ತಾಲೂಕು ಯೋಜನಾಧಿಕಾರಿ ಸದಾಶಿವ ಗೌಡ, ವಿಭಾಗೀಯ ಯೋಜನಾಧಿಕಾರಿ ಸೋಮನಾಥ್, ಕೃಷಿ ಮೇಲ್ವಿಚಾರಕ ಸಂತೋಷ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶರಣ ಸಂಸ್ಕೃತಿಯೇ ಕನ್ನಡಿಗರ ಅಸ್ಮಿತೆ: ಡಾ. ನಿಂಗು ಸೊಲಗಿ
ಶರಣ ಸಾಹಿತ್ಯ ಬದುಕಿಗೆ ದಾರಿದೀಪ: ಶಿವಕುಮಾರ ಗೌಡ ಪಾಟೀಲ