ಮಾಚಿದೇವರ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

KannadaprabhaNewsNetwork |  
Published : Feb 02, 2024, 01:02 AM IST
ಮಡಿವಾಳ  ಮಾಚಿದೇವರು ಹಾಕಿಕೊಟ್ಟ ಮಾರ್ಗದರ್ಶನ ಹಾಗೂ ಸಂದೇಶವನ್ನು ಜೀವನದಲ್ಲಿ ಪ್ರತಿಯೊಬ್ಬರು ಅಳವಡಿಸಿ ಕೊಳ್ಳಬೇಕು‌‌  | Kannada Prabha

ಸಾರಾಂಶ

2ನೇ ಶತಮಾನದ ಮಹಾಪುರುಷ ಮಡಿವಾಳ ಮಾಚಿದೇವರು ಹಾಕಿಕೊಟ್ಟ ಮಾರ್ಗದರ್ಶನ ಹಾಗೂ ಸಂದೇಶವನ್ನು ಜೀವನದಲ್ಲಿ ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು‌‌ ಎಂದು ಶಾಸಕ‌ ಮಂಜುನಾಥ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಹನೂರು12ನೇ ಶತಮಾನದ ಮಹಾಪುರುಷ ಮಡಿವಾಳ ಮಾಚಿದೇವರು ಹಾಕಿಕೊಟ್ಟ ಮಾರ್ಗದರ್ಶನ ಹಾಗೂ ಸಂದೇಶವನ್ನು ಜೀವನದಲ್ಲಿ ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು‌‌ ಎಂದು ಶಾಸಕ‌ ಮಂಜುನಾಥ್ ತಿಳಿಸಿದರು. ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದ ಸಭಾಂಗಣದಲ್ಲಿ ಮಡಿವಾಳ‌ ಮಾಚಿದೇವರ ಜಯಂತಿ ಕಾರ್ಯಕ್ರಮದಲ್ಲಿ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ‌ ಮಾತನಾಡಿದರು. ಮಡಿವಾಳ ಮಾಚಿದೇವರು ಬದುಕಿನ ಸಾತ್ವಿಕತೆ ನೀಡಿ ಸತ್ಯ, ಶುದ್ಧ ಕಾಯಕ ಕೊಟ್ಟವರಾಗಿದ್ದಾರೆ. ಸಮಾಜದಲ್ಲಿ ಜಾತಿ ಮುಖ್ಯವಲ್ಲ ಜೀವನ ಮುಖ್ಯ ಎಂದು ತೋರಿಸಿಕೊಟ್ಟಿದ್ದಾರೆ. ಅಂತಹ ಮಹಾಪುರಷನ ಆದರ್ಶಗಳನ್ನು ಪ್ರತಿಯೊಬ್ಬರೂ‌ ಅಳವಡಿಸಿಕೊಳ್ಳಬೇಕು ಹಾಗೂ ಮೌಢ್ಯಗಳಿಂದ ದೀನರ ಶೋಷಣೆ ನಡೆಯುತ್ತಿದ್ದ ಕಾಲದಲ್ಲಿ ಮಾಚಿದೇವ ಜಾಗೃತಿಯ ಮೂಲಕ ಶೋಷಣೆ ತಡೆಗಟ್ಟಿದರು. ಕಷ್ಟಗಳನ್ನು ಸಹಿಸಿಯೂ ಬಡ ಜನರ ಉದ್ಧಾರಕ್ಕೆ ಮಾರ್ಗದರ್ಶಕರಾಗಿದ್ದರು ಎಂದರು. ಹನೂರು ಕ್ಷೇತ್ರದ ಸಮುದಾಯ ಏಳ್ಗೆಗೆ ಶ್ರಮಿಸಿ ಹನೂರು ಪಟ್ಟಣದಲ್ಲಿ‌ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ತರಲು ಮುಂದಾಗುತ್ತೇನೆ ಎಂದು ಭರವಸೆ ನೀಡಿದರು.ಮಡಿವಾಳ‌ ಸಮುದಾಯದ ತಾಲೂಕು ಅಧ್ಯಕ್ಷ ವಿಜಯ್ ಮಾತನಾಡಿ 2014 ರಿಂದಲೂ ನಮ್ಮ‌ ಮಡಿವಾಳ ಸಮುದಾಯವನ್ನು‌ ಪರಿಶಿಷ್ಟ ಜಾತಿಗೆ ಸೇರಿಸುವಂತೆ ಮನವಿಯ ಜೊತೆಗೆ ಸರ್ಕಾರ ಹಾಗೂ ಜನಪ್ರತಿನಿಧಿಗಳನ್ನು ಒತ್ತಾಯಿಸುತ್ತಿದ್ದು ಆದರೇ ಇಂದಿಗೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸುವಂತೆ ಹಾಗೂ ಹನೂರು ಪಟ್ಟಣದ ಕೇಂದ್ರ ಸ್ಥಾನದಲ್ಲಿ ಸಮುದಾಯ ಭವನಕ್ಕೆ, ಹಾಸ್ಟೆಲ್ ನಿರ್ಮಾಣಕ್ಕೆ ಮುಂದಾಗುವಂತೆ ಕೋರಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು, ಮಡಿವಾಳ ಮಾಚಿದೇವರ ಸಂಘದ ಕಾರ್ಯದರ್ಶಿ ಕೃಷ್ಣ, ಮುಖಂಡರಾದ ಮೋಹನ್,‌ ಪುಟ್ಟಣ್ಣ, ರಮೇಶಣ್ಣ, ನಂದೀಶ್, ಶಾಂತರಾಜು, ಮಾದೇಶ, ರಾಜಣ್ಣ. ಡಿ.ಆರ್. ಮಾದೇಶ, ಸುರೇಶ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ