ಮಣ್ಣಿನ ಫಲವತ್ತತೆ ಉಳಿಸಲು ಸಾವಯವ ಬೇಸಾಯ ಅಳವಡಿಸಿಕೊಳ್ಳಿ: ಸತೀಶ್ ಶೆಟ್ಟಿ

KannadaprabhaNewsNetwork |  
Published : Aug 13, 2024, 12:51 AM IST
ಹಗರಿಬೊಮ್ಮನಹಳ್ಳಿ ತಾಲೂಕಿನ ಬೆಣಕಲ್ಲು ಗ್ರಾಮದಲ್ಲಿ ನಡೆದ ಸಿರಿಧಾನ್ಯ ಬಳಕೆ ಮಾಹಿತಿ ಕಾರ್ಯಕ್ರಮಕ್ಕೆ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಚಾಲನೆ ನೀಡಿದರು. | Kannada Prabha

ಸಾರಾಂಶ

ಹಗರಿಬೊಮ್ಮನಹಳ್ಳಿ ತಾಲೂಕಿನ ಬೆಣಕಲ್ಲು ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹನಾ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಿರಿಧಾನ್ಯ ಬಳಕೆ ಮಾಹಿತಿ ಕಾರ್ಯಕ್ರಮ ನಡೆಯಿತು.

ಹಗರಿಬೊಮ್ಮನಹಳ್ಳಿ: ತಾಲೂಕಿನ ಬೆಣಕಲ್ಲು ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹನಾ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಿರಿಧಾನ್ಯ ಬಳಕೆ ಮಾಹಿತಿ ಕಾರ್ಯಕ್ರಮ ನಡೆಯಿತು.

ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕೃಷಿಕರು ಸಾವಯವ ಗೊಬ್ಬರಕ್ಕೆ ಆದ್ಯತೆ ನೀಡುವ ಅಗತ್ಯವಿದೆ. ಬೆಳೆಗಳಿಗೆ ಕಾಂಪೋಸ್ಟ್, ಹಸಿರು ಗೊಬ್ಬರಗಳನ್ನು ಬಳಕೆ ಮಾಡಬೇಕು. ಮಣ್ಣಿನ ಉತ್ಪಾದಕತೆ ಮತ್ತು ಫಲವತ್ತತೆ ಕಾಪಾಡಲು ಸಾವಯವ ಬೇಸಾಯ ಅಳವಡಿಸಿಕೊಳ್ಳಬೇಕು. ಜೀವ ವೈವಿಧ್ಯ, ಮಣ್ಣಿನ ಜೈವಿಕ ಚಟುವಟಿಕೆ ಉತ್ತೇಜಿಸುತ್ತದೆ. ಸ್ಥಳೀಯವಾಗಿ ಲಭ್ಯವಿರುವ ಸಂಪನೂಲಗಳನ್ನು ಬಳಕೆ ಮಾಡುವ ಪೂರಕ ಬೇಸಾಯ ಪದ್ಧತಿಯಾಗಿದೆ. ಸಾವಯವ ಸಿರಿಧಾನ್ಯ ಬಳಕೆಯಿಂದ ಅತ್ಯಂತ ಕ್ರಿಯಾಶೀಲರಾಗುವ ಜತೆಗೆ ಆರೋಗ್ಯ ಸಮತೋಲವಾಗಿರುತ್ತದೆ ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿ ಜಯಲಕ್ಷ್ಮೀ ಮಾತನಾಡಿ, ಜೋಳ, ನವಣೆ, ಸಾಮೆ, ಬರಗು, ಊದಲು, ಕೊರಲೆ, ಹಾರಕ ಇಂತಹ ಧಾನ್ಯಗಳ ಸೇವನೆಯಿಂದ ಗಟ್ಟಿಯಾಗುವ ಜತೆಗೆ ಕಾಯಿಲೆಗಳಿಂದ ದೂರವಿರಬಹುದಾಗಿದೆ. ಹಣ್ಣು, ಹಸಿ ತರಕಾರಿಗಳನ್ನು ಹೆಚ್ಚು ಬಳಕೆ ಮಾಡಬೇಕು ಎಂದು ತಿಳಿಸಿದರು. ಇದೇವೇಳೆ ಹಾರಕದ ಪಲಾವ್ ಮಾಡುವ ಪ್ರಾತ್ಯಕ್ಷಿಕೆ ತೋರಿಸಿದರು.

ತಾಲೂಕು ಯೋಜನಾಧಿಕಾರಿ ಟಿ.ಆರ್. ಮಂಜುಳಾ ಮಾತನಾಡಿ, ಸಿರಿಧಾನ್ಯಗಳು ಅಪೌಷ್ಟಿಕತೆಯ ವಿರುದ್ಧ ಹೋರಾಟದಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತವೆ. ಸಿದ್ಧ ಸಿರಿಧಾನ್ಯ ಅತ್ಯುತ್ತಮ ಆಯ್ಕೆಯಾಗಿದೆ. ದಿನನಿತ್ಯದ ಅಡುಗೆಯಲ್ಲಿ ಬಳಕೆ ಮಾಡುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ಇವುಗಳ ಬಳಕೆಯಿಂದ ಕೊಲೆಸ್ಟ್ರಾಲ್ ಪ್ರಮಾಣ ನಿಯಂತ್ರಣವಾಗುವ ಜತೆಗೆ ಹೃದಯಾಘಾತ ತಡೆಯುವಲ್ಲಿ ಸಿರಿಧಾನ್ಯ ಬಳಕೆ ಮಹತ್ವ ಪಡೆದಿದೆ ಎಂದು ಹೇಳಿದರು. ಕೇಂದ್ರದ ಸಿ. ನನ್ನಾಭಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಗುರು ಹುಸೇನ್‌ಬಾಷಾ, ಸೇವಾಪ್ರತಿನಿಧಿಗಳಾದ ಸುಮಾ, ಸಾವಿತ್ರಿ, ಕೇಂದ್ರದ ಸದಸ್ಯರು ಇದ್ದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಸರಸ್ವತಿ ಕಾರ್ಯಕ್ರಮ ನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

15 ದಿನದ ಹಿಂದೆ ಮದುವೆ ಆಗಿದ್ದ ಜೋಡಿ ಭೀಕರ ಅಪಘಾತಕ್ಕೆ ಬಲಿ
ಶ್ರೀಮಂತರು ಗ್ಯಾರಂಟಿಯಿಂದ ದೂರ ಇರಲಿ: ಎಂ.ಬಿ.ಪಾಟೀಲ್‌