ಸಿದ್ದರಾಮೇಶ್ವರರ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಿ

KannadaprabhaNewsNetwork |  
Published : Jan 15, 2026, 02:30 AM IST
14ಕೆಕೆಆರ್10:ಕುಕನೂರು ತಾಲೂಕಿನ ತಹಸಿಲ್ದಾರ್ ಕಚೇರಿಯಲ್ಲಿ  ಸಿದ್ದರಾಮೇಶ್ವರರ 853 ನೆಯ ಜಯಂತೋತ್ಸವ ಜರುಗಿತು.  | Kannada Prabha

ಸಾರಾಂಶ

12ನೇ ಶತಮಾನದ ಪ್ರಥಮ ಶ್ರೇಣಿಯ ವಚನಕಾರರಲ್ಲಿ ಸಿದ್ದರಾಮೇಶ್ವರರು ಒಬ್ಬರು

ಕುಕನೂರು: ಯೋಗಿ ಸಿದ್ದರಾಮೇಶ್ವರರಂತೆ ಆಗಬೇಕು ಎಂದು ಭೋವಿ ಸಮಾಜದ ಯುವ ಮುಖಂಡ ಮುತ್ತಣ್ಣ ಡಿ. ತಿರ್ಲಾಪುರ ಹೇಳಿದರು.

ತಾಲೂಕಿನ ತಹಸಿಲ್ದಾರ್ ಕಚೇರಿಯಲ್ಲಿ ಜರುಗಿದ ಸಿದ್ದರಾಮೇಶ್ವರರ 853 ನೆಯ ಜಯಂತ್ಯತ್ಸವ ಕಾರ್ಯಕ್ರಮದಲ್ಲಿ ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಯುವಕರು ದುಶ್ಚಟಗಳಿಗೆ ಬಲಿಯಾಗದೆ ಸಿದ್ದರಾಮೇಶ್ವರರ ಜೀವನದ ತತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅಂದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯವಾಗುತ್ತದೆ ಹಾಗೂ ಜಯಂತಿ ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ ಎಂದರು.

12ನೇ ಶತಮಾನದ ಪ್ರಥಮ ಶ್ರೇಣಿಯ ವಚನಕಾರರಲ್ಲಿ ಸಿದ್ದರಾಮೇಶ್ವರರು ಒಬ್ಬರು.ಇವರ ಜೀವನ ಚರಿತ್ರೆಗೆ ಸಂಬಂಧಿಸಿದ ಅನೇಕ ಆಧಾರ ವಚನ, ಕಾವ್ಯ ಶಾಸನ, ಐತಿಹ್ಯಗಳಲ್ಲಿ ದೊರೆಯುತ್ತವೆ ಎಂದರು.

ಭೋವಿ ಸಮಾಜದ ಹಿರಿಯ ಮುಖಂಡ ಹುಲಗಪ್ಪ, ಶೆಟ್ಟಪ್ಪ ತೊಂಡಿಹಾಳ, ಹನುಮಪ್ಪ, ಯಲ್ಲಪ್ಪ, ಹುಲುಗಪ್ಪ, ಮುತ್ತಣ್ಣ,ವೀರೇಶ್, ಅಡಿವೆಪ್ಪ, ಲಕ್ಷ್ಮಣ, ಯಮನೂರಪ್ಪ, ಮಂಜುನಾಥ, ವೀರೇಶ್, ದುರ್ಗಪ್ಪ, ತರುಣ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಲ್ಲಿ ಲಾಲ್‌ಬಾಗ್‌ ಮಾದರಿಯಲ್ಲಿ ಮತ್ತೆರಡು ಪಾರ್ಕ್‌ ನಿರ್ಮಾಣ: ಡಿ.ಕೆ.ಶಿವಕುಮಾರ್
ಸಂಕ್ರಾಂತಿ: ಇಂದು ಗವಿಗಂಗಾಧರನಿಗೆ ಸೂರ್ಯರಶ್ಮಿ ಸ್ಪರ್ಶ